ನದಿಪಾತ್ರದಲ್ಲಿ ವಿವಿಧ ಜಾತಿ ಸಸಿ


Team Udayavani, Mar 28, 2017, 1:05 PM IST

mys7.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹರಿದು ಬರುವ ತಾಲೂಕಿನ ಜೀವನದಿ ಲಕ್ಷಣತೀರ್ಥದಲ್ಲಿ ನಿರಂತರ ನೀರು ಹರಿಯುವಂತೆ ಮಾಡುವ ನಿಟ್ಟಿನಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ 80 ಕಿ.ಮೀ ಉದ್ದದ ನದಿಪಾತ್ರದ ಹಳ್ಳಿಗರ ಸಹಕಾರದಲ್ಲಿ ವಿವಿಧ ಜಾತಿಯ ಸಸಿಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಬಾಲಚಂದ್ರ ಹೇಳಿದರು.

ಹುಣಸೂರು ನಗರದ ಪ್ರಾದೇಶಿಕ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಕಲುಷಿತಗೊಂಡಿರುವ ಲಕ್ಷ್ಮಣನದಿಯನ್ನು ಪುನರ್‌ಜೀವನಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ವಿವಿಧ ಸಂಘಸಂಸ್ಥೆಗಳ ಸಭೆಯಲ್ಲಿ ಮಾತನಾಡಿ, ನದಿಪಾತ್ರದಲ್ಲಿ ಮಣ್ಣಿನ ಸವಕಳಿ ತಪ್ಪಿಸುವ ಹಾಗೂ ಗಿಡಗಳನ್ನು ನೆಟ್ಟುಬೆಳೆಸಿ, ಪರಿಸರ ಕಾಪಾಡುವ ಹಾಗೂ ನದಿಯ ಹಿಂದಿನ ಗತ ವೈಭವ ಮರುಕಳಿಸಿ, ಜೀವಂತನದಿಯನ್ನಾಗಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

80 ಕಿ.ಮೀ ಅರಣ್ಯೀಕರಣ: ಪ್ರಾದೇಶಿಕ ಅರಣ್ಯ ಇಲಾಖೆಯ ಡಿಸಿಎಫ್ ನೇತತ್ವದಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆರಂಭಿಸಿ ನದಿ ಪಾತ್ರದ ಕೆಆರ್‌ಎಸ್‌ ಹಿನ್ನೀರಿನವರೆಗಿನ 80 ಕಿ.ಮೀ ಉದ್ದಕ್ಕೂ ಅರಣ್ಯೀಕರಣಪಡಿಸಲು ಯೋಜನೆ ಸಿದ್ದವಾಗಿದೆ ಎಂದು ತಿಳಿಸಿದರು.

ಚೆಕ್‌ಡ್ಯಾಂ ನಿರ್ಮಿಸಿ: ಜಲಾನಯನ ಅಭಿವೃದ್ಧಿ ಯೋಜನೆಯಿಂದ ನದಿ ಹಾಗೂ ಕೆರೆಗಳಿಗೆ ನೀರು ಹರಿದು ಬರುವ ಹೊಲಗಳ ಅಲ್ಲಲ್ಲಿ ಚೆಕ್‌ ಡ್ಯಾಂ ನಿರ್ಮಿಸುವುದರಿಂದ ನದಿ ಹಾಗೂ ಕೆರೆಕಟ್ಟೆಗಳಿಗೆ ಮಣ್ಣು ಸೇರುವುದಿಲ್ಲ, ಇದರಿಂದ ಹೂಳು ಸೇರುವುದು ತಪ್ಪಲಿದೆ. ಈ ಬಗ್ಗೆ ಕಾರ್ಯಕ್ರಮ ರೂಪಿಸುವಂತೆ ಕೃಷಿ ಸಹಾಯಕ ನಿರ್ದೇಶಕ ವೆಂಕಟೇಶ್‌ರಿಗೆ ಸೂಚಿಸಿದರು.

ಜಾಗೃತಿ ಸಭೆ ಆಯೋಜಿಸಲಾಗುವುದು: ನದಿ ಪಾತ್ರದಲ್ಲಿ ಬರುವ 100 ಹಳ್ಳಿಗಳ  ರೈತರನ್ನು ಬಳಸಿಕೊಂಡು ವಿವಿಧ ಯೋಜನೆಯಡಿ ಗಿಡಬೆಳೆಸುವ ಮೂಲಕ ನದಿ ಸಂರಕ್ಷಿಸುವುದು ಹಾಗೂ ಪರಿಸರ ಹಾನಿ ತಪ್ಪಿಸಬಹುದಾಗಿದೆ. ನದಿಯ ಪಾತ್ರದ ಎಲ್ಲಾ ಗ್ರಾಪಂಗಳಲ್ಲಿ ಸಭೆ ನಡೆಸಿ, ಮೊದಲ ಹಂತವಾಗಿ ನದಿಯನ್ನು ಸ್ವತ್ಛಗೊಳಿಸುವುದು. ನದಿಗೆ ಅನುಪಯುಕ್ತ ಪದಾರ್ಥಸೇರದಂತೆ ನೋಡಿಕೊಳ್ಳುವ ಹಾಗೂ ನದಿಯ ಸಂರಕ್ಷಣೆ ಕುರಿತು ಅರಿವು ಮೂಡಿಸುವುದು ಅತ್ಯವಶ್ಯ ಎಂದರು.

26 ಜಲದಕಣ್ಣುಗಳು ಒತ್ತುವರಿ: ಡೀಡ್‌ ಸಂಸ್ಥೆಯ ಮುಖ್ಯಸ್ಥ ಡಾ.ಎಸ್‌.ಶ್ರೀಕಾಂತ್‌ ಮಾತನಾಡಿ, ಲಕ್ಷಣತೀರ್ಥ ನದಿಗೆ ಈ ಭಾಗದಲ್ಲಿ 26 ಜಲಮೂಲಗಳಿದ್ದು, ಅವು ಗಳೀಗ ಒತ್ತುವರಿ, ಮರಳುಗಾರಿಕೆಧಿಯಿಂದಾಗಿ ನೀರಿನ ಹರಿವು ನಿಂತು ಹೋಗಿದೆ, ಈ ಬಗ್ಗೆ ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿ ರಕ್ಷಣೆಗೆ ಗಿಡ ನೆಡುವ ಕಾರ್ಯ ಜೂನ್‌ನಲ್ಲೇ ಆರಂಭಿಸುವಂತೆ ಕೋರಿದರು.

99 ಕೋಟಿ ಪ್ರಸ್ತಾವನೆ ನೆನೆಗುದಿಗೆ: ಸೇವ್‌ ಅವರ್‌ ಅರ್ಥ್ಕ್ಲಬ್‌ನ ಅಧ್ಯಕ್ಷ ಸಂಜಯ್‌ ಮಾತನಾಡಿ, ನದಿ ರಕ್ಷಣೆಗಾಗಿ ನಗರದ ತ್ಯಾಜ್ಯ ನೀರು ನದಿಗೆ ಸೇರದಂತೆ ಕಾರ್ಯಕ್ರಮ ರೂಪಿಸಲಾಗಿದ್ದು, ಈ ಸಂಬಂಧ 99 ಕೋಟಿ ರೂ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಯೋಜನೆ ನೆನೆಗುದಿಗೆ ಬಿದ್ದಿದೆ. ಈ ಸಂಬಂಧ ಅಗತ್ಯ ಕಾರ್ಯಕ್ರಮ ರೂಪಿಸಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರಿಗೂ ಸಹ ಮನವಿ ಸಲ್ಲಿಸಿರುವ ಬಗ್ಗೆ ಸಭೆಗೆ ತಿಳಿಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊಸೂರುಕಷ್ಣಕುಮಾರ್‌, ಸ್ಪೂರ್ತಿ ಸಂಸ್ಥೆಯ ಬಸವರಾಜು, ತಾಲೂಕು ರೈತ ಸಂಘದ ಅಧ್ಯಕ್ಷ ಬೆಟ್ಟೇಗೌಡ, ತಾಲೂಕು ಕರವೇ ಅಧ್ಯಕ್ಷ ಪುರುಷೋತ್ತಮ್‌, ಡೀಡ್‌ ಸಂಸ್ಥೆಯ ಜಗದೀಶ್‌, ಅರಣ್ಯ ಇಲಾಖೆಯ ವ್ಯವಸ್ಥಾಪಕ ಆಧಿಶೇಷ, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಪಿ.ಕೆ.ರಾಮು ಭಾಗವಹಿಸಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.