ನಾಡ ಹಬ್ಬ ದಸರೆಯಲ್ಲಿ ಜನವೋ ಜನ…


Team Udayavani, Sep 23, 2017, 1:10 PM IST

mys4.jpg

ಮೈಸೂರು: ವರ್ಷವಿಡೀ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಹಾಗೂ ಅವರ ಕುಟುಂಬದವರನ್ನು ದಸರೆ ಸಂಭ್ರಮದಲ್ಲಿ ಭಾಗಿಯಾಗುವಂತೆ ಮಾಡುವ ರೈತ ದಸರಾ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ದೊರೆಯಿತು. ನಗರದ ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ 3 ದಿನಗಳ ರೈತ ದಸರೆಗೆ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್‌ ಚಾಲನೆ ನೀಡಿದರು.

ಈ ವೇಳೆ ಮಾತನಾಡಿ, 2-3 ತಿಂಗಳಿಂದ ಮಳೆ ಉತ್ತಮವಾಗಿ ಬೀಳುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸವುಂಟು ಮಾಡಿದ್ದು, ರೈತರಿಗೆ ಬೆಳೆ ಸಮೃದ್ಧವಾಗಿ ದೊರೆತು, ಅವರ ಸಾಲ ಕಡಿಮೆಯಾಗುವ ಮೂಲಕ ರೈತರ ಆತ್ಮಹತ್ಯೆಗಳು ನಿಲ್ಲಬೇಕಿದೆ ಎಂದರು. ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಕುಲಪತಿ ಡಾ.ಎಂ.ಶಿವಣ್ಣ, ರೈತರು ಕೃಷಿಯಲ್ಲಿ ಯಶಸ್ವಿಯಾಗಬೇಕಾದರೆ ಬದಲಾವಣೆಗೆ ಹೊಂದಿಕೊಂಡು ಬೆಳೆ ಬೆಳೆಯಬೇಕು. ರಾಜ್ಯದಲ್ಲಿ 72 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಇತ್ತು. ಅದು 21 ಲಕ್ಷ ಹೆಕ್ಟೇರ್‌ಗೆ ಕುಸಿದಿದೆ ಎಂದು ವಿಷಾದಿಸಿದರು.  

ಆಕರ್ಷಕ ಮೆರವಣಿಗೆ: ಈ ಮುನ್ನ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಆಯೋಜಿಸಿದ್ದ ಮೆರವಣಿಗೆಗೆ ಮೇಯರ್‌ ಎಂ.ಜೆ.ರವಿಕುಮಾರ್‌ ಚಾಲನೆ ನೀಡಿದರು.  ಪೂರ್ಣಕುಂಭ ಹೊತ್ತ ಸುಮಂಗಲಿಯರು ಮುಂದೆ ಸಾಗಿದರೆ, ಡೊಳ್ಳುಕುಣಿತ,ಕಂಸಾಳೆ, ಹುಲಿವೇಷ, ಹಗಲುವೇಷ, ವೀರಭದ್ರನ ಕುಣಿತ, ನಂದಿಧ್ವಜ ಕಲಾವಿದರು ಆಕರ್ಷಕ ನೃತ್ಯ ಮಾಡಿ ಹಿಂಬಾಲಿಸಿದರು. ಇದಾದ ಬಳಿಕ ಎತ್ತಿನಗಾಡಿಗಳು ಹೊರಟವು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಪಶುಭಾಗ್ಯ ಸ್ತಬ್ಧಚಿತ್ರ ಮೀನುಗಾರಿಕೆ ಇಲಾಖೆಯ ಸ್ತಬ್ಧಚಿತ್ರ ಸಾಮಾಜಿಕ ಅರಣ್ಯ ವಿಭಾಗದಿಂದ ನೀರಿಗಾಗಿ ಅರಣ್ಯ, ತೋಟಗಾರಿಕೆ ಇಲಾಖೆಯಿಂದ ಕೇಂದ್ರ, ರಾಜ್ಯ ಸರ್ಕಾರದ ಕಾರ್ಯಕ್ರಮ ಬಿಂಬಿಸುವ ಸ್ತಬ್ಧಚಿತ್ರ, ಕೃಷಿ ಇಲಾಖೆಯಿಂದ ಕೃಷಿಭಾಗ್ಯ ಸ್ತಬ್ಧಚಿತ್ರಗಳು ಎಲ್ಲರ ಗಮನ ಸೆಳೆಯಿತು. ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಕೆ.ಆರ್‌.ವೃತ್ತ, ದೇವರಾಜ ಅರಸು ರಸ್ತೆ ಮೂಲಕ ಜೆ.ಕೆ.ಮೈದಾನ ತಲುಪಿತು.

ವಸ್ತುಪ್ರದರ್ಶನ: ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ರೈತರನ್ನು ಆಕರ್ಷಿಸಿತು. 25 ಮಳಿಗೆಗಳು ರೈತರನ್ನು ಆಕರ್ಷಿಸಿದವು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಿ.ಮಂಜುನಾಥ್‌, ರೈತರ ದಸರಾ ಉಪ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ರಮೇಶ್‌, ಮಹದೇವ್‌, ಸೋಮೇಶ್‌ ಇದ್ದರು.  

ಸಚಿವರ ಗೈರು: ರೈತರ ಅಸಮಾಧಾನ  ರೈತರಿಗಾಗಿ ನಡೆಸುವ ರೈತದಸರೆ ಉದ್ಘಾಟನೆಗೆ ಕೃಷಿ ಸಚಿವ ಕೃಷ್ಣಬೈರೇಗೌಡ ಅವರ ಗೈರು ಹಾಜರಿ ನೆರೆದಿದ್ದ ರೈತರಲ್ಲಿ ಅಸಮಾಧಾನ ಮೂಡಿಸಿತು. ಪ್ರತಿಬಾರಿಯೂ ನೆಪಮಾತ್ರಕ್ಕೆ ರೈತ ದಸರೆ ನಡೆಸಲಾಗುತ್ತದೆ. ಆದರೆ ಇದರಲ್ಲಿ ರೈತರ ಅನುಕೂಲಕ್ಕಾಗಿ ಯಾವುದೇ ಮಾಹಿತಿ ಲಭಿಸುವುದಿಲ್ಲ. ಇನ್ನೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೂ ರೈತ ದಸರೆ ಬಗ್ಗೆ ಹೆಚ್ಚಿನ ಆಸಕ್ತಿ ತೋರುವುದಿಲ್ಲ ಎಂದು ಕೆಲವು ರೈತರು ತಮ್ಮ ಅಸಮಾಧಾನ ಹೊರಹಾಕಿದರು. 

ವಿವಿಧ ವಿಭಾಗಗಳ ಸಾಧಕ ರೈತರಿಗೆ ಸನ್ಮಾನ
ಕೃಷಿ ಇಲಾಖೆಯ ಜಿಲ್ಲಾ ಮಟ್ಟದ 2015-16ನೇ ಸಾಲಿನ ಬೆಳೆ ಕಟಾವು ಸ್ಪರ್ಧೆಯಲ್ಲಿ ಜಯಮ್ಮ, ರಾಜೇಂದ್ರ ಕುಮಾರ್‌, ವೀರಜಮ್ಮ, ಎ.ನಾಗರಾಜ್‌, ಕೃಷಿ ಇಲಾಖೆಯಿಂದ ತಾಲೂಕು ಮಟ್ಟದ ಕಟಾವು ಸ್ಪರ್ಧೆ ವಿಜೇತರಾದ ಕೆಂಪಲಮ್ಮ, ಪುಟ್ಟೇಗೌಡ, ಪಾಪೇಗೌಡ, ಕೆ.ಎಸ್‌.ಶಿವಕುಮಾರ್‌, ಕೆ.ನಾರಾಯಣ, ತೋಟಗಾರಿಕೆ ಇಲಾಖೆಯಿಂದ ಎನ್‌.ಕುಮಾರ್‌, ಗಿರಿಜಾ, ಮಾರಯ್ಯ,

ಪಶುಸಂಗೋಪನೆಯಿಂದ ಚಂದ್ರಶೇಖರ, ಅಶ್ವತ್ಥ, ಸಾಗರ್‌ ಅರಸ್‌, ಮೀನುಗಾರಿಕೆ ಇಲಾಖೆಯಿಂದ ಮಸ್ತಾನ್‌ ಸಾಬ್‌, ವಿ.ಮಹೇಶ್‌, ಮಂಚಯ್ಯ, ರೇಷ್ಮೆ ಇಲಾಖೆಯಿಂದ ಪುಟ್ಟೇಗೌಡ, ಮಲ್ಲೇಶ್‌, ಎಸ್‌.ಪಿ.ಬಸವರಾಜು, ಅರಣ್ಯ ಇಲಾಖೆಯಿಂದ ಎಚ್‌.ಬಿ.ಶಿವರಾಜು, ಎಸ್‌.ಎಂ.ಉಲ್ಲಾಸ್‌, ಎಚ್‌.ಎಸ್‌.ಮಂಜುನಾಥಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.