ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗೆ ತೀವ್ರ ಗಾಯ
Team Udayavani, Sep 24, 2017, 2:15 PM IST
ಸುರತ್ಕಲ್: ಕೊಟ್ಟಾರ ಚೌಕಿ ಬಳಿ ಬಸ್ನಿಂದ ಇಳಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ರಸ್ತೆಗೆ ಬಿದ್ದ ವಿದ್ಯಾರ್ಥಿಯೊಬ್ಬನನ್ನು ಆಸ್ಪತ್ರೆಗೆ ಸೇರಿಸದೆ ದಾರಿ ಮಧ್ಯೆಯೇ ಬಸ್ ಸಿಬಂದಿ ಬಿಟ್ಟು ಹೋದ ಘಟನೆ ಸೆ. 21ರಂದು ಸಂಭವಿಸಿದೆ.
ಚಿನ್ಮಯ ಶರ್ಮ (18) ಬಸ್ಸಿನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿ. ಮಾಲೇಮಾರ್ – ಕೊಟ್ಟಾರಚೌಕಿ ನಡುವೆ ಸಂಚರಿಸುವ ಖಾಸಗಿ ಬಸ್ ಏರಿದ್ದ ಚಿನ್ಮಯ ಕೊಟ್ಟಾರ ಚೌಕಿಯತ್ತ ಬಸ್ ಸಾಗುತ್ತಿದ್ದಂತೆ ಬಸ್ ಮಂಗಳೂರು ನಗರದತ್ತ ಹೋಗುತ್ತಿಲ್ಲ ಎಂದ ತಿಳಿದು ಇಳಿಯುವ ಸಂದರ್ಭ ಅನಿರೀಕ್ಷಿತವಾಗಿ ಬಿದ್ದು ಗಾಯಗೊಂಡಿದ್ದರು. ಆದರೆ ಸಿಬಂದಿ ಕನಿಷ್ಠ ಮಾನವೀಯತೆಯನ್ನೂ ತೋರದೆ ಗಾಯಾಳುವನ್ನು ಕೆಟ್ಟ ಶಬ್ದಗಳಲ್ಲಿ ನಿಂದಿಸಿ ರಸ್ತೆಯಲ್ಲೇ ಬಿಟ್ಟು ತೆರಳಿದ್ದರು ಎನ್ನಲಾಗಿದೆ. ವಿದ್ಯಾರ್ಥಿಯ ಗಲ್ಲಕ್ಕೆ ತೀವ್ರವಾಗಿ ಏಟು ಬಿದ್ದಿದ್ದು ಎರಡು ಕಡೆ ಮೂಳೆ ಮುರಿತ ಸಂಭವಿಸಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಉತ್ತರ ಸಂಚಾರ ಪೊಲೀಸರು ಬಸ್ ಚಾಲಕ, ನಿರ್ವಾಹಕನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ