ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಗುಟ್ಟಾ ರಸಮಂಜರಿ
Team Udayavani, Jan 16, 2017, 3:45 AM IST
ಮುಂಬೈ: ಹಲವು ಅಡೆತಡೆ ಹಾಗೂ ವಿಳಂಬಗಳ ಹೊರತಾಗಿಯೂ, ಸಹಸ್ರಾರು ಸಂಖ್ಯೆಯ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಫ್ರೆಂಚ್ ಸಂಗೀತಕಾರ ಡೇವಿಡ್ ಗುಟ್ಟಾ ಅವರ ರಸಮಂಜರಿ ಕಾರ್ಯಕ್ರಮ ಭಾನುವಾರ ಮಧ್ಯಾಹ್ನ ಬಿಕೆಸಿಯ ಜಿಯೋ ಗಾರ್ಡನ್ನಲ್ಲಿ ನಡೆಯಿತು.
“ಇದೊಂದು ಅಪರೂಪದ ಪಯಣ. ಕೊನೆಗೂ ನಾವು ಇದನ್ನು ಪೂರ್ಣಗೊಳಿಸಿ ದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ. ಮುಂಚಿತವಾ ಗಿಯೇ ಕಾರ್ಯಕ್ರಮಕ್ಕೆ ಆಗಮಿಸಿದ ನಿಮ್ಮ ಸಹನೆಗೆ ಧನ್ಯವಾದಗಳು’ ಎಂದು ಕಾರ್ಯಕ್ರಮ ಆರಂಭಕ್ಕೂ ಮುನ್ನ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿ ಗಳನ್ನುದ್ದೇಶಿಸಿ ಡೇವಿಡ್ ಗುಟ್ಟಾ ಮಾತನಾಡಿದರು. ಸುಮಾರು 90 ನಿಮಿಷಗಳ ಕಾಲ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ಪಾಲ್ಗೊಂಡಿದ್ದರು.
ರಸಮಂಜರಿ ಕಾರ್ಯಕ್ರಮವನ್ನು ಮಹಾಲಕ್ಷ್ಮಿ ರೇಸ್ಕೋರ್ಸ್ನಲ್ಲಿ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಮುಂಬೈ ಮಹಾನಗರ ಪಾಲಿಕೆ ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ ಬಳಿಕ, ಬಿಕೆಸಿಯ ಜಿಯೋ ಗಾರ್ಡನ್ನಲ್ಲಿ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿತ್ತು. ಸಂಗೀತ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೀಡಿದ ಗುಟ್ಟಾ ನಂತರ ಅದೇ ಸ್ಥಳದಲ್ಲಿ ಮತ್ತೂಮ್ಮೆ ಕಾರ್ಯಕ್ರಮ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ