ಪ್ರೇಮ ಪರೀಕ್ಷೆಯಲ್ಲಿ ತಾಳ್ಮೆ ಎಂಬುದು ಅನಿವಾರ್ಯ


Team Udayavani, Feb 18, 2017, 11:52 AM IST

preethi-premaa.jpg

ಇನ್ಮುಂದೆ ಹುಡುಗಿಯರನ್ನು ಕಣ್ಣೆತ್ತಿಯೂ ನೋಡಲ್ಲ, ಎಲ್ಲರೂ ಮೋಸಗಾತಿಯರು, ಟ್ರೂ ಲವ್‌ ಅನ್ನೋದೇ ಇಲ್ಲ ಎನ್ನುತ್ತಾ ಕೈಯಲ್ಲಿ ಗ್ಲಾಸ್‌ ಹಿಡಿಯುತ್ತಾನೆ. ಇತ್ತ ಕಡೆ ಇವಳು, ಹುಡುಗರ ಜೊತೆ ಫ್ರೆಂಡ್‌ಶಿಪ್‌ ಮಾಡಿ ಒಳ್ಳೆಯ ರೀತಿಯಲ್ಲಿ ಮಾತನಾಡಿದರೆ ಸಾಕು, ಲವ್‌ ಮಾಡು ಎಂದು ಹಿಂದೆ ಸುತ್ತುತ್ತಾರೆ. ಇನ್ನು ಮುಂದೆ ಹುಡುಗರ ಜೊತೆ ಫ್ರೆಂಡ್‌ಶಿಪ್‌ ಮಾಡಲ್ಲ ಎಂದು ಸಿಡಿಮಿಡಿಗೊಂಡಿರುತ್ತಾಳೆ. ಈ ಎರಡು ವಿರುದ್ಧ ಗುಣಗಳ ಪಾತ್ರಗಳನ್ನು ಒಟ್ಟು ಸೇರಿಸುವ ಪ್ರಯತ್ನವಾಗಿ ಮೂಡಿಬಂದಿರೋದೇ “ಪ್ರೀತಿ ಪ್ರೇಮ’. 

ಪ್ರೀತಿ ಯಾವ ರೀತಿ ಬದಲಾಗುತ್ತಿದೆ, ಪ್ರೀತಿ ಹೇಗೆ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತಿದೆ ಮತ್ತು ಇದರಿಂದಾಗಿ ನಿಷ್ಕಲ್ಮಶ ಪ್ರೀತಿಯ ಮೇಲೂ ಸಂಶಯಪಡುವಂತಹ ಸ್ಥಿತಿ ಬಂದಿರೋದನ್ನು ಈ ಸಿನಿಮಾ ಮೂಲಕ ನಿರ್ದೇಶಕರು ಹೇಳಲು ಹೊರಟಿದ್ದಾರೆ. ನಿರ್ದೇಶಕರ ಗುರಿಯೇನೋ ಸ್ಪಷ್ಟವಾಗಿದೆ. “ಕಮರ್ಷಿಯಲ್‌ ಲವ್‌ಸ್ಟೋರಿ’ಗಳ ವಿವಿಧ ಮುಖಗಳನ್ನು ಅನಾವರಣಗೊಳಿಸುತ್ತಲೇ ಒಂದು ನಿಷ್ಕಲ್ಮಶ ಪ್ರೀತಿಯನ್ನು ತೋರಿಸಲು ಹೊರಟ ನಿರ್ದೇಶಕರು ಸಾಕಷ್ಟು ಕಷ್ಟಪಟ್ಟಿರೋದು ಎದ್ದು ಕಾಣುತ್ತದೆ.

ಆ ಕಷ್ಟವನ್ನು ಅನಿವಾರ್ಯವಾಗಿ ಪ್ರೇಕ್ಷಕ ಕೂಡಾ ಅನುಭವಿಸಬೇಕಾಗುತ್ತದೆ. ಮುಖ್ಯವಾಗಿ ಈ ಸಿನಿಮಾದ ಸಮಸ್ಯೆ ಎಂದರೆ ಏಕತಾನತೆ ಹಾಗೂ ಗಂಭೀರ ವಿಷಯದ ಕೊರತೆ. ಪ್ರೀತಿಯ ಕಮರ್ಷಿಯಲ್‌ ಅಂಶಗಳನ್ನು ತೋರಿಸುವ ಭರದಲ್ಲಿ ಉಳಿದೆಲ್ಲಾ ಅಂಶಗಳನ್ನು ನಿರ್ದೇಶಕರು ಮರೆತಿದ್ದಾರೆ. ಹಾಗೆ ನೋಡಿದರೆ ಕತೆ ಟ್ರ್ಯಾಕ್‌ಗೆ ಬರೋದು ಇನ್ನೇನು ಸಿನಿಮಾ ಮುಗಿಯಲು ಹತ್ತು ನಿಮಿಷ ಇರುವಾಗ. ಆ ಗ್ಯಾಪಲ್ಲೂ ನಿರ್ದೇಶಕರು ಒಂದು ಮಾಂಟೇಜ್‌ ಸಾಂಗ್‌ ಮೂಲಕ ಮತ್ತೆ ಸಿನಿಮಾವನ್ನು ಎಳೆದಾಡಿದ್ದಾರೆ. 

ಟೈಮ್‌ಪಾಸ್‌ಗೆ ಲವ್‌ ಮಾಡೋ ಹುಡುಗರ ಕಥೆ, ಪಾಕೇಟ್‌ ಮನಿ, ಪಿಕ್‌ಅಪ್‌, ಡ್ರಾಪ್‌ ಸರ್ವೀಸ್‌ಗಾಗಿ ಲವ್‌ ಮಾಡೋ ತರಹ ನಾಟಕವಾಡೋ ಹುಡುಗೀರ ಬಾಯಲ್ಲಿ ಬರೋ “ಕಮರ್ಷಿಯಲ್‌ ಡೈಲಾಗ್‌’ಗಳು ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ಬಂದು ಹೋಗಿವೆ. “ಪ್ರೀತಿ ಪ್ರೇಮ’ದಲ್ಲೂ ಅದೇ ಮುಂದುವರಿದಿದೆ. ಹುಡುಗೀರನ್ನು ಬೈಕೊಂಡು ಓಡಾಡೋ ಹುಡುಗ ಒಂದು ಕಡೆಯಾದರೆ, ಹುಡುಗೀರನ್ನು ಎಟಿಎಂ ಕಾರ್ಡ್‌ ತರಹ ಬಳಸಿ ಕೊನೆಗೆ ಬಿಸಾಕಬೇಕು ಎಂದು ಭಾವಿಸುವ ಹುಡುಗೀರ ಗುಂಪು ಇನ್ನೊಂದು ಕಡೆ.

ಈ ಎರಡನ್ನೂ ಬ್ಯಾಲೆನ್ಸ್‌ ಮಾಡಲು ನಿರ್ದೇಶಕರು ಸಾಕಷ್ಟು ಶ್ರಮಪಟ್ಟಿದ್ದಾರೆ. ಮೊದಲೇ ಹೇಳಿದಂತೆ ಸಿನಿಮಾದಲ್ಲಿ ಏಕತಾನತೆ ಕಾಡುತ್ತದೆ. ದೃಶ್ಯಗಳು ಒಂದು ಸರ್ಕಲ್‌ ಬಿಟ್ಟು ಮುಂದಕ್ಕೆ ಹೋಗೋದೇ ಇಲ್ಲ. ಬ್ಯಾಚುಲರ್‌ ಬಾಯ್ಸನ ತರೆಲ ತಮಾಷೆಗಳನ್ನೇ ಡಿಸೈನ್‌ ಡಿಸೈನ್‌ ಆಗಿ ತೋರಿಸಿದ್ದಾರೆ. ಆದರೆ, ಚಿತ್ರದ ಕೊನೆಯಲ್ಲಿ ಬರುವ ಟ್ವಿಸ್ಟ್‌ ನಿಮಗೆ ಸ್ವಲ್ಪ ಖುಷಿ ಕೊಡಬಹುದು. ಹಾಗಂತ ಅದು ಅನಿರೀಕ್ಷಿತ ಎನ್ನುವಂತಿಲ್ಲ. ಬಹುತೇಕ ದೃಶ್ಯಗಳನ್ನು ಪ್ರೇಕ್ಷಕನೇ ಊಹಿಸಿಕೊಂಡು ಹೋಗುವಂತಿದೆ.

ಚಿತ್ರದಲ್ಲಿ ಸಾಕಷ್ಟು ಅನಾವಶ್ಯಕ ದೃಶ್ಯಗಳು ಬಂದು ಹೋಗುತ್ತವೆ. ನಿರ್ದೇಶಕರು ಅದನ್ನು ಕಾಮಿಡಿ ಎಂದು ಭಾವಿಸಿಕೊಂಡು ಚಿತ್ರದುದ್ದಕ್ಕೂ ಇಟ್ಟಿದ್ದಾರೆ. ಆ ಎಲ್ಲಾ ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ ತಾಳ್ಮೆ ಪರೀಕ್ಷೆಯ ಅವಧಿಯೂ ಕಡಿಮೆಯಾಗುತ್ತಿತ್ತು. ಚಿತ್ರದ ಪ್ಲಸ್‌ ಪಾಯಿಂಟ್‌ ಎಂದರೆ ಗಾಂಧಿನಗರದ ಸಿದ್ಧಸೂತ್ರಗಳನ್ನು ಬಿಟ್ಟು ಮಾಡಿದ ಸಿನಿಮಾವಿದು. ಹಾಗಾಗಿ, ಹೀರೋಯಿಸಂ, ಬಿಲ್ಡಪ್‌ ಎಂಟ್ರಿ, ಜಬರ್ದಸ್ತ್ ಫೈಟ್‌ಗಳಿಲ್ಲ. ಕೇವಲ ಒಂದು ಲವ್‌ಸ್ಟೋರಿಯನ್ನಷ್ಟೇ ಹೇಳಲು ಪ್ರಯತ್ನಿಸಿದ್ದಾರೆ. 

ನಾಯಕ ಕೃಷ್ಣ ಚೈತನ್ಯ ಲವರ್‌ ಬಾಯ್‌ ಆಗಿ ನಟಿಸಿದ್ದಾರೆ. ಅವರು ಮತ್ತಷ್ಟು ಚೈತನ್ಯದಿಂದ ನಟಿಸಿದ್ದರೆ ಪಾತ್ರದ ತೂಕ ಹೆಚ್ಚುತ್ತಿತ್ತು. ನಾಯಕಿ ನಿಧಿ ಕುಶಾಲಪ್ಪ ನಟಿಸಲು ಪ್ರಯತ್ನಿಸಿದ್ದಾರೆ. ಉಳಿದಂತೆ ಗಿರಿ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಚಿತ್ರ: ಪ್ರೀತಿ ಪ್ರೇಮ
ನಿರ್ಮಾಣ: ಕೃಷ್ಣ ಚೈತನ್ಯ
ನಿರ್ದೇಶನ: ಕಾಶಿ
ತಾರಾಗಣ: ಕೃಷ್ಣ ಚೈತನ್ಯ, ನಿಧಿ ಕುಶಾಲಪ್ಪ, ಗಿರಿ ಮತ್ತಿತರರು

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.