80 ಲಕ್ಷ ರೂ ವೆಚ್ಚದ ಕರೆ ಕಾಮಗಾರಿಗಳಿಗೆ ಚಾಲನೆ


Team Udayavani, May 29, 2017, 1:12 PM IST

mys6.jpg

ಹುಣಸೂರು: ತಾಲೂಕಿನ ದೊಡ್ಡ ಕೆರೆಯಾದ ಹೆರಿಗೆ ಕೆರೆಯ ಎಡದಂಡೆ ನಾಲೆ, ಪಿಕಪ್‌ನಾಲಾ ಲೆನಿಂಗ್‌ ಹಾಗೂ ವಿವಿಧ ದುರಸ್ತಿಯ 80 ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ಮಂಜುನಾಥ್‌ ಚಾಲನೆ ನೀಡಿದರು.

ತಾಲೂಕಿನ ಹನಗೋಡು ಹೋಬಳಿಯ ಹೊಸಕೋಟೆ ಗ್ರಾಮದ ಬಳಿಯ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರದ ಮೇಲೆ ಒತ್ತಡ ತಂದು ಹನಗೊಡು ಅಣೆಕಟ್ಟು ನಾಲೆಗಳು ಹಾಗೂ ಹಾರಂಗಿ ಬಲದಂಡೆ ನಾಲೆಗಳ ಆಧುನೀಕರಣ ಯೋಜನೆಗೆ 230 ಕೋಟಿ ರೂ ಗೂ ಹೆಚ್ಚು ಅನುದಾನ ಬಿಡುಗಡೆಯಾಗಿದೆ ಎಂದರು.

ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ದುಸ್ಥಿತಿಯಲ್ಲಿದ್ದ ಹೆರಿಗೆ ಕೆರೆ ಏರಿಯನ್ನು ಆಧುನಿಕ ತಂತ್ರಜ್ಞಾನ ಬಳಸಿ ವಿಶಿಷ್ಟ ಮಾದರಿಯಲ್ಲಿ 4 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಗೊಳಿಸಲಾಗುತ್ತಿದ್ದು, 500 ಎಕರೆ ವಿಸ್ತೀರ್ಣದ ಹೆರಿಗೆ ಕೆರೆಯಲ್ಲಿ ಸಾಕಷ್ಟು ನೀರು ಸಂಗ್ರಹವಾಗಲಿದ್ದು, ಈ ಭಾಗದ ರೈತರ ಬಹುದಿನದ ಬೇಡಿಕೆ ಈಡೇರಿಸಿದ ತೃಪ್ತಿ ತಮಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕುಂಟೇರಿ ಕೆರೆಗೆ 40 ಲಕ್ಷ: ಹನಗೋಡಿನ ಕುಂಟೇರಿಕೆರೆ ಅಭಿವೃದ್ಧಿ ಕಾಮಗಾರಿಗೂ ಚಾಲನೆ ನೀಡಲಾಗಿದೆ. ಮಳೆ ನೀರಿನ ಸಂಗ್ರಹಿಸಿಟ್ಟುಕೊಂಡ ಜಲ ಸಂವೃದ್ಧಿ ಹೆಚ್ಚಿಸಲು ನೀರಾವರಿ ಇಲಾಖೆಯಿಂದ ಅನೇಕ ಕಾಮಗಾರಿಗಳನ್ನು ಕೆ‌ಗೊಳ್ಳಲಾಗಿದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಆಯಾ ಭಾಗದ ರೈತರು ಉಸ್ತುವಾರಿ ವಹಿಸುವಂತೆ ಕೋರಿದರು.

ಇಷ್ಟೇ ಅಲ್ಲದೆ ಬರದ ನಾಡೆಂದೇ ಪ್ರತೀತಿಯಾದ ಬಿಳಿಕೆರೆ ಹೋಬಳಿಯ ಬಿಳಿಕೆರೆ-ಹಳೇಬೀಡು, ಕೆರೆ-ಜೀನಹಳ್ಳಿ ಕೆರೆ ಹಾಗೂ ಬೀಜಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಸೋಮನಹಳ್ಳಿ  ಸೇರಿದಂತೆ ಅನೇಕ ಗ್ರಾಮಗಳಿಗೆ ನೀರುಣಿಸುವ, ಹನಗೋಡು ಭಾಗದ ಮುದಗನೂರು ಕೆರೆ ಸುತ್ತಮುತ್ತಲ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ ಸೇರಿದಂತೆ ಸುಮಾರು 400 ಕೋಟಿ ರೂ ಗೂ ಹೆಚ್ಚು ವಿವಿದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಕೆಲ ಯೋಜನೆಗಳ ಉದ್ಘಾಟನೆಯನ್ನು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 31ರಂದು ನಗರಸಭಾ ಮೈದಾನದಲ್ಲಿ ನೆರವೇರಿಸಲಿದ್ದಾರೆ ಎಂದರು.

ತಾಪಂ ಸದಸ್ಯ ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷ ರಾಮಕಷ್ಣ, ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಅಂಜಲಿ, ರಾಮಸ್ವಾಮಿ, ಮಾಜಿ ಸದಸ್ಯ ಅಂಥೋಣಿ, ಫಾಧರ್‌ ವಿಲಿಯಂ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳಾದ ಟಿ.ವಿ.ನಾರಾಯಣ್‌, ಶಿರೇನಹಳ್ಳಿ ಬಸವರಾಜೇಗೌಡ, ಯುವ ಅಧ್ಯಕ್ಷ ರಾಘು,  ಮುಖಂಡರುಗಳಾದ ಹರಿಹರಆನಂದಸ್ವಾಮಿ, ಬಿಳಿಕೆರೆ ಸ್ವಾಮಿ, ಹೊಸಕೋಟೆಸೋಮಯ್ಯ, ಸಂತೋಷ್‌, ದೇವಣ್ಣ, ನವೀನ್‌, ಬೋರೇಗೌಡ, ನೇರಳಕುಪ್ಪೆ ಮಹದೇವ್‌, ಹಾರಂಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕುಶುಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.