ಪ್ರತ್ಯೇಕ ಧರ್ಮ, ಚುನಾವಣಾ ರಣತಂತ್ರ; ನಾಳೆ ಒಕ್ಕಲಿಗರು ಕೇಳ್ತಾರೆ:HDK
Team Udayavani, Jul 25, 2017, 4:06 PM IST
ಮೈಸೂರು:ಪ್ರತ್ಯೇಕ ಲಿಂಗಾಯತ ಧರ್ಮ ಪ್ರಚಾರಕ್ಕೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಯತ್ನಿಸುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ವಾಗ್ದಾಳಿ ನಡೆಸಿ, ಇದು ರಾಜ್ಯ ಸರ್ಕಾರದ ಕೀಳುಮಟ್ಟದ ಚಿಂತನೆಯಾಗಿದೆ ಎಂದು ಹೇಳಿದರು.
ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಪ್ರಶ್ನಿಸಿದಾಗ, ಇದು ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರವಾಗಿದೆ. ಧರ್ಮ ಪ್ರಚಾರ ಸಚಿವರ ಕರ್ತವ್ಯ ಅಲ್ಲ. ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ನೀಡಿದರು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮಕ್ಕೆ ಅವಕಾಶ ಕೊಟ್ಟರೆ, ನಾಳೆ ಒಕ್ಕಲಿಗರು ಪ್ರತ್ಯೇಕ ಧರ್ಮಕ್ಕೆ ಮನವಿ ಮಾಡುತ್ತಾರೆ. ಆಗ ಎಲ್ಲ ಧರ್ಮಕ್ಕೂ ಪ್ರತ್ಯೇಕ ಸ್ಥಾನ ಮಾನ ಕೊಡಲಿಕ್ಕೆ ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬುದು ಕಾಂಗ್ರೆಸ್ ಪಕ್ಷದ ಚುನಾವಣಾ ರಣತಂತ್ರವಾಗಿದೆ. ಸರ್ಕಾರದ ಈ ನಿರ್ಧಾರ ಇತರೆ ಜಾತಿಗಳಿಗೆ ಪ್ರಚೋದನೆ ನೀಡಿದಂತಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್