ಪರಿಸರ  ಮಂಗಳೂರು ಯುವಕರಿಂದ ‘ಹಸಿರು ಕ್ರಾಂತಿ’ ಸಂಕಲ್ಪ


Team Udayavani, Sep 24, 2017, 4:42 PM IST

24Mng.jpg

ಮಹಾನಗರ : ಮರಗಿಡಗಳ ಮಾರಣಹೋಮದಿಂದಾಗಿ ಪ್ರಾಕೃತಿಕ ವೈಪರೀತ್ಯ ಪದೇಪದೇ ಘಟಿಸುತ್ತಿರುವುದಕ್ಕೆ ಪರಿಹಾರ ರೂಪದಲ್ಲಿ ಹಸಿರಿನ ಅಭಿವೃದ್ಧಿಗೆ ಮಂಗಳೂರಿನ ಯುವಕರ ತಂಡವೊಂದು ಮುಂದಾಗಿದೆ. ಸುರತ್ಕಲ್‌ನಿಂದ ಬಿ.ಸಿ.ರೋಡ್‌ ತನಕ ಮೂರು ವರ್ಷಗಳಲ್ಲಿ ಸುಮಾರು 10,000 ಗಿಡಗಳನ್ನು ನೆಡುವ ಮೂಲಕ ಸುಂದರ ಮತ್ತು ಸ್ವಚ್ಛ  ಪರಿಸರದೊಂದಿಗೆ ‘ಹಸಿರು ಕ್ರಾಂತಿ’ಯ ಸಂಕಲ್ಪ ತೊಟ್ಟಿದ್ದಾರೆ.

ಮೂರು ತಿಂಗಳ ಹಿಂದಷ್ಟೇ ಆರಂಭವಾದ ಗ್ರೀನ್‌ ಓಝೋನ್‌ ಚಾರಿಟೆಬಲ್‌ ಟ್ರಸ್ಟ್‌ ಎಂಬ ಯುವಕರ ಸಂಘಟನೆ ಇಂತಹ ಸತ್ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಹೆಚ್ಚುತ್ತಿರುವ ಸೂರ್ಯನ ಶಾಖ, ಕಡಿಮೆಯಾಗುತ್ತಿರುವ ಮಳೆ, ಹವಾ ಮಾನದಲ್ಲಿನ ಏರುಪೇರು ಮುಂತಾದ ಕಾರಣಗಳಿಂದಾಗಿ ಮನುಷ್ಯ ಸಹಿತ ಸಮಸ್ತ ಜೀವಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಆಗುತ್ತಿದೆ. ಮರಗಳ ಮಾರಣಹೋಮ, ಮರ ಕಡಿದರೂ ಬದಲಿಯಾಗಿ ಬೇರೆ ಸಸಿ ನೆಟ್ಟು ಪೋಷಣೆ ಮಾಡದಿರುವುದು ಪ್ರಾಕೃತಿಕ ವೈಪರೀತ್ಯಗಳಿಗೆ ಕಾರಣವಾಗುತ್ತಿವೆ. ಹಸಿರು ಮರೆಯಾಗುತ್ತಿರುವ ಈ ಸಂದರ್ಭ ಭೂಮಿ ಮತ್ತೆ ಹಸಿರಿನಿಂದ ಕಂಗೊಳಿಸುವಂತೆ ಮಾಡುವಲ್ಲಿ ಅಳಿಲು ಸೇವೆ ನೀಡುವುದು ಟ್ರಸ್ಟ್‌ನ ಉದ್ದೇಶ.

ಕರಾವಳಿಗೆ ಹೊಂದಿಕೆಯಾಗುವ ಗಿಡ
ಸುರತ್ಕಲ್‌ನಿಂದ ಬಿ.ಸಿ. ರೋಡ್‌ ತನಕ ಮಾರ್ಗದ ಬದಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಯಾಗದ ರೀತಿಯಲ್ಲಿ ಬೃಹತ್‌ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದು, ಅರಣ್ಯ ಇಲಾಖೆಯವರೂ ವಿವಿಧ ರೀತಿಯ ಗಿಡಗಳನ್ನು ನೀಡಿ ಸೂಕ್ತ ಸ್ಪಂದನೆ ನೀಡಿದ್ದಾರೆ. ಕದಂಬ, ಕಕ್ಕೆ, ಹೊಳೆ ದಾಸವಾಳ ಮುಂತಾದ ಕರಾವಳಿ ಪ್ರದೇಶಕ್ಕೆ ಹೊಂದಿಕೆಯಾಗುವ ಮತ್ತು ಶುದ್ಧ ಆಮ್ಲಜನಕ ಉತ್ಪತ್ತಿಮಾಡುವ ಗಿಡಗಳನ್ನು ನೀಡಿದ್ದಾರೆ ಎಂದು ಟ್ರಸ್ಟ್‌ ಅಧ್ಯಕ್ಷ ರಂಜಿತ್‌ ಮರೋಳಿ ‘ಉದಯವಾಣಿ-ಸುದಿನ’ಕ್ಕೆ ತಿಳಿಸಿದ್ದಾರೆ. 

ದಾನಿಗಳಿಂದ ನೀರು ಸೌಲಭ್ಯ
ಬೇಸಿಗೆ ಕಾಲದಲ್ಲಿ ಪ್ರತಿ ಗಿಡಕ್ಕೆ ಪ್ರತಿದಿನ ಕನಿಷ್ಠ ಒಂದು ಲೀಟರ್‌ ನೀರು ಬೇಕಾಗಬಹುದು. ಇದಕ್ಕಾಗಿ ದಾನಿಗಳೂ ಮುಂದೆ ಬಂದಿದ್ದು, ಗಿಡಗಳಿಗೆ ನೀರುಣಿಸುವ ಭರವಸೆ ನೀಡಿದ್ದಾರೆ. ಅಲ್ಲದೆ ಇತರೆಡೆಗಳಲ್ಲಿ ಟ್ರಸ್ಟ್‌ ಸದಸ್ಯರೇ ಗಿಡಗಳಿಗೆ ಪ್ರತಿ ದಿನ ನೀರುಣಿಸಲಿದ್ದಾರೆ.

50 ಯುವಕರ ಉತ್ಸಾಹ
‘ಮೂರು ವರ್ಷಗಳಲ್ಲಿ ಒಟ್ಟು 3,000 ಗಿಡಗಳನ್ನು ನೆಡುವುದಾಗಿ ಯೋಜಿಸಲಾಗಿತ್ತು. ಆದರೆ ಯುವಕರ ತಂಡ ಹೆಚ್ಚು ಉತ್ಸುಕವಾಗಿರುವ ಹಿನ್ನೆಲೆಯಲ್ಲಿ ಗುರಿಯನ್ನು 10,000ಕ್ಕೇರಿಸಲಾಗಿದೆ. ಟ್ರಸ್ಟ್‌ 3 ತಿಂಗಳ ಹಿಂದಷ್ಟೇ ರಚನೆಯಾಗಿದ್ದು, ಸುಮಾರು 50 ಯುವಕರು ಸದಸ್ಯರಾಗಿದ್ದಾರೆ. ಸದ್ಯಕ್ಕೆ ಟ್ರಸ್ಟ್‌ ಸದಸ್ಯರೇ ಗಿಡಗಳನ್ನು ನೆಡಲಿದ್ದೇವೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿಯೂ ಹಸಿರು ಮತ್ತು ಸ್ವಚ್ಛ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ, ಈ ಕಾರ್ಯಕ್ಕೆ ಅವರನ್ನೂ ಬಳಸಿಕೊಳ್ಳುವ ಬಗ್ಗೆ ಚಿಂತಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವುದರೊಂದಿಗೆ ಸ್ವಚ್ಛತಾ ಕಾರ್ಯವನ್ನೂ ಕೈಗೆತ್ತಿಕೊಳ್ಳಲಾಗುವುದು’ ಎನ್ನುತ್ತಾರೆ ರಂಜಿತ್‌ ಮರೋಳಿ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.