ಡಿ.17-23: ಮಂಗಳೂರಿನಲ್ಲಿ ‘ಜಾಂಬೋರೇಟ್‌’


Team Udayavani, Aug 23, 2017, 9:05 AM IST

Scout-Rai-22-8.jpg

ಮಂಗಳೂರು: ಸ್ಕೌಟಿಂಗ್‌ ಮತ್ತು ಗೈಡಿಂಗ್‌ನಲ್ಲಿ ರಾಜ್ಯದಲ್ಲಿಯೇ ಅತ್ಯಂತ ಕ್ರೀಯಾಶೀಲ ಹಾಗೂ ಮುಂಚೂಣಿಯಲ್ಲಿರುವ ದ.ಕ. ಜಿಲ್ಲಾ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಆಶ್ರಯದಲ್ಲಿ ಡಿ.17ರಿಂದ 23ರ ವರೆಗೆ ರಾಜ್ಯಮಟ್ಟದ ‘ಜಾಂಬೋರೇಟ್‌’ ಸಮಾವೇಶ ಮಂಗಳೂರಿನ ಕೂಳೂರಿನಲ್ಲಿ ಆಯೋಜಿಸಲಾಗಿದೆ. ಸಮಾವೇಶದ ಕುರಿತಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.

ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯಸ್ಥರಾದ ಪಿ.ಜಿ.ಆರ್‌. ಸಿಂಧ್ಯಾ ಮಾತನಾಡಿ, ಸಮಾವೇಶಕ್ಕೆ ಪೂರಕವಾಗಿ ವಿವಿಧ ಸಮಿತಿಗಳನ್ನು ರಚಿಸಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ದೇಶದ ವಿವಿಧ ರಾಜ್ಯಗಳಿಂದ ಮಾತ್ರವಲ್ಲದೆ ಶ್ರೀಲಂಕಾ, ಬಾಂಗ್ಲಾದೇಶದಿಂದಲೂ ತಲಾ ಒಂದು ತಂಡ ಭಾಗವಹಿಸುವಂತೆ ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ. ಅದಕ್ಕಾಗಿ ಒಂದು ವಾರ ಕಾಲ ಸಮಾವೇಶದಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 1,200ರಷ್ಟು ಟೆಂಟ್‌ಗಳ ವ್ಯವಸ್ಥೆ, 1000ದಷ್ಟು ಶೌಚಾಲಯಗಳ ವ್ಯವಸ್ಥೆ, ನೀರು, ಸಾರಿಗೆ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಅವರು ಸಚಿವರನ್ನು ಆಗ್ರಹಿಸಿದರು. 

ಸಮಾವೇಶದಲ್ಲಿ ಭಾಗವಹಿಸುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ತಾವೇ ತಮ್ಮ ಆಹಾರವನ್ನು ತಯಾರಿಸಿಕೊಳ್ಳಲಿದ್ದು, ಅದಕ್ಕಾಗಿ ಸೂಕ್ತ ಅಡುಗೆ ಕೋಣೆಯ ವ್ಯವಸ್ಥೆಯನ್ನು ಸಮಾವೇಶ ಸ್ಥಳದಲ್ಲಿ ಕಲ್ಪಿಸಬೇಕಿದೆ. ಅಡುಗೆ ಅನಿಲ, ಆಹಾರ ಸಾಮಗ್ರಿಗಳೊಂದಿಗೆ 33 ಅಡುಗೆ ಕೋಣೆಗಳು ಹಾಗೂ ಒಂದು ಮಾಸ್ಟರ್‌ ಅಡುಗೆ ಕೋಣೆಯ ವ್ಯವಸ್ಥೆಯನ್ನು ಒದಗಿಸಬೇಕಿದೆ ಎಂದು ಅವರು ತಿಳಿಸಿದರು.

ಕೂಳೂರುವಿನ 100 ಎಕರೆ ಜಾಗದಲ್ಲಿ ಸಮಾವೇಶ ದ.ಕ. ಜಿಲ್ಲಾ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಆಯುಕ್ತರಾದ ಎನ್‌. ಜಿ. ಮೋಹನ್‌ ಮಾತನಾಡಿ, 27 ವರ್ಷಗಳ ಬಳಿಕ ರಾಜ್ಯಮಟ್ಟದ ಜಾಂಬೋರೇಟ್‌ ಸಮಾವೇಶವನ್ನು ದ.ಕ. ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ನಗರದ ಕೂಳೂರಿನ 100 ಎಕರೆ ಜಾಗದಲ್ಲಿ ಸಮಾವೇಶವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಶಾಸಕ ಜೆ.ಆರ್‌.ಲೋಬೊ, ಮೇಯರ್‌ ಕವಿತಾ ಸನಿಲ್, ಜಿಲ್ಲಾಧಿಕಾರಿ ಡಾ| ಕೆ.ಜಿ.ಜಗದೀಶ್‌, ಅಪರ ಜಿಲ್ಲಾಧಿಕಾರಿ ಕುಮಾರ್‌ ಉಪಸ್ಥಿತರಿದ್ದರು. 

ಸಕಲ ತಯಾರಿಗೆ ಸಚಿವ ರೈ ಸೂಚನೆ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಟುವಟಿಕೆಗಳು ಉತ್ತಮವಾಗಿದ್ದು, ಜಾಂಬೋರೇಟ್‌ ಸಮಾವೇಶ ನಡೆಸಲು ಜಿಲ್ಲೆಗೆ 27 ವರ್ಷಗಳ ಬಳಿಕ ಅವಕಾಶ ದೊರಕಿದೆ. ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸಬೇಕು. ಈ ಕುರಿತಂತೆ ಶೀಘ್ರದಲ್ಲಿ ಸಮಿತಿ ರಚಿಸಿ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.