ಗೋ ಹತ್ಯೆ ನಿಷಿದ್ಧ: ಕೇಂದ್ರ ಸರ್ಕಾರ ಪುನರ್‌ ಪರಿಶೀಲಿಸಲಿ


Team Udayavani, May 30, 2017, 1:00 PM IST

mys2.jpg

ಮೈಸೂರು: ಹತ್ಯೆಗಾಗಿ ಗೋವು ಮಾರಾಟ ಮತ್ತು ಖರೀದಿ ನಿಷೇಧಿಸಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪುನರ್‌ ಪರಿಶೀಲಿಸಲಿ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪಆಗ್ರಹಿಸಿದರು.

ಸೋಮವಾರ ನಗರ ಪ್ರದಕ್ಷಿಣೆ ನಡೆಸಿ ನಗರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಜನರ ಭಾವನೆಗಳ ಜತೆಗೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಭಾವನಾತ್ಮಕ ವಿಷಯವನ್ನು ಕೆದಕಿ ಸಂವಿಧಾನಬದ್ಧ ಆಹಾರದ ಹಕ್ಕನ್ನು ಕಸಿಯುವ ಮೂಲಕ ಪ್ರಜಾತಂತ್ರ ವಿರೋಧಿಯಾಗಿ ವರ್ತಿಸುತ್ತಿದೆ. 1964 ರ ಗೋಹತ್ಯೆ ನಿಷಿದ್ಧ ಕಾಯ್ದೆಯಲ್ಲೇ ವಯಸ್ಸಾದ ಮತ್ತು ಕೆಲಸಕ್ಕೆ ಬಾರದ ಗೋವನ್ನು ಮಾರಲು ಅವಕಾಶವಿದೆ. ಆದರೆ ಬಿಜೆಪಿ ಏಕೆ ಇದನ್ನು ಪದೇ ಪದೆ ಪ್ರಸ್ತಾಪಿಸುತ್ತಿದೆ ಎಂದು ಪ್ರಶ್ನಿಸಿದರು.

ಇದು ರೈತರ ಬದುಕಿಗೆ ಸಂಬಂಧಿಸಿದ ವಿಷಯ. ಬಿಜೆಪಿಯ ಮುಖಂಡರು ಬಹಳಷ್ಟು ಮಂದಿ ಹೊಲ ಉತ್ತಿಲ್ಲ, ಸಗಣಿ ಬಳಿದಿಲ್ಲ, ಕಳೆಯನ್ನೂ ಕಿತ್ತಿಲ್ಲ, ಎಮ್ಮೆ, ಕರು, ಹಸುವನ್ನು ತೊಳೆದಿಲ್ಲ. ಇಂತವರು ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಚರ್ಮೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಬೆಲ್ಟ್, ಶೂ ಸೇರಿದಂತೆ ಅನೇಕ ಕೈಗಾರಿಕೆಗಳು ಹಸುವಿನ ಚರ್ಮವನ್ನು ಅವಲಂಬಿಸಿವೆ. ಈ ಉದ್ಯಮಗಳಿಗೆ ಹೊಡೆತ ಬೀಳಲಿದೆ ಎಂದರು.

ಪ್ರಾಣಿ ಹತ್ಯೆ ನಿಷೇಧಿಸಬೇಕು ಎಂದು ಬುದ್ಧ ಹೇಳಿದ ಮೇಲೆ ಜನರು ಆತನ ತತ್ವಕ್ಕೆ ಆಕರ್ಷಿತರಾದರು. ಬುದ್ಧನ ಕಡೆಗೆ ಸಮುದಾಯ ಆಕರ್ಷಿತ ರಾಗದಂತೆ ತಡೆಯಲು ಮನುವಾದಿಗಳು ಗೋ ಹತ್ಯೆಯಂತ ಸೂಕ್ಷ್ಮ ಮತ್ತು ಭಾವನಾತ್ಮಕ ವಿಷಯ ಮುಂದೆ ತಂದರು.

ಬಳಿಕ ಜನಸಂಘ ಮತ್ತು ಆರ್‌ಎಸ್‌ಎಸ್‌ ಈ ವಿಷಯ ಇಟ್ಟುಕೊಂಡು ಚಳವಳಿ ಮಾಡಿ ಜನ ಬೆಂಬಲ ಗಳಿಸಿದರು. ಅದನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಕರೆ ಕೊಟ್ಟಾಗ, ಮಹಾತ್ಮ ಗಾಂಧಿ ಹತ್ಯೆ ಆಯಿತು. ಅಂದಿನಿಂದ ಇಂದಿನವರೆಗೆ ಗೋಹತ್ಯೆ ನಿಷೇಧವನ್ನು ಧಾರ್ಮಿಕವಾಗಿ ಮತ್ತು ಭಾವನಾತ್ಮಕವಾಗಿ ಜನರಲ್ಲಿ ತುಂಬಿ ರಾಜಕೀಯವಾಗಿ ಆಕರ್ಷಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ದಲಿತರ ಮನೆಯಲ್ಲಿ ಊಟ ಮಾಡುತ್ತೇವೆಂದು ಬಿಜೆಪಿಯವರು ದೇಶವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ? ಐಯ್ಯಂಗಾರ್‌, ಕಾಶ್ಮೀರಿ ಬ್ರಾಹ್ಮಣರ ಮನೆಗೆ ಊಟಕ್ಕೆ ಹೋದರೆ ಅವರ ಹೆಸರು ಹೇಳುವುದಿಲ್ಲ. ಪಂಡಿತರ ಮನೆಗೆ ಹೋಗಿದ್ದೆವು ಎನ್ನುತ್ತಾರೆ. ಆದರೆ, ದಲಿತರ ಮನೆಗೆ ಹೋಗಿ ಊಟ ಮಾಡಿ ದಲಿತರ ಊಟ ಎಂದು ಹೇಳಲಾಗುತ್ತಿದೆ.
-ಡಾ.ಎಚ್‌.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.