ಮಣಿಪುರದಲ್ಲಿ 130 ದಿನಗಳ ಆರ್ಥಿಕ ದಿಗ್ಬಂಧನ ಮುಕ್ತಾಯ
Team Udayavani, Mar 20, 2017, 10:08 AM IST
ಇಂಫಾಲ: ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 130 ದಿನಗಳಿಂದ ಜಾರಿಯಲ್ಲಿದ್ದ ಆರ್ಥಿಕ ದಿಗ್ಬಂಧನ ಹಿಂಪಡೆಯಲಾಗಿದೆ. ರವಿವಾರ ತಡರಾತ್ರಿಯಿಂದ ಯಾವುದೇ ರೀತಿಯ ಸಮಸ್ಯೆಗಳು ಇರುವುದಿಲ್ಲವೆಂದು ಸೇನಾಪತಿ ಜಿಲ್ಲೆಯಲ್ಲಿ ಕೇಂದ್ರ, ರಾಜ್ಯ ಮತ್ತು ನಾಗಾ ಸಂಘಟನೆಗಳ ನಡುವಿನ ಮಾತುಕತೆಯಲ್ಲಿ ತೀರ್ಮಾನಿಸಲಾಗಿದೆ. ಬಂಧಿತ ಯುನೈಟೆಡ್ ನಾಗಾ ಕೌನ್ಸಿಲ್ನ ಮುಖಂಡರನ್ನು ಸರಕಾರ ಬೇಷರತ್ ಬಿಡುಗಡೆ ಮಾಡಲಿದ್ದು, ಆರ್ಥಿಕ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ನಾಗಾ ಬುಡಕಟ್ಟು ಮುಖಂಡರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಿದೆ.
ಮತ್ತೂಂದು ಗಮನಾರ್ಹ ಬೆಳವಣಿಗೆಯಲ್ಲಿ ಎನ್.ಬೈರೇನ್ ಸಿಂಗ್ ನೇತೃತ್ವದ ಮೈತ್ರಿಕೂಟದ ಸರಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ. ಹೀಗಾಗಿ, ಬಿಜೆಪಿ ಶಾಸಕರು ಗುವಾಹಾಟಿಯ ರೆಸಾರ್ಟಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗ್ಗೆ ವಿಶೇಷ ವಿಮಾನದಲ್ಲಿ ಇಂಫಾಲಕ್ಕೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ