ತಲಪಾಡಿ : ಸಂಭ್ರಮದ ಮೊಸರು ಕುಡಿಕೆ ಉತ್ಸವ
Team Udayavani, Aug 20, 2017, 8:35 AM IST
ತಲಪಾಡಿ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆಧ್ಯಾತ್ಮಿಕ ಜೀವನಕ್ಕೂ ಮಹತ್ವವನ್ನು ನೀಡಿ, ಸಂಸ್ಕಾರಯುತ ಜೀವನವನ್ನು ತಮ್ಮ ದಾಗಿಸಿಕೊಳ್ಳಬೇಕು ಎಂದು ಪ್ರೊ| ಎಂ.ಬಿ. ಪುರಾಣಿಕ್ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಲಾದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಕಿವಿಮಾತು ಹೇಳಿದರು.
ಮುಖ್ಯ ಅತಿಥಿ ಸೀತಾರಾಮ್ ಭಟ್ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳ ಬೇಕೆಂದು ಹೇಳಿದರು. ಅವರು ಮಡಕೆ ಒಡೆಯುವ ಮೂಲಕ ವಿಟ್ಲ ಪಿಂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿನಿಯರಿಂದ ನಾಸಿಕ್ ಬ್ಯಾಂಡ್ ಮತ್ತು ವಿದ್ಯಾರ್ಥಿ ಗಳಿಂದ ಹುಲಿವೇಷ ಕುಣಿತವು ಮೆರವಣಿಗೆಗೆ ಶೋಭೆ ನೀಡಿತು. ಕೃಷ್ಣ ಮತ್ತು ರಾಧೆಯ ವೇಷ ಧರಿಸಿದ ಚಿಣ್ಣರು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳಿಂದ ಕೃಷ್ಣನ ಜೀವನದ ಕುರಿತಾದ ಭಾಷಣ, ಕೃಷ್ಣನ ಜನ್ಮವೃತ್ತಾಂತವನ್ನು ತಿಳಿಸುವ ನೃತ್ಯ ಮತ್ತು ಕೃಷ್ಣನ ಪೂಜೆ ಮತ್ತು ಭಜನ ಕಾರ್ಯಕ್ರಮಗಳು ನಡೆದವು.
ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮಗೆ ನಿಯೋಜಿಸಿದ್ದ ಅಟ್ಟಣಿಗೆಯಲ್ಲಿ ಮಾನವ ಪಿರಮಿಡ್ಗಳನ್ನು ರಚಿಸಿ ಜೋಡಿಸಲ್ಪಟ್ಟ ಮಡಕೆಗಳನ್ನು ಒಡೆದು ಸಂಭ್ರಮೋಲ್ಲಾಸದಿಂದ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುನಂದಾ ಪುರಾಣಿಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ವಿN°àಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಜಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ