ಡ್ರೈನೇಜ್‌ ಗುಂಡಿಗೆ ಕಾರ್ಮಿಕರನ್ನು ಇಳಿಸಿ ಶುಚಿ :ಸಿಪಿಐಎಂ ಪ್ರತಿಭಟನೆ


Team Udayavani, Oct 22, 2017, 11:43 AM IST

22-Mng–7.jpg

ಮಹಾನಗರ: ಮನಪಾ ವ್ಯಾಪ್ತಿಯಲ್ಲಿ ವ್ಯಾಪಕಗೊಂಡಿರುವ ಡ್ರೈನೇಜ್‌ ಅವ್ಯವಸ್ಥೆಯನ್ನು ಸರಿಪಡಿಸುವ ನೆಪದಲ್ಲಿ ಡ್ರೈನೇಜ್‌ನ ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿದ ಘಟನೆಯನ್ನು ವಿರೋಧಿಸಿ ಶನಿವಾರ ಸಿಪಿಐಎಂ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ಕುಮಾರ್‌ ಬಜಾಲ್‌ ಮಾತನಾಡಿ, ಕಾರ್ಮಿಕರನ್ನು ಮ್ಯಾನ್‌ಹೋಲ್‌ಗ‌ಳಿಗೆ ಇಳಿಸಿ ದುಡಿಸಬಾರದೆಂಬ ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನವಿದ್ದರೂ ಇಂದು ಅವುಗಳನ್ನೆಲ್ಲ ಗಾಳಿಗೆ ತೂರಲಾಗಿದೆ. 2 ದಿನಗಳಲ್ಲಿ 2 ಘಟನೆಗಳು ನಗರದ ಹೃದಯಭಾಗದಲ್ಲಿ ನಡೆದಿದ್ದರೂ, ಮೇಯರ್‌ ಹಾಗೂ ಕಮೀಷನರ್‌ ಉದ್ಧಟತನದಿಂದ ವರ್ತಿಸಿರುವುದು ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದರು.

ಕ್ರಮ ಜರಗಿಸಲು ಆಗ್ರಹ
ಈಗಾಗಲೇ ಮಂಗಳೂರು ನಗರಕ್ಕೆ ಡ್ರೈನೇಜ್‌ ವ್ಯವಸ್ಥೆಯ ಹೆಸರಿನಲ್ಲಿ ಕೋಟ್ಯಂತರ ರೂ. ಹಣವನ್ನು ಎಡಿಬಿಯಿಂದ ಸಾಲ ತಂದು 15 ವರ್ಷಗಳು ಕಳೆದರೂ ಇಂದಿನವರೆಗೂ ಯಾವುದೇ ವ್ಯವಸ್ಥೆಯಾಗಿಲ್ಲ. ಈಗ ಮತ್ತೆ ಡ್ರೈನೇಜ್‌ ದುರಸ್ತಿಗಾಗಿ ಅಮೃತ್‌ ಯೋಜನೆಯಿಂದ ಸಾಲ ತರಲಾಗಿದೆ. ಒಟ್ಟಿನಲ್ಲಿ ಡ್ರೈನೇಜ್‌ ಹೆಸರಿನಲ್ಲಿ ಭಾರೀ ಹಗರಣವೊಂದು ನಡೆದಿದ್ದು ಕೋಟ್ಯಂತರ ರೂ. ಹಣವನ್ನು ಗುಳುಂ ಮಾಡಲಾಗಿದೆ. ಆದರೆ ಅದರ ದುರಸ್ತಿಗಾಗಿ ಇಂದಿಗೂ ಕಾರ್ಮಿಕರನ್ನು ಬಳಸುತ್ತಿರುವುದು ತೀರಾ ಖಂಡನೀಯ. ಮೇಯರ್‌ ಕಮೀಷನರ್‌ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದಲ್ಲಿ ನಗರದಾದ್ಯಂತ ಜನಾಂದೋಲನ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ಸದಸ್ಯರಾದ ಯೋಗೀಶ್‌ ಜಪ್ಪಿನಮೊಗರು, ಡಿಎಸ್‌ಎಸ್‌ನ ರಾಜ್ಯ ನಾಯಕರಾದ ಎಂ. ದೇವದಾಸ್‌, ಡಿವೈಎಫ್‌ಐನ ಜಿಲ್ಲಾ ನಾಯಕ ನಿತಿನ್‌ ಕುತ್ತಾರ್‌, ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ವಾಸುದೇವ ಉಚ್ಚಿಲ್‌, ಸಿಪಿಐಎಂ ನಾಯಕ ಸಂತೋಷ್‌ ಶಕ್ತಿನಗರ, ಸಂತೋಷ್‌ ಬಜಾಲ್‌, ಸಾದಿಕ್‌ ಕಣ್ಣೂರು, ಪ್ರೇಮನಾಥ ಜಲ್ಲಿಗುಡ್ಡೆ, ಸುರೇಶ್‌ ಬಜಾಲ್‌, ದಿನೇಶ್‌ ಶೆಟ್ಟಿ, ಭಾರತಿ ಬೋಳಾರ್‌, ದಲಿತ ಸಂಘಟನೆಯ ಜಿಲ್ಲಾ ನಾಯಕ ತಿಮ್ಮಯ್ಯ ಕೊಂಚಾಡಿ, ರಘುವೀರ್‌, ಯಮುನಾ ಪಚ್ಚನಾಡಿ, ರಘು ಎಕ್ಕಾರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.