ಫೆ.26ರಂದು ಹರಿಯಾಣದಲ್ಲಿ ಜಾಟರಿಂದ ಕಪ್ಪು ದಿನ ಆಚರಣೆ


Team Udayavani, Feb 25, 2017, 7:24 PM IST

Jat-Agitation700.jpg

ಚಂಡೀಗಢ : ಹರಿಯಾಣದಲ್ಲಿ ಕಳೆದ 28 ದಿನಗಳಿಂದ ಮೀಸಲಾತಿಯನ್ನು ಆಗ್ರಹಿಸಿ ಆಂದೋಲನ ನಡೆಸುತ್ತಿರುವ ಜಾಟರು ನಾಳೆ ಫೆ.26ರ ಭಾನುವಾರ ರಾಜ್ಯದಲ್ಲಿ ಕಪ್ಪು ದಿನವನ್ನು ಆಚರಿಸಲಿದ್ದಾರೆ.

ಸರಕಾರದ ನೀತಿಯನ್ನು ವಿರೋಧಿಸಲು ನಾಳೆ ಫೆ.26ರ ಭಾನುವಾರ ರಾಜ್ಯಾದ್ಯಂತ ಜಾಟ್‌ ಸಮುದಾಯದ ಸದಸ್ಯರು ಕಪ್ಪು ಮುಂಡಾಸು, ಕಪ್ಪು ಟೋಪಿ, ಕಪ್ಪು ರಿಬ್ಬನ್‌ ಹಾಗೂ ಕೈಗೆ ಕಪ್ಪು ಪಟ್ಟಿಯನ್ನು ಧರಿಸಬೇಕು ಎಂದು ಆಂದೋಲನದ ನೇತೃತ್ವ ವಹಿಸಿರುವ ಅಖೀಲ ಭಾರತ ಜಾಟ್‌ ಆರಕ್ಷಣ ಸಂಘರ್ಷ ಸಮಿತಿಯ ಅಧ್ಯಕ್ಷ ಯಶ್‌ಪಾಲ್‌ ಮಲಿಕ್‌ ಹೇಳಿದ್ದಾರೆ. 

ಮಾರ್ಚ್‌ 1ರಿಂದ ಪ್ರತಿಭಟನಕಾರರು ಸರಕಾರದೊಂದಿಗೆ ಸಹಕರಿಸುವುದಿಲ್ಲ. ಯಾರೊಬ್ಬರು ನೀರು, ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ; ಸರಕಾರಕ್ಕೆ ಬಾಕಿ ಇರುವ ಸಾಲದ ಕಂತು ಕಟ್ಟುವುದಿಲ್ಲ ಎಂದು ಮಲಿಕ್‌ ಹೇಳಿದರು.

ಸಂಸತ್ತಿಗೂ ಮುತ್ತಿಗೆ ಹಾಕುವ ಯೋಜನೆ ಇದ್ದು ಅದರ ದಿನಾಂಕವನ್ನು ಮಾರ್ಚ್‌ 2ರಂದು ಪ್ರಕಟಿಸಲಾಗುವುದು. ಅಂದು ದಿಲ್ಲಿ ಮತ್ತು ಉತ್ತರ ಪ್ರದೇಶದಲ್ಲಿನ ಜಾಟರು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮೀಸಲು ವಿಷಯದಲ್ಲಿ ಮನವಿಯನ್ನು ಸಲ್ಲಿಸುವರು ಎಂದು ಮಲಿಕ್‌ ಹೇಳಿದರು. 

ಈ ನಡುವೆ ಹರಿಯಾಣದಲ್ಲಿನ ಪ್ರಧಾನ ವಿರೋಧ ಪಕ್ಷವಾಗಿರುವ ಐಎನ್‌ಎಲ್‌ಡಿ ಈ ಬಾರಿ ಜಾಟ್‌ ಆಂದೋಲನಕ್ಕೆ ತನ್ನ ಬೆಂಬಲವನ್ನು ಪ್ರಕಟಿಸಿದ್ದು ಸರಕಾರ ಜಾಟರ ಬೇಡಿಕೆಗಳನ್ನು ಪೂರೈಸಬೇಕೆಂದು ಕೇಳಿಕೊಂಡಿದೆ.
 
ಜಾಟರ ಈ ಹೊಸ ಚಳವಳಿಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೂಕ್ಷ್ಮ ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ಅರೆಸೈನಿಕ ಪಡೆಯನ್ನು ನಿಯೋಜಿಸಲಾಗಿದೆ; ರಾಜ್ಯ ಪೊಲೀಸರನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.