ಸುಗಮ ಸಂಚಾರ: ಇಂದಿನಿಂದ ಮನಪಾ- ಟ್ರಾಫಿಕ್‌ನವರಿಂದ ಜಂಟಿ ಸಮೀಕ್ಷೆ


Team Udayavani, Jul 26, 2017, 8:55 AM IST

sugama-sanchara.jpg

ಲಾಲ್‌ಬಾಗ್‌: ನಗರದ‌ ವಿವಿಧ ಭಾಗಗಳಲ್ಲಿ ಟ್ರಾಫಿಕ್‌ ಸಮಸ್ಯೆ ಬಹುವಾಗಿ ಕಾಡುತ್ತಿದ್ದು, ಇದನ್ನು  ಸುಗಮಗೊಳಿಸುವ ಸಂಬಂಧ ಮಹಾನಗರ ಪಾಲಿಕೆ ತಂಡ ಹಾಗೂ ನಗರ ಸಂಚಾರಿ ಪೊಲೀಸರ ತಂಡವು ಜು. 26ರಿಂದ ಜಂಟಿ ಸಮೀಕ್ಷೆ ನಡೆಸಲಿದೆ ಎಂದು ಮೇಯರ್‌ ಕವಿತಾ ಸನಿಲ್‌ ಹೇಳಿದರು.

ಪಾಲಿಕೆಯಲ್ಲಿ ಮಂಗಳವಾರ ನಡೆದ ಮೇಯರ್‌ ಫೋನ್‌ ಇನ್‌ ಕಾರ್ಯಕ್ರಮದಲ್ಲಿ   ಸಾರ್ವಜನಿಕರೊಬ್ಬರ ದೂರಿಗೆ ಪ್ರತಿಕ್ರಿಯಿಸಿದ ಅವರು,  ನಗರದ ರಸ್ತೆಯ ಇಕ್ಕೆಲಗಳಲ್ಲಿ, ಫ‌ುಟ್‌ ಪಾತ್‌ಗಳಲ್ಲಿ ಅನಧಿಕೃತ ಗೂಡಂಗಡಿಗಳು, ಮೊಬೈಲ್‌ ಕ್ಯಾಂಟೀನ್‌ಗಳು, ಅನಧಿಕೃತ ಪಾರ್ಕಿಂಗ್‌ನಿಂದಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಥಮ ಹಂತದಲ್ಲಿ ಪಿವಿಎಸ್‌ನಿಂದ ಸ್ಟೇಟ್‌ಬ್ಯಾಂಕ್‌ವರೆಗಿನ ರಸ್ತೆಗಳ ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಚಿಲಿಂಬಿ ನಿವಾಸಿ ಪೀಟರ್‌ ಕರೆ ಮಾಡಿ, ಚಿಲಿಂಬಿ 4ನೇ ಅಡ್ಡರಸ್ತೆಯಲ್ಲಿ ಇಂಟರ್‌ಲಾಕ್‌ ಹೋಗಿದ್ದು, ತೋಡಿನ ಕಲ್ಲು ಕೂಡ ಹಾಳಾಗಿದೆ. ರಸ್ತೆಯಲ್ಲಿ ಗುಂಡಿ ಬಿದ್ದಿದೆ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಮೇಯರ್‌, ಮಳೆಗಾಲ ಮುಗಿದ ತತ್‌ಕ್ಷಣವೇ ದುರಸ್ತಿ ಮಾಡಲಾಗುವುದು ಎಂದರು. 

ಸುಭಾಶ್‌ನಗರದಿಂದ ಪ್ರಭಾ ಎಂಬವರು ಕರೆ ಮಾಡಿ, ಈ ಭಾಗದ ಸುಮಾರು 25 ಮನೆಗಳಿಗೆ ಡ್ರೈನೇಜ್‌ ವ್ಯವಸ್ಥೆ ಇಲ್ಲ. 300 ಮೀಟರ್‌ ದೂರದಲ್ಲಿ ಡ್ರೈನೇಜ್‌ ಚೇಂಬರ್‌ ಇರುವುದರಿಂದ ಸಮಸ್ಯೆಯಾಗುತ್ತಿದೆ ಎಂದರು. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಲು ತಿಳಿಸಲಾಗುವುದು ಎಂದರು ಮೇಯರ್‌.

ಡಾ| ಅರುಣ್‌ ರಾವ್‌ ಕರೆ ಮಾಡಿ, ಲೈಟ್‌ಹೌಸ್‌ ಹಿಲ್‌ ರಸ್ತೆಯಲ್ಲಿ ಪದೇ ಪದೇ ಟ್ರಾಫಿಕ್‌ ಜಾಮ್‌ ಆಗುತ್ತಿದ್ದು, ಯುವಕರು ಅಲ್ಲಿನ ಫ‌ುಟ್‌ ಪಾತ್‌ ಮೇಲಿನಿಂದಲೇ ದ್ವಿಚಕ್ರ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಾರೆ ಎಂದರು. ಈ ಬಗ್ಗೆ ಟ್ರಾಫಿಕ್‌ ಪೊಲೀಸರಿಗೆ ತಿಳಿಸುವುದಾಗಿ ಮೇಯರ್‌ ಪ್ರತಿಕ್ರಿಯಿಸಿದರು. 

ರಸ್ತೆ ಹಂಪ್‌ ಅಗತ್ಯ
ಗಣಪತಿ ಹೈಸ್ಕೂಲ್‌ನ ಮಹೇಶ್‌ ಎಂಬವರು ಕರೆ ಮಾಡಿ, ಹೈಸ್ಕೂಲ್‌ನ ಎದುರು  ವಾಹನ ದಟ್ಟನೆ ಅಧಿಕವಾಗಿರುವ ಕಾರಣ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಬಿಡುವ ಹಾಗೂ ಪ್ರವೇಶಿಸುವ ಸಂದರ್ಭ ರಸ್ತೆ ದಾಟಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಅಲ್ಲಿ ಹಂಪ್‌ ಹಾಕಬೇಕು ಹಾಗೂ ಫ‌ುಟ್‌ಪಾತ್‌ ದುರಸ್ತಿ ಮಾಡಬೇಕು ಎಂದರು.ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮೇಯರ್‌ ನೀಡಿದರು. 

ಮುಖ್ಯ ರಸ್ತೆಯಲ್ಲಿ   ಡ್ರೈನೇಜ್‌ ನೀರು..!
ಪ್ರಶಾಂತ್‌ ಎಂಬವರು ಕರೆ ಮಾಡಿ, ಕದ್ರಿ ಕಂಬಳದ ಬಳಿ ಡ್ರೈನೇಜ್‌ ನೀರು ಮುಖ್ಯ ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ತುಂಬಾ ಸಮಸ್ಯೆಯಾಗುತ್ತಿದೆ ಎಂದು ದೂರು ನೀಡಿದರು.  

ಪಾಲಿಕೆ ಜಾಗ ಅತಿಕ್ರಮಣ!
ಲೋವರ್‌ ಬೆಂದೂರ್‌ವೆಲ್‌ನಿಂದ ಪ್ರಕಾಶ್‌ ಎಂಬವರು ಕರೆ ಮಾಡಿ, ಲೋವರ್‌ ಬೆಂದೂರ್‌ವೆಲ್‌ನಲ್ಲಿ ಸಾರ್ವಜನಿಕ ರಸ್ತೆಗೆ ಪಿಲ್ಲರ್‌ ಹಾಕಿ ಅತಿಕ್ರಮಿಸಿದ್ದಾರೆ ಎಂದರು. ಮೇಯರ್‌ ಉತ್ತರಿಸಿ, ಅದು ಹೌದಾದರೆ ತೆರವು ಮಾಡಲಾಗುತ್ತದೆ. ನಾನೇ ಖುದ್ದಾಗಿ ಸ್ಥಳ ಸಮೀಕ್ಷೆ ನಡೆಸುವುದಾಗಿ ತಿಳಿಸಿದರು.

ವಾಟ್ಸಪ್‌ ಮೂಲಕ ಸಮಸ್ಯೆ ಅರಿಯಿರಿ !
ಬೊಕ್ಕಪಟ್ಣದ ಸಾರ್ವಜನಿಕರೊಬ್ಬರು ಕರೆ ಮಾಡಿ, ಬೀದಿ ದೀಪಗಳನ್ನು ಬೆಳಗ್ಗೆ 5-6 ಗಂಟೆಗೆ ಆಫ್‌ ಮಾಡಲಾಗುತ್ತಿದೆ. ಆದರೆ ಆ ಸಮಯ ಕತ್ತಲಿರುವುದರಿಂದ ವಾಕಿಂಗ್‌ ಮಾಡುವವರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸರಿಪಡಿಸಿ ಎಂದರು. ಜತೆಗೆ ನಗರದ ಸಮಸ್ಯೆಗಳ ಬಗ್ಗೆ ಪಾಲಿಕೆ ಗಮನಕ್ಕೆ ತರುವ ಉದ್ದೇಶದಿಂದ ವಾಟ್ಸಪ್‌ ವ್ಯವಸ್ಥೆ ಮಾಡುವುದು ಉತ್ತಮ ಹಾಗೂ ಅಳಕೆಯಲ್ಲಿ ಅರ್ಧದಲ್ಲಿ ಬಿಟ್ಟಿರುವ ರಸ್ತೆ ಕೆಲಸವನ್ನು ಪೂರ್ಣಗೊಳಿಸಿ ಎಂದು ಮನವಿ ಮಾಡಿದರು. ಮೇಯರ್‌ ಉತ್ತರಿಸಿ, ಬೀದಿದೀಪದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ವಾಟ್ಸಪ್‌ ಬಗ್ಗೆ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿ ಹೆಜ್ಜೆ ಇರಿಸಲಾಗುವುದು ಹಾಗೂ ಅಳಕೆಯಲ್ಲಿ  ಸೇತುವೆ ವಿನ್ಯಾಸದಲ್ಲಿ  ಸ್ವಲ್ಪ ಬದಲಾವಣೆ ಇದೆ. ಆದಷ್ಟು  ಬೇಗ ಪೂರ್ಣಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.