ಎಎಸ್ಐ ಕೊಲೆ ಯತ್ನ: ಇಬ್ಬರ ಬಂಧನ
Team Udayavani, Jul 23, 2017, 8:25 AM IST
ಪಣಂಬೂರು: ಆರೋಪಿಗಳ ಪತ್ತೆಗೆ ತೆರಳಿದ್ದ ಎಎಸ್ಐ ಪುರಂದರ ಗೌಡ ಮತ್ತು ಹೆಡ್ ಕಾನ್ಸ್ಟೆಬಲ್ ಸತೀಶ್ ಅವರ ಮೇಲೆ ಕಾರು ಚಲಾಯಿಸಿ ಕೊಲೆಗೆ ಯತ್ನಿಸಿದ ಕಸಬ ಬೆಂಗ್ರೆಯ ಹ್ಯಾರಿಸ್ ಯಾನೆ ಚಂದು ಹ್ಯಾರಿಸ್
(26), ಮತ್ತು ಮೊಯಿದೀನ್ ಆದಿಲ್(20)ನನ್ನು ಪಣಂಬೂರು ಸಿಐ ರಫೀಕ್ ಹಾಗೂ ಸಿಬಂದಿ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ, ಬಜಪೆ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೊಲೆಯತ್ನ ಕೃತ್ಯಕ್ಕೆ ಬಳಸಿದ ಕಾರು, ಹಾಗೂ ಕದ್ದ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರ ರಾತ್ರಿ ಕುದುರೆಮುಖ ಕಂಪೆನಿ ಬಳಿ ಇರುವ ವೃತ್ತ ಸಮೀಪ ತಪಾಸಣೆ ನಿರತ ಪೊಲೀಸರನ್ನು ಕಂಡು ಸುರತ್ಕಲ್ ಕಡೆ ಬೈಕ್ನಲ್ಲಿದ್ದ ಹೋಗುತ್ತಿದ್ದ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಬಂಧಿ ಸಲಾಯಿತು. ಬಂಟ್ವಾಳ, ಮಂಗಳೂರು ನಗರ ಉತ್ತರ, ದಕ್ಷಿಣ, ಸುರತ್ಕಲ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣ ದಾಖಲಾಗಿದ್ದು 25,000 ರೂ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪಣಂಬೂರು 3, ಮಂಗಳೂರು ದಕ್ಷಿಣ 10, ಸುರತ್ಕಲ್ 2, ಬಕೆ 2, ಮಂಗಳೂರು ಉತ್ತರ 3 ಹೀಗೆ 20ಕ್ಕೂ ಮಿಕ್ಕಿ ಕೇಸು ದಾಖಲಾಗಿದ್ದು ಇದರಲ್ಲಿ 1 ತನಿಖೆ, 7 ಖುಲಾಸೆ, 1ರಲ್ಲಿ ಶಿಕ್ಷೆ, 11 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ತಲೆ ಮರೆಸಿಕೊಂಡ ಪರಿಣಾಮ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್