ವರ್ಷಾಂತ್ಯಕ್ಕೆ 25 ಕೆರೆಗಳಿಗೆ ನೀರು


Team Udayavani, Jun 25, 2017, 11:38 AM IST

mys5.jpg

ಭೇರ್ಯ: ಸತತ ಎಂಟು ವರ್ಷಗಳ ಪ್ರಯತ್ನದಿಂದಾಗಿ ಮುಕ್ಕನಹಳ್ಳಿ ಕೆರೆಯಿಂದ 25 ಕೆರೆಗಳಿಗೆ ಏತನೀರಾವರಿ ಯೋಜನೆಯಡಿ ನೀರು ತುಂಬಿಸುವ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್‌ ತಿಳಿಸಿದರು. ಇಲ್ಲಿನ ಸಮೀಪದ ಸಂಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.

ಮೇಲೂರು, ಕುಪ್ಪಳ್ಳಿ, ಮುದುಗುಪ್ಪೆ, ಸಂಕನಹಳ್ಳಿ, ಬಾಚಹಳ್ಳಿ, ಕೆಂಚನಹಳ್ಳಿ, ಕೊಡಿಯಾಲ, ನರಚನಹಳ್ಳಿ, ಹಳೇಮಿರ್ಲೆ, ವಡ್ಡರಕೊಪ್ಪಲು, ಹನುಮನಹಳ್ಳಿ, ಬಟಿಗನಹಳ್ಳಿ, ಗೇರದಡ, ಬಸವನಪುರ ಸೇರಿದಂತೆ ಭೇರ್ಯ ಗ್ರಾಮದ ವರೆಗೂ ಬರುವ ಈ ವ್ಯಾಪ್ತಿಯ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲು ಮಂಜೂರಾತಿ ದೊರತ್ತಿದ್ದು, ಇದಕ್ಕೆ ಟೆಂಡರ್‌ ಕರೆಯಲಾಗಿದೆ. ಈ ವರ್ಷದ ಡಿಸೆಂಬರ್‌ ಒಳಗೆ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸುತ್ತೇನೆ ಎಂದು ಭರವಸೆ ನೀಡಿದರು.

4 ಸಾವಿರ ಹೆಕ್ಟೇರ್‌ಗೆ ನೀರಾವರಿ: ಮುಕ್ಕನಹಳ್ಳಿ ಕೆರೆಯ ಏತನೀರಾವರಿ ಯೋಜನೆಯಿಂದಾಗಿ ಈ ಭಾಗದಲ್ಲಿ ಮೂರರಿಂದ ನಾಲ್ಕು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನೀರಾವರಿ ಬೆಳೆ ಮಾಡುವುದರ ಜೊತೆಗೆ ಈ ಭಾಗದಲ್ಲಿ ಅಂತರ್ಜಲ ವೃದ್ಧಿಯಾಗಲಿದೆ ಎಂದರು.

ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿನ ಯೋಜನೆ ಹಾಗೂ ಕೃಷಿ ಬಳಕೆಯ ಕೊಳವೆಬಾವಿಗಳು ನೀರಿಲ್ಲದೆ ಬತ್ತಿದ್ದವು. ಈ ಏತನೀರಾವರಿ ಯೋಜನೆಯಿಂದಾಗಿ ಮತ್ತೆ ಈ ಭಾಗದಲ್ಲಿ ನಾಲೆಗಳಲ್ಲಿ ನೀರು ಹರಿಯುವುದರಿಂದ ಅಂತರ್ಜಲದ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳು ಚೇತರಿಸಿಕೊಳ್ಳಲಿವೆ ಎಂದು ತಿಳಿಸಿದರು.

ನಂತರ ಮೈಮುಲ್‌ ಅಧ್ಯಕ್ಷ ಕೆ.ಜಿ.ಮಹೇಶ್‌ ಮಾತನಾಡಿ, ಕೆ.ಆರ್‌.ನಗರ ತಾಲೂಕಿನಲ್ಲಿ ಇದೂವರೆಗೂ 140 ಡೇರಿಗಳನ್ನು ಸ್ಥಾಪಿಸಲಾಗಿದ್ದು, ಮೊದಲನೆ ಅಥವಾ ಎರಡನೇ ವಾರದಲ್ಲಿ ಉತ್ಪಾದಕರಿಗೆ ಹಣ ಬಟವಾಡೆ ಮಾಡಲಾಗುತ್ತದೆ. ಪ್ರತಿದಿನ 9.8 ಲಕ್ಷ ಲೀಟರ್‌ ಹಾಲು ಬರುತ್ತಿದ್ದು, 3 ಲಕ್ಷ ಲೀಟರ್‌ ಹಾಲು ಮಾರಾಟ ಮಾಡಲಾಗುತ್ತಿದ್ದು, 1.50 ಲಕ್ಷ ಲೀಟರ್‌ ಹಾಲನ್ನು ಪೌಡರ್‌ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನಮ್ಮ ರಾಜ್ಯವಲ್ಲದೆ ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಬೇಸಿಗೆಯಲ್ಲಿ ಅತಿ ಹೆಚ್ಚು ಹಾಲಿನ ಪೌಡರ್‌ ಸರಬರಾಜು ಮಾಡುತ್ತಿದ್ದೇವೆ. ಸಹಕಾರ ಸಂಘಕ್ಕೆ ಪ್ರತಿಯೊಬ್ಬರ ಸಹಕಾರ ಮತ್ತು ಗುಟ್ಟಮಟ್ಟದ ಹಾಲನ್ನು ಸರಬರಾಜು ಮಾಡಿದ್ದಾಗ ಮಾತ್ರ ಸಹಕಾರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಸಾ.ರಾ.ಮಹೇಶ್‌, ಮೈಮುಲ್‌ ಅಧ್ಯಕ್ಷ ಕೆ.ಜಿ.ಮಹೇಶ್‌, ನಿರ್ದೇಶಕ ಎ.ಟಿ.ಸೋಮಶೇಖರ್‌ ಅವರನ್ನು  ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಮೈಮುಲ್‌ ನಿದೇರ್ಶಕ ಎ.ಟಿ.ಸೋಮಶೇಖರ್‌, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಸದಸ್ಯರಾದ ಆನಂದ, ಜೆಡಿಎಸ್‌ ಮುಖಂಡ ಮಿರ್ಲೆ ಧನಂಜಯ, ಮೇಲೂರು ನರೇಂದ್ರ, ಸಿಡಿಸಿ ಅಧ್ಯಕ್ಷ ಅನೀಫ್ಗೌಡ, ಡೇರಿ ಅಧ್ಯಕ್ಷ ಮಹೇಂದ್ರ, ಕಾರ್ಯದರ್ಶಿ ರವಿಚಂದ್ರ, ಗ್ರಾಪಂ ಸದಸ್ಯರಾದ ಮಂಗಳಮ್ಮ, ತುಳಸಿರಾಮೇಗೌಡ, ಅಭಿಲಾಷ್‌, ಮಮತಾ, ಡೈರಿ ನಿರ್ದೇಶಕರಾದ ವೃಷಭೇಂದ್ರ, ಪಟೇಲ್‌ ರಾಜಪ್ಪ, ಮಂಜೇಶ್‌, ರೂಪಾ, ಜಮುನಾ, ಹೋಟೆಲ್‌ ನಂಜಪ್ಪ, ನಟರಾಜ್‌, ಮೋಹನ್‌ಕುಮಾರ್‌ ಇತರರು ಉಪಸ್ಥಿತ‌ರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.