ಅತ್ತು ಬಿಡಿ ಒಮ್ಮೆ ಜೊತೆಗೆ, ನಗಬೇಡಿ ಹೀಗೆ …


Team Udayavani, Sep 2, 2017, 10:34 AM IST

Mugulunage.jpg

ಪುಲಕೇಶಿಯ ಗಂಟಲು ಬಿಗಿಯಾಗುತ್ತದೆ, ಇನ್ನೇನು ಪುಲಕೇಶಿ ಅತ್ತೇಬಿಟ್ಟ, ಕೊನೆಗೂ ಕಣ್ಣಲ್ಲಿ ಒಂದು ಹನಿ ನೀರು ಬಂತೆಂದು “ಸಂಭ್ರಮಿಸುವ’ ಹೊತ್ತಿಗೆ ಆತ ನಗುತ್ತಾನೆ, ನಗುವಿನಲ್ಲೇ ಆತನ ಅಳು ಅಡಗಿರುತ್ತದೆ. ಹುಟ್ಟಿದಾಗಿನಿಂದ ಅಳದೇ ಇರುವ ಪುಲಕೇಶಿ ನೋವಿನ ಮೇಲೆ ನೋವು ಅನುಭವಿಸುತ್ತಾನೆ. ಪ್ರತಿ ಬಾರಿ ನೋವಾದಾಗಲೂ ಆತ ನಗುತ್ತಾನೆ. ಆತ ನಗುತ್ತಲೇ ಪ್ರೇಕ್ಷಕನ ಕಣ್ಣಾಲಿಗಳು ಒದ್ದೆಯಾಗುತ್ತವೆ. ಕಣ್ಣಾಲಿಯಾ ಜಲಪಾತವಾ ಬಂಧಿಸಲು ನೀ ಯಾರು?

ಹತ್ತು ವರ್ಷಗಳ ನಂತರ ಯೋಗರಾಜ ಭಟ್‌ ಹಾಗೂ ಗಣೇಶ್‌ ಒಟ್ಟಾದ ಸಿನಿಮಾ “ಮುಗುಳು ನಗೆ’. ಇಬ್ಬರು ಜೊತೆಯಾದಾಗ ಲವ್‌ಸ್ಟೋರಿ ಬಿಟ್ಟು ಇನ್ನೇನನ್ನು ನಿರೀಕ್ಷಿಸಬಹುದು ಎಂದು ನೀವು ಕೇಳಬಹುದು. ಹೌದು, ಇಲ್ಲಿ ಲವ್‌ಸ್ಟೋರಿ ಇದೆ. ಆದರೆ, ಬರೀ ಲವ್‌ಸ್ಟೋರಿಯಲ್ಲ, ನಾಯಕನಿಗೆ ಜೀವನಪಾಠ ಕಲಿಸುವ ಮೂರು ಆಯಾಮಗಳ ಲವ್‌ಸ್ಟೋರಿಗಳಿವೆ ಎಂಬುದು ಈ ಬಾರಿಯ ವಿಶೇಷ. ಆ ಮಟ್ಟಿಗೆ “ಮುಗುಳು ನಗೆ’ ಒಂದು ಗಂಭೀರ ಹಾಗೂ ಕ್ಲಾಸ್‌ ಸಿನಿಮಾ ಎನ್ನಬಹುದು.

ಭಟ್ಟರು ಹಾಗೂ ಗಣೇಶ್‌ ಜೊತೆಯಾದಾಗ ನೀವು ನಿರೀಕ್ಷಿಸಬಹುದಾದ ಅದೇ ಡೈಲಾಗ್‌ ಡೆಲಿವರಿ, ವಿಚಿತ್ರ ಮ್ಯಾನರೀಸಂ, ಅತಿಯಾದ ಮಾತು … ಅವ್ಯಾವು ಈ ಸಿನಿಮಾದಲ್ಲಿಲ್ಲ. ಬರುವ ಪಾತ್ರಗಳನ್ನು ಕಥೆಗೆ ಎಷ್ಟು ಬೇಕೋ ಅಷ್ಟೇ ದುಡಿಸಿಕೊಂಡಿದ್ದಾರೆ ಭಟ್ಟರು. ಹಾಗಾಗಿ, ಭಟ್ಟರ ಈ ಹಿಂದಿನ ಎರಡು ಸಿನಿಮಾ ನೋಡಿದವರಿಗೆ “ಮುಗುಳು ನಗೆ’ಯಲ್ಲಿ ದೊಡ್ಡ ವ್ಯತ್ಯಾಸ ಕಾಣಸಿಗುತ್ತದೆ. ಸಾಮಾನ್ಯವಾಗಿ ಭಟ್ಟರ ಸಿನಿಮಾಗಳ ಕಾಣಸಿಗುವ ಉಡಾಫೆ ಹುಡುಗ ಇಲ್ಲಿ ಮೆಚುರ್ಡ್ ಆಗಿದ್ದಾನೆ. ಆ ಮಟ್ಟಿಗೆ ಭಟ್ಟರು ಕೂಡಾ ಬದಲಾಗಿದ್ದಾರೆ. 

ಮೊದಲೇ ಹೇಳಿದಂತೆ ಈ ಚಿತ್ರದಲ್ಲಿ ಪ್ರೀತಿಯನ್ನು ಮೂರು ಆಯಾಮಗಳಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಒಂದೊಂದು ಟ್ರ್ಯಾಕ್‌ ತೆರೆದುಕೊಳ್ಳುತ್ತಿದ್ದಂತೆ ನಾಯಕ ಅಲ್ಲಿ ಒಂದೊಂದು ಪಾಠ ಕಲಿಯುತ್ತಾನೆ ಮತ್ತು ಆತ “ದೊಡ್ಡ’ವನಾಗುತ್ತಾ ಹೋಗುತ್ತಾನೆ. ಮೊದಲ ಹುಡುಗಿ ತನ್ನ ಭವಿಷ್ಯದ ಕನಸಿನ ಬೆನ್ನತ್ತುವ ಮೂಲಕ ನಾಯಕ ತನ್ನ ತಂದೆಯ ಕಷ್ಟ, ಕುಟುಂಬದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳುತ್ತಾನೆ. ಮತ್ತೂಬ್ಟಾಕೆಯ ಪ್ರೀತಿ ಆತನಿಗೆ ಪ್ರೀತಿಯ ಮಹತ್ವ ಹಾಗೂ ಪ್ರೀತಿಯ ಪಾವಿತ್ರ್ಯತೆ ತಿಳಿಸಿದರೆ ಮೂರನೇ ಹುಡುಗಿಯ ಪ್ರೀತಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡುತ್ತಾಳೆ.

ಈ ಮೂರು ಆಯಾಮಗಳಲ್ಲೂ ನಾಯಕ ತನ್ನನ್ನು ತಾನು ತಿದ್ದಿಕೊಳ್ಳುತ್ತಾ ಜೀವನಾನುಭವ ಪಡೆಯುತ್ತಾನೆ. ಕುಟುಂಬ, ಮದುವೆ, ಸಂಬಂಧ … ಈ ಮೂರು ಅಂಶಗಳನ್ನು ಮೂವರು ನಾಯಕಿಯರು ಪ್ರತಿನಿಧಿಸಿದ್ದಾರೆನ್ನಬಹುದು. ಇನ್ನು, ಜೀವನ ಪಾಠ ಅಂದಾಕ್ಷಣ ಇಲ್ಲಿ ಬೋಧನೆ ಇದೆಯಾ ಎಂದರೆ, ಅಂತಹ ಕೆಲಸಕ್ಕೆ ಕೈ ಹಾಕಿಲ್ಲ. ಬದಲಾಗಿ ಇಡೀ ಸಿನಿಮಾವನ್ನು ಭಾವನೆಗಳ ಮೇಲೆ ಕಟ್ಟಿಕೊಟ್ಟಿದ್ದಾರೆ. ಹುಡುಕಾಟದಂತೆ ಕಾಣುತ್ತಲೇ ಇಲ್ಲಿ ಬಿಟ್ಟು ಬಿಡದೇ ಕಾಡುವ ಭಾವನೆ ಇದೆ.

ಅಂದಹಾಗೆ, ಇಲ್ಲಿ ಕೇವಲ ಮೂವರು ಹುಡುಗಿಯರಷ್ಟೇ ಅಲ್ಲ, ನಾಲ್ಕನೆಯವಳು ಕೂಡಾ ಇದ್ದಾಳೆ. ಆಕೆಯಿಂದ ನಾಯಕ ಯಾವ ಪಾಠ ಕಲಿಯುತ್ತಾನೆಂಬ ಕುತೂಹಲಕ್ಕೆ ನೀವು ಸಿನಿಮಾ ನೋಡಬೇಕು. ಇಲ್ಲಿ ಹೆಚ್ಚೇನು ಫ‌ನ್‌ ಡೈಲಾಗ್‌ ಆಗಲಿ, ಅನಾವಶ್ಯಕ ಕಾಮಿಡಿಯಾಗಲಿ ಅಥವಾ ನೀವು ಊಹಿಸದಂತಹ ಟ್ವಿಸ್ಟ್‌ಗಳಾಗಲಿ ಖಂಡಿತಾ ಇಲ್ಲ. ಅದರಲ್ಲೂ ಒಂದಷ್ಟು ಅಂಶಗಳನ್ನು ನೀವು ಆರಾಮವಾಗಿ ಊಹಿಸಿಕೊಳ್ಳಬಹುದು. ಇನ್ನು ಭಟ್ರಾ ಇಲ್ಲಿ ಏನು ಹೇಳಬೇಕೋ ಅದನ್ನು ಒಂದೊಂದೇ ಟ್ರ್ಯಾಕ್‌ಗಳಲ್ಲಿ ನೇರಾನೇರ ಹೇಳಿದ್ದಾರೆ.

ಪ್ರತಿ ಚಾಪ್ಟರ್‌ಗಳು ಆರಂಭವಾಗಿ ಮುಗಿಯುವ ಹೊತ್ತಿಗೆ ಅಲ್ಲೊಂದು ಗಾಢವಾದ ಮೌನ ಆವರಿಸಿರುತ್ತದೆ. ಆ ಮೌನದಲ್ಲಿ ನೀವು “ಸುಖ’ ಕಾಣಬೇಕು. ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಮತ್ತಷ್ಟು ಟ್ರಿಮ್‌ ಮಾಡುವ ಅವಕಾಶವಿತ್ತು. ಪಾಂಡಿಚೇರಿಯ ಸಿರಿ ಮನೆಯ ದೃಶ್ಯ ಹಾಗೂ ಚಾರುಲತಾ ಪೋರ್ಶನ್‌ಗಳು ಸ್ವಲ್ಪ ಎಳೆದಂತಾಗಿದೆ. ಅದು ಬಿಟ್ಟರೆ ಇಲ್ಲಿ ತುಂಬಾ ಫ್ರೆಶ್‌ ಎನಿಸುವ ದೃಶ್ಯಗಳಿವೆ. ಮೈಸೂರು, ಬೆಂಗಳೂರು, ಕುಂದಾಪುರ, ಪಾಂಡಿಚೇರಿಯ ಹಿನ್ನೆಲೆಯಿದೆ.  

ಇಡೀ ಚಿತ್ರದ ಹೈಲೈಟ್‌ ಎಂದರೆ ನಾಯಕ ಗಣೇಶ್‌. ಲವರ್‌ಬಾಯ್‌ ಆಗಿ, ತುಂಟ ಪ್ರೇಮಿಯ ಪಾತ್ರಗಳು ಗಣೇಶ್‌ಗೆ ಹೊಸದಲ್ಲ. ಆದರೆ, ಈ ಬಾರಿ ಅವರಿಗೆ ಹೊಸ ಸವಾಲೆಂದರೆ ನಗುತ್ತಲೇ ಅಳುವುದು. ಆ ತರಹದ ಒಂದು ಪಾತ್ರವನ್ನು ಗಣೇಶ್‌ ತುಂಬಾ ಚೆನ್ನಾಗಿ ನಿಭಾಹಿಸಿದ್ದಾರೆ ಮತ್ತು ಸೆಟಲ್ಡ್‌ ಆದ ಅಭಿನಯದ ಮೂಲಕ ಇಷ್ಟವಾಗುತ್ತಾರೆ. ಮೂವರು ನಾಯಕಿಯರ ವಿಷಯದಲ್ಲಿ ಒಬ್ಬರಿಗೊಬ್ಬರು ಸ್ಪರ್ಧೆಗೆ ನಿಂತರವರಂತೆ ನಟಿಸಿದ್ದಾರೆ.

ಆಶಿಕಾ, ನಿಖೀತಾ ಹಾಗೂ ಅಪೂರ್ವ, ಪುಲಕೇಶಿಯಲ್ಲಿ ಬದಲಾವಣೆ ತರುವಲ್ಲಿ “ಯಶಸ್ವಿ’ಯಾಗಿದ್ದಾರೆ. ಅದರಲ್ಲೂ ನಿಖೀತಾ ಅವರ ಅಭಿನಯಕ್ಕೆ ಒಂದಂಕ ಹೆಚ್ಚು ಕೊಡಬಹುದು. ಅಮೂಲ್ಯ ಹಾಗೆ ಬಂದು ಹೀಗೆ ಹೋಗುತ್ತಾರೆ. ಉಳಿದಂತೆ ಅಚ್ಯುತ್‌, ಧರ್ಮಣ್ಣ, ರಂಗಾಯಣ ರಘು ಸೇರಿದಂತೆ ಎಲ್ಲರೂ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಹಿಸಿದ್ದಾರೆ. ಹರಿಕೃಷ್ಣ ಸಂಗೀತದ ಹಾಡುಗಳು ಇಷ್ಟವಾಗುತ್ತವೆ. ಹಿನ್ನೆಲೆ ಸಂಗೀತ ಚಿತ್ರದ ಗಾಢತೆ ಹೆಚ್ಚಿಸಿದೆ. ಸುಜ್ಞಾನ್‌ ಛಾಯಾಗ್ರಹಣ ಚಿತ್ರಕ್ಕೆ ಪೂರಕ. 

ಚಿತ್ರ: ಮುಗುಳು ನಗೆ
ನಿರ್ಮಾಣ: ಸೈಯ್ಯದ್‌ ಸಲಾಂ
ನಿರ್ದೇಶನ: ಯೋಗರಾಜ ಭಟ್‌
ತಾರಾಗಣ: ಗಣೇಶ್‌, ಆಶಿಕಾ, ನಿಖೀತಾ, ಅಪೂರ್ವ, ಅಮೂಲ್ಯ, ಅಚ್ಯುತ್‌, ರಂಗಾಯಣ ರಘು ಮುಂತಾದವರು

* ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.