ಸಿಯಾಚಿನ್ ವೀರ ಕೊಪ್ಪದಗೆ ಸೇನಾ ಪದಕ
Team Udayavani, Jan 16, 2017, 3:45 AM IST
ಹೊಸದಿಲ್ಲಿ: ಸಿಯಾಚಿನ್ ಯುದ್ಧಭೂಮಿಯಲ್ಲಿ ವೀರಮರಣ ಅಪ್ಪಿದ ಕನ್ನಡಿಗ ವೀರಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ ಅವರನ್ನು ರವಿ ವಾರ ಮರಣೋತ್ತರ “ಸೇನಾ ಪದಕ’ ನೀಡಿ ಗೌರವಿಸಲಾಯಿತು.
ದಿಲ್ಲಿಯಲ್ಲಿ ನಡೆದ ಸೇನಾ ದಿನಾ ಚರಣೆಯಲ್ಲಿ ದಿ| ಹನುಮಂತಪ್ಪ ಪತ್ನಿ ಮಹಾದೇವಿ ಕೊಪ್ಪದ ಅವರನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೇನಾ ಪದಕ ನೀಡಿ ಗೌರವಿಸಿದರು. 15 ಮಂದಿ ಇತರ ವೀರ ಯೋಧರನ್ನೂ ಸೇನಾ ಪದಕ ನೀಡಿ ಗೌರವಿಸಲಾಯಿತು.
ವಿಶ್ವದ ಅತ್ಯಂತ ಎತ್ತರದ ಯುದ್ಧ ಭೂಮಿ ಸಿಯಾಚಿನ್ನಲ್ಲಿ ಹಿಮಕುಸಿತ ಸಂಭವಿಸಿದಾಗ ಬರೋಬ್ಬರಿ 35 ಅಡಿ ಯಷ್ಟು ಹಿಮದ ಕೆಳಗೆ ಆರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು. ಆದರೆ ಅನಂತರ ದಿಲ್ಲಿಯ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹನುಮಂತಪ್ಪ ಕೊಪ್ಪದ್ ವಿಧಿವಶರಾಗಿದ್ದರು. ಅವರ ಶೂರತ್ವ, ಇಚ್ಛಾಶಕ್ತಿ ಬಗ್ಗೆ ದೇಶ ಹೆಮ್ಮೆ ಪಟ್ಟುಕೊಂಡಿತ್ತು.
ಕೊಪ್ಪದ ಅವರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಟದೂರ ಗ್ರಾಮದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು