ಭಯವೇ ಧರ್ಮದ ಮೂಲ: ಹಂಸಲೇಖ


Team Udayavani, Sep 25, 2017, 1:14 PM IST

mys1.jpg

ಮೈಸೂರು: ದೇಶದ ಜನತಂತ್ರ ವ್ಯವಸ್ಥೆಯ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಂಡು ಜನತಂತ್ರ ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕವಿಗಳು ಎಚ್ಚರವಾಗಬೇಕು ಎಂದು ಸಂಗೀತ ನಿರ್ದೇಶಕ ಡಾ.ಹಂಸಲೇಖ ಅಭಿಪ್ರಾಯಪಟ್ಟರು. ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ದಯವೇ ಧರ್ಮದ ಮೂಲವಯ್ಯ, ದಯವಿಲ್ಲದ ಧರ್ಮ ಅದ್ಯಾವುದಯ್ಯ, ದಯೆ ಇರಬೇಕು ಸಕಲ ಪ್ರಾಣಿಗಳಲ್ಲಿ, ಕೂಡಲ ಸಂಗಮ ದೇವ ಎಂಬುದು ಬಸವಣ್ಣನ ವಚನವಾಗಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಇದು ಬದಲಾಗಿದ್ದು, ಭಯವೇ ಧರ್ಮದ ಮೂಲವಯ್ಯ, ಭಯವಿಲ್ಲದ ಧರ್ಮ ಯಾವುದಯ್ಯ, ಭಯವಿರಬೇಕು ಸಕಲ ಪ್ರಾಣಿಗಳಲ್ಲಿ, ಬೇಗ ನುಂಗಿಕೋ ಅಯ್ಯ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜನತಂತ್ರದ ಉಳಿವು: ದೇಶದಲ್ಲಿ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬುದು ಜನತಂತ್ರ ವ್ಯವಸ್ಥೆಯ ಆಶಯವಾಗಿದೆ. ಆದರೆ ಇಂದು ದೇಶದಲ್ಲಿ ಭಯವೇ ಧರ್ಮವಾಗಿದ್ದು, ಈ ನಿಟ್ಟಿನಲ್ಲಿ ಜನತಂತ್ರವನ್ನು ಉಳಿಸಬೇಕೆಂಬುದು ಕವಿಗೋಷ್ಠಿಯ ಆಶಯವಾಗಬೇಕಿದೆ ಎಂದರು.  ಇಂದು ಉತ್ತರ ಕೊರಿಯಾ ಮತ್ತು ಅಮೇರಿಕಾದ ನಡುವೆ ಮಾತಿನ ಯುದ್ಧ ಆರಂಭವಾಗಿದ್ದು, ಈ ಯುದ್ಧ ಮಾತಿನಲ್ಲೇ ಕೊನೆಯಾಗುವಂತೆ ಉದಯೋನ್ಮುಖ ಕವಿಗಳು ಕಾವ್ಯ ರಚನೆ ಮಾಡಬೇಕು ಎಂದು ಹೇಳಿದರು.

ಅವಗಣನೆ: ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲೂ ಕವಿಗಳು ಉತ್ತಮ ಕವಿತೆಗಳನ್ನು ರಚಿಸುತ್ತಿದ್ದಾರೆ. ಆದರೆ ಕವಿತೆಗಳನ್ನು ಕೇಳುವವರು ಮತ್ತು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇನ್ನೂ ಕವಿಗಳು ಅವಗಣನೆಗೆ ಒಳಗಾಗಿರುವ ಇಂತಹ ಸ್ಥಿತಿಯಲ್ಲಿ ದಸರೆಯ ನಾಲ್ಕು ವಿವಿಧ ಕವಿಗೋಷ್ಠಿ ನಡೆಸುತ್ತಿರುವುದು ಅಭಿನಂದನೀಯ.

ಅಲ್ಲದೆ ನಾಡೋಜ ನಿಸಾರ್‌ ಅಹಮದ್‌ ನಾಡಹಬ್ಬ ದಸರೆಯನ್ನು ಉದ್ಘಾಟಿಸಿದ್ದು ಕವಿಗಳಿಗೆ ದೊರೆತ ಗೌರವ ಆಗಿದೆ. ಕಾವ್ಯ ಓದುವುದರಿಂದ ಸಂತೋಷ, ಉಲ್ಲಾಸ ದೊರೆಯುವ ಜತೆಗೆ ಬುದ್ದಿ, ಬಾವಗಳ ಪ್ರಚೋಧನೆಯಾಗುತ್ತದೆ ಎಂದ ಅವರು, ಕವಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದರೆ ಸಮಾಜ ಅವರನ್ನು ನಮ್ಮವನೆಂದು ಒಪ್ಪಿಕೊಳ್ಳಲಿದೆ ಎಂದರು.

ಕೈಕೊಟ್ಟ ಕರೆಂಟ್‌: ಸಚಿವರು ಗರಂ
ದಸರಾ ಕವಿಗೋಷ್ಠಿ ಉದ್ಘಾಟನಾ ಸಮಾರಂ¸‌ದಲ್ಲಿ ಪದೇ ಪದೇ ಕರೆಂಟ್‌ ಕೈಕೊಡುತ್ತಿತ್ತು. ಸಚಿವ ಮಹದೇವಪ್ಪ ಅವರ ಬಾಷಣದ ವೇಳೆಯೂ ಕರೆಂಟ್‌ ಕಟ್‌ ಆಯಿತು. ಇದರಿಂದ ಅಸಮಾದಾನಗೊಂಡ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರ ಮೂಲಕ ಚೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಪವರ್‌ ಕಟ್‌ ಮಾಡದಂತೆ ಸೂಚಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಗಾಯಕಿ ಲತಾ ಹಂಸಲೇಖ, ಮೇಯರ್‌ ಎಂ.ಜೆ.ರವಿಕುಮಾರ್‌, ಉಪ ವಿಶೇಷಾಧಿಕಾರಿ ಡಾ ಬಿಕೆಎಸ್‌ ವರ್ಧನ್‌, ಕಾರ್ಯಧ್ಯಕ್ಷೆ  ಡಾ.ಎನ್‌.ಕೆ.ಲೋಲಾಕ್ಷಿ, ಉಪಾಧ್ಯಕ್ಷರಾದ ರತ್ನಅರಸ್‌, ಪ್ರಸನ್ನ ಹಾಜರಿದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.