ಮನೋಜ್ ಸಿನ್ಹಾ ಸಿಎಂ ಕನಸು ಭಗ್ನವಾಗಿದ್ದು ಯಾರಿಂದ?
Team Udayavani, Mar 20, 2017, 10:19 AM IST
ಕೇಂದ್ರ ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಅವರು ಉತ್ತರ ಪ್ರದೇಶ ಸಿಎಂ ಆಗದಂತೆ ತಡೆದಿದ್ದು ಯಾರು? ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದು ಯಾರು? ಆರೆಸ್ಸೆಸ್ ಎನ್ನುತ್ತದೆ ಮೂಲಗಳು! ಮನೋಜ್ ಸಿನ್ಹಾ ಉತ್ತರಪ್ರದೇಶ ಸಿಎಂ ಆಗುವುದು ಬಿಜೆಪಿಯ ಸೈದ್ಧಾಂತಿಕ ಸಲಹೆಗಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ(ಆರೆಸ್ಸೆಸ್) ಇಷ್ಟವಿರಲಿಲ್ಲ. ಹೀಗಾಗಿ, ಸಿನ್ಹಾ ಹೆಸರನ್ನು ಕೈಬಿಟ್ಟು ಪಕ್ಷದ ಫೈರ್ಬ್ರಾಂಡ್ ಯೋಗಿ ಆದಿತ್ಯನಾಥ್ರನ್ನು ಸಿಎಂ ಪಟ್ಟಕ್ಕೇರಿಸಿತು ಎಂದು ‘ದಿ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಎಬಿವಿಪಿ ಕಾರ್ಯಕರ್ತನಾಗಿ ಅನುಭವ ಹೊಂದಿದ್ದರೂ ಸಿನ್ಹಾಗೆ ಆರೆಸ್ಸೆಸ್ ಇಷ್ಟಪಡುವ ರೀತಿಯಲ್ಲಿ ರಾಜ್ಯದಲ್ಲಿ ಸೈದ್ಧಾಂತಿಕ ಯುದ್ಧವನ್ನು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವಿಲ್ಲ ಎನ್ನುವುದು ಸಂಘದ ಅಭಿಪ್ರಾಯವಾಗಿತ್ತು. ಜತೆಗೆ, ನಿರ್ದಿಷ್ಟ ಜಾತಿಯೊಂದರ ಬಗ್ಗೆ ಸಿನ್ಹಾಗೆ ಮೃದುಧೋರಣೆ ಇರುವುದೂ ಅವರಿಗೆ ಮುಳುವಾಯಿತು. ಜಾತಿ ತಾರತಮ್ಯ ಮಾಡದ ನ್ಯೂಟ್ರಲ್ ನಾಯಕನೊಬ್ಬ ಆರೆಸ್ಸೆಸ್ಗೆ ಬೇಕಿತ್ತು. ಜತೆಗೆ, ಆರೆಸ್ಸೆಸ್ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ಅವರಿಗೂ ಸಿನ್ಹಾ ಬಗ್ಗೆ ಅಷ್ಟೊಂದು ಒಲವಿಲ್ಲದಿರುವುದೂ ಅವರ ಆಯ್ಕೆಗೆ ಕಲ್ಲು ಹಾಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ