ಭವಂತಿಸ್ಟ್ರೀಟ್‌ ಅಂಗಡಿಗಳಿಗೆ ನುಗ್ಗಿದ ಮಳೆನೀರು !


Team Udayavani, Aug 20, 2017, 8:15 AM IST

male.jpg

ಮಹಾನಗರ: ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಅಂಗಡಿ ಮುಂಗಟ್ಟುಗಳು-ಮನೆಗಳಿಗೆ ನೀರು ನುಗ್ಗಿದ್ದನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಮಂಗಳೂರಿನಲ್ಲಿ ಸಾಧಾರಣ ಮಳೆಗೇ ನೀರು ಅಂಗಡಿಗಳಿಗೆ ನುಗ್ಗಿದೆ. ಶುಕ್ರವಾರ ರಾತ್ರಿ ಸುರಿದ ಮಳೆಗೆ ನಗರದ ಭವಂತಿಸ್ಟ್ರೀಟ್‌ನಲ್ಲಿ 4 ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. 

ಪಾಲಿಕೆಯ ಅವ್ಯವಸ್ಥೆಯ ಕಾಮಗಾರಿಯೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಕಾಂಕ್ರೀಟ್‌ ರಸ್ತೆಯ ಕೆಲಸವನ್ನು ಅರ್ಧಕ್ಕೆ ಬಿಟ್ಟ ಪರಿಣಾಮ ನೀರು ನುಗ್ಗಿದೆ ಎಂದು ಅಂಗಡಿ ಮಾಲಕರು ಆರೋಪಿಸಿದರೆ, ಸ್ಥಳೀಯ ಅಂಗಡಿಯವರು ಜಾಗ ಬಿಟ್ಟುಕೊಡದ ಪರಿಣಾಮ ಚರಂಡಿ ಮಾಡಲಾಗದೆ ಅಂಗಡಿಗಳಿಗೆ ನೀರು ನುಗ್ಗಿದೆ ಎಂದು ಪಾಲಿಕೆ ಹೇಳುತ್ತಿದೆ. ಪ್ರಸ್ತುತ ಅಂಗಡಿಯವರು ಮತ್ತೆ ಮಳೆನೀರು ನುಗ್ಗದಂತೆ ತಾತ್ಕಾಲಿಕ ವ್ಯವಸ್ಥೆಯೊಂದನ್ನು ಮಾಡಿದ್ದಾರೆ. ಆದರೆ ಜೋರಾಗಿ ಮಳೆ ಬಂದರೆ ಮತ್ತೆ ನೀರು ನುಗ್ಗದು ಎಂದು ಹೇಳುವಂತಿಲ್ಲ. 

ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಬದಿಯಲ್ಲಿ ಮಣ್ಣು ರಾಶಿ ಹಾಕಲಾಗಿತ್ತು. ಹೀಗಾಗಿ ಮಳೆನೀರು ಅಂಗಡಿಯೊಳಗೆ ನುಗ್ಗಿರಲಿಲ್ಲ. ಆದರೆ ಶುಕ್ರವಾರ ರಾತ್ರಿ ಒಮ್ಮೆಲೆ ನೀರು ಬಂದ ಪರಿಣಾಮ ಮಣ್ಣು ಕೊಚ್ಚಿ ಹೋಗಿ ನೀರು ಪೂರ್ತಿ ಅಂಗಡಿಗಳಿಗೆ ನುಗ್ಗಿದೆ. ಇಲ್ಲಿನ ಅರುಣ್‌ ಜುವೆಲ್ಲರ್‌, ಜ್ಯೋತಿ ಜ್ಯುವೆಲ್ಲರ್, ಗುರುಪ್ರಸಾದ್‌ ಜ್ಯುವೆಲ್ಲರ್‌ ಹಾಗೂ ಜ್ಯೂಸ್‌ ಸೆಂಟರ್‌ಗಳಿಗೆ ನೀರು ನುಗ್ಗಿದೆ. ಜತೆಗೆ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. 

ಅರ್ಧಂಬರ್ಧ ಕಾಮಗಾರಿ
ಭವಂತಿಸೀrÅಟ್‌ನಲ್ಲಿ ಜಾಗದ ವಿವಾದ ಮುಗಿಯದೇ ಕಾಮಗಾರಿ ಆರಂಭಿಸಿದ ಹಿನ್ನೆಲೆಯಲ್ಲಿ ಪ್ರಸ್ತುತ ಕಾಂಕ್ರೀಟ್‌ ಕಾಮಗಾರಿಯನ್ನು ಅರ್ಧಕ್ಕೆ ಬಿಡಲಾಗಿದೆ. ಜತೆಗೆ ಹಿಂದೆ ಇದ್ದ ಡಾಮಾರು ರಸ್ತೆಗಿಂತ ಪ್ರಸ್ತುತ ಕಾಂಕ್ರೀಟ್‌ ರಸ್ತೆ ಎತ್ತರವಾಗಿದೆ. ಹೀಗಾಗಿ ಅಂಗಡಿ ಮುಂಗಟ್ಟುಗಳು ತಗ್ಗಿನಲ್ಲಿದ್ದು, ರಸ್ತೆಯ ನೀರು ಒಳನುಗ್ಗುತ್ತಿದೆ. 

ಅಂಗಡಿ ಮಾಲಕರು ಹಾಗೂ ಪಾಲಿಕೆಯವರ ಪರಸ್ಪರ ಪ್ರತ್ಯಾರೋಪ ಮಾಡುತ್ತಿರುವ ಪರಿಣಾಮ ಪ್ರಸ್ತುತ ಚರಂಡಿ ಕಾಮಗಾರಿ ನಡೆಸಲು ಜಾಗವಿಲ್ಲ. ಹೀಗಾಗಿ ಮಳೆನೀರು ಹೋಗಲು ಜಾಗವಿಲ್ಲ. ಸ್ಥಳೀಯ ಅಂಗಡಿ ಮಾಲಕರು ಜಾಗ ಬಿಟ್ಟು ಕೊಡದ ಪರಿಣಾಮ ರಸ್ತೆಯೂ ಕಿರಿದಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. 

ಬಿಟ್ಟು ಕೊಡದೆ ಕೆಲಸ ಅಸಾಧ್ಯ
ಸ್ಥಳೀಯ ಅಂಗಡಿಯವರು ಜಾಗ ಬಿಟ್ಟುಕೊಡದ ಪರಿಣಾಮ ನೀರು ನುಗ್ಗುತ್ತಿದೆ. ಪ್ರಸ್ತುತ ಈ ರಸ್ತೆಯಲ್ಲಿ ಚರಂಡಿ ಮಾಡಲು ಜಾಗವಿಲ್ಲ. ಜತೆಗೆ ಅಂಗಡಿಯವರೇ ಮಣ್ಣನ್ನು ತಂದು ರಾಶಿ ಹಾಕಿದ್ದರು. ಜಾಗ ಬಿಟ್ಟು ಕೊಡದೆ ನಾವು ಏನು ಮಾಡುವಂತಿಲ್ಲ. ಈಗಾಗಲೇ ಪಾಲಿಕೆಯ ವತಿಯಿಂದ ಜಾಗ ಬಿಟ್ಟುಕೊಡಲು ತಿಳಿಸಲಾಗಿದೆ. 
– ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್‌

ನೀರು ಹೋಗಲು ವ್ಯವಸ್ಥೆ ಮಾಡಲಿ
ಜಾಗದ ವಿವಾದ ಇರುವಾಗಲೇ ಪಾಲಿಕೆಯವರು ಕಾಮಗಾರಿ ಆರಂಭಿಸಿದ ಪರಿಣಾಮ ಈ ರೀತಿ ಅಂಗಡಿಗಳಿಗೆ ನೀರು ನುಗ್ಗಿದೆ. ಪ್ರಸ್ತುತ ನಾವು ನೀರು ಬರದಂತೆ ನಾವು ತಾತ್ಕಾಲಿಕ ವ್ಯವಸ್ಥೆ ಮಾಡಿದ್ದೇವೆ. ಆದರೆ ಜೋರು ಮಳೆಬಂದರೆ ಮತ್ತೆ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಅರ್ಧದಲ್ಲಿ ಬಿಟ್ಟಿರುವ ಕಾಮಗಾರಿಯನ್ನು ಪೂರ್ತಿಗೊಳಿಸಿ ನೀರು ಹೋಗಲು ವ್ಯವಸ್ಥೆ ಮಾಡಬೇಕಿದೆ.
– ಅನಿಲ್‌ ಶೇಟ್‌, ಮಾಲಕರು, ಅರುಣ್‌ ಜ್ಯುವೆಲ್ಲರ್

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.