ರಾಹುಲ್ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ
Team Udayavani, Mar 19, 2017, 3:50 AM IST
ಹೊಸದಿಲ್ಲಿ: ಚುನಾವಣೆಗಳಲ್ಲಿ ಪದೇ ಪದೆ ಎಡವುತ್ತಿರುವ ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾಣೆಗೆ ಆಗ್ರಹಗಳು ಕೇಳಿಬರುತ್ತಿರುವಂತೆಯೇ, ಇವುಗಳ ಬಗ್ಗೆ ನಿರ್ಣಾಯಕ ನಿರ್ಧಾರಗಳನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಕೈಗೊಳ್ಳಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ, ಉತ್ತರಪ್ರದೇಶದಲ್ಲಿ ಪಕ್ಷದ ಸೋಲಿನ ಕುರಿತಂತೆ ಇಂಡಿಯನ್ ಎಕ್ಸ್ಪ್ರೆಸ್ ಐಡಿಯಾ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೀಗ ಹೊಸ ಕಾಂಗ್ರೆಸ್ ಬೇಕಾಗಿದೆ. ಹೊಸ ದಾರಿ, ಹೊಸ ರೀತಿಯ, ಹೊಸ ಪ್ರಚಾರ ಕಾರ್ಯ, ಹೊಸ ಆಲೋಚನೆಗಳುಳ್ಳ ಪಕ್ಷ ಬೇಕಾಗಿದೆ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಪಾಲಿಗೆ ರಾಹುಲ್ ಅವರಿಗಿಂತ ಸೂಕ್ತ ವ್ಯಕ್ತಿ ಬೇರಾರೂ ಇಲ್ಲ. ರಾಹುಲ್ ತಕ್ಕ ನಿರ್ಣಯ ಕೈಗೊಳ್ಳುತ್ತಿಲ್ಲ ಎಂಬುದೇ ನನ್ನ ದೂರು. ನನ್ನ ಈ ಮಾತುಗಳನ್ನು ಪದೇ ಪದೆ ಕೇಳಿ ಕೆಲವೊಮ್ಮೆ ಅವರು ಕೋಪಗೊಂಡಿದ್ದೂ ಇದೆ ಎಂದು ದಿಗ್ವಿಜಯ್ ಹೇಳಿದ್ದಾರೆ.
2014 ಚುನಾವಣೆ ಬಳಿಕ ಎ.ಕೆ.ಆ್ಯಂಟನಿ ಸಮಿತಿ ಕಾಂಗ್ರೆಸ್ ಸುಧಾರಣೆ ಕುರಿತಾಗಿ ಕೊಟ್ಟ ವರದಿಯೂ ಅನುಷ್ಠಾನಗೊಂಡಿಲ್ಲ ಎಂಬುದನ್ನು ಅವರು ಬೊಟ್ಟುಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ