ಪಾಲಿಕೆ ಮಾಜಿ ಸದಸ್ಯ ಮಾದೇಶ್‌ ಆಸ್ತಿ ಮುಟ್ಟುಗೋಲು


Team Udayavani, Jul 19, 2017, 11:42 AM IST

mys3.jpg

ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಗರ ಪಾಲಿಕೆ ಮಾಜಿ ಸದಸ್ಯ ಸಿ.ಮಹದೇಶ(ಅವ್ವ ಮಾದೇಶ) ಸಮಾಜಘಾತುಕ ಕೃತ್ಯಗಳಿಂದ ಅಕ್ರಮವಾಗಿ ಸಂಪಾದಿಸಿದ್ದ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಿ.ಮಹದೇಶ ಹಾಗೂ ಆತನ ಸಹೋದರ ಸಿ.ಮಂಜು ಇಬ್ಬರೂ ಬಳ್ಳಾರಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಈ ಇಬ್ಬರು ಕೊಲೆ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ಹಾಗೂ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿ ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಅಕ್ರಮವಾಗಿ ಹಣ ಮತ್ತು ಆಸ್ತಿ ಸಂಪಾದನೆ ಮಾಡಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳು ಅಕ್ರಮವಾಗಿ ಗಳಿಸಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನಗರ ಪೊಲೀಸರು ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಕೋರಿಕೆ ಪತ್ರ ಸಲ್ಲಿಸಿದ್ದರು.

ಈ ಹಿನ್ನೆಲೆ ಪೊಲೀಸರು ಸಲ್ಲಿಸಿದ್ದ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಜಾರಿ ನಿರ್ದೇಶನಾಲಯ ಆರೋಪಿಗಗಳು ಮೈಸೂರು ನಗರದ 12 ಕಡೆಗಳಲ್ಲಿ ಅಕ್ರಮವಾಗಿ ಸಂಪಾದಿಸಿದ್ದ ಜಮೀನು ಹಾಗೂ ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 5.35 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಷ್ಟೇ ಅಲ್ಲದೆ ಇಬ್ಬರೂ ಇದೇ ರೀತಿ ಸಂಪಾದಿಸಿರುವ ಆಸ್ತಿಗಳ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಮುಂದುವರೆಸಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರ ರಾವ್‌ ತಿಳಿಸಿದರು. 

ಕೋಕಾ ಕಾಯ್ದೆಯಡಿ ತನಿಖೆ: 2008ರಲ್ಲಿ ನಡೆದಿದ್ದ ಹುಣಸೂರು ಜೋಡಿ ಕೊಲೆ ಪ್ರಕರಣ ಹಾಗೂ 2016ರಲ್ಲಿ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್‌ ದೇವೇಂದ್ರ ಕೊಲೆ ಪ್ರಕರಣದಲ್ಲಿ ಅವ್ವ ಮಾದೇಶ, ಆತನ ಸಹೋದರ ಮಂಜು ಸೇರಿದಂತೆ ಹಲವು ಮಂದಿ ಭಾ ಗಿಯಾಗಿದ್ದರು. ಈ ನಡುವೆ ಪ್ರಕರಣದ ತೀವ್ರತೆ ಅರಿತ ಪೊಲೀಸರು ಕೋಕಾ ಕಾಯ್ದೆಯಡಿ ತನಿಖೆ ನಡೆಸುವ ಮೂಲಕ ಒಟ್ಟು 28 ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಆರೋಪಿಗಳಾದ ಅವ್ವ ಮಾದೇಶ ಹಾಗೂ ಸಿ.ಮಂಜು ವಿರುದ್ಧ ಕೋಕಾ ಕಾಯ್ದೆ ಅಡಿಯಲ್ಲಿ ತನಿಖೆ ನಡೆಸಲಾಗಿದೆ. ಇದು ನಗರದಲ್ಲಿ ವಸೂಲಿ ಹಾಗೂ ರೌಡಿ ಚಟುವಟಿಕೆಗಳಿಂದ ಅಕ್ರಮವಾಗಿ ಆಸ್ತಿ ಸಂಪಾದಿಸುತ್ತಿರುವವರಿಗೆ ಎಚ್ಚರಿಕೆಯಾಗಿದ್ದು, ಹೀಗಾಗಿ ಮುಂದೆ ಸಮಾಜಘಾತುಕ ಚಟುವಟಿಕೆಗಳ ಮೂಲಕ ಅಕ್ರಮವಾಗಿ ಹಣ ಸಂಪಾದಿಸುವವರ ವಿರುದ್ಧ ಕೋಕಾ ಕಾಯ್ದೆಯಲ್ಲಿ ತನಿಖೆ ನಡೆಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
-ಡಾ.ಸುಬ್ರಹ್ಮಣ್ಯೇಶ್ವರ ರಾವ್‌, ನಗರ ಪೊಲೀಸ್‌ ಆಯುಕ್ತ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.