ಯಡಿಯೂರಪ್ಪನವರಿಗೆ ಮಾನ-ಮರ್ಯಾದೆ ಇದೆಯೇ?
Team Udayavani, Oct 23, 2017, 8:13 AM IST
ಮಂಗಳೂರು: “ಜೈಲಿಗೆ ಹೋಗಿ ಬಂದಿರುವ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನ-ಮರ್ಯಾದೆ ಇದ್ದರೆ ನನ್ನ ವಿರುದ್ಧ ಕಲ್ಲಿದ್ದಲು ಹಗರಣ ಆರೋಪ ಮಾಡುತ್ತಿರಲಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಕಲ್ಲಿದ್ದಲು ಹಗರಣ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ರವಿವಾರ ಬಂಟ್ವಾಳದಲ್ಲಿ ಮಾತನಾಡಿದ ಅವರು ಬಿಜೆಪಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಹರಿಹಾಯ್ದರು. ಯಡಿಯೂರಪ್ಪ ಅವರು ಮಾತೆತ್ತಿದರೆ ನಾವು ಸೀರೆ ಕೊಟ್ಟಿದ್ದೇವೆ, ಸೈಕಲ್ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಇದನ್ನು ಬಿಟ್ಟು ಬೇರೇನೂ ಮಾಡಿಲ್ಲ. ಭ್ರಷ್ಟಾಚಾರದಲ್ಲಿ ಜೈಲಿಗೂ ಹೋಗಿಬಂದರು. ಇದೀಗ 15 ದಿನಗಳಿಂದ ಸರಕಾರದ ಮೇಲೆ ಹೊಸ ಹೊಸ ಆರೋಪದ ರೀಲು ಬಿಡುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
ಡೋಂಗಿಗಳ ಪಕ್ಷ
ಬಿಜೆಪಿ ಡೋಂಗಿಗಳ ಪಕ್ಷ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಬಿಜೆಪಿಯವರು ಬರೇ ಮಾತುಗಳಲ್ಲೇ ಕಾಲ ಕಳೆಯುವವರು. ವಾಸ್ತವದಲ್ಲಿ ಯಾವುದೂ ಆಗುವುದಿಲ್ಲ. “ಅಚ್ಛೇ ದಿನ್ ಆಯೇಗಾ’ ಎಂದು ಹೇಳುತ್ತಾ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಜನಸಾಮಾನ್ಯರಿಗೆ ಅಚ್ಛೇ ದಿನ್ ಬರಲೇ ಇಲ್ಲ. ಉದ್ಯಮಿಗಳಿಗೆ, ಅಮಿತ್ ಶಾ ಪುತ್ರ ಜಯ್ ಶಾ ಅವರಿಗೆ ಮಾತ್ರ ಅಚ್ಛೇ ದಿನ್ ಬಂದಿದೆ ಎಂದು ಲೇವಡಿ ಮಾಡಿದರು.
ಬಿಜೆಪಿಯಿಂದ ಕೋಮುವಾದ
ಬಿಜೆಪಿ, ಸಂಘಪರಿವಾರ ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದೆ. ಭಾವನಾತ್ಮಕ ವಿಚಾರಗಳ ಮೇಲೆ ಮತಗಳಿಸುವ ಕೆಲಸ ಯಾರೂ ಕೂಡ ಮಾಡಬಾರದು. ಜಿಲ್ಲೆಯ ಪ್ರಜ್ಞಾವಂತ ಜನತೆ ಭಾವನಾತ್ಮಕ ವಿಚಾರಗಳಿಗೆ ಕಿವಿಗೊಡಬಾರದು. ಕೋಮುವಾದಿ ಶಕ್ತಿಗಳ ಜತೆ ಯಾವುದೇ ಕಾರಣಕ್ಕೂ ರಾಜಿ ಇಲ್ಲ . ಜಾತಿವಾದಿ, ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಲು ಬದ್ಧರಾಗಿದ್ದೇವೆ ಎಂದರು. ಸಮಾಜ ಒಡೆವ ಕೋಮವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜಾತ್ಯತೀತ ಶಕ್ತಿಗಳು ಮಾಡಬೇಕು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ