ಕಿಶೋರ್ ಬಗ್ಗೆ ಮಾಹಿತಿ ಕೊಟ್ರೆ 5 ಲಕ್ಷ ಇನಾಮು;ಯುಪಿಯಲ್ಲಿ ಪೋಸ್ಟರ್!
Team Udayavani, Mar 20, 2017, 3:34 PM IST
ಲಕ್ನೋ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹಾಗೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಉತ್ತರಪ್ರದೇಶ ಬಲ್ಲಿಯಾ ಜಿಲ್ಲೆಯ ಕಾಂಗ್ರೆಸ್ ಮುಖಂಡ ಲಕ್ನೋ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹಾಕಿಸಿರುವ ಪೋಸ್ಟರ್ ನಲ್ಲಿ ಘೋಷಿಸಿದ್ದಾರೆ!
ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪರ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿರುವ ಐ ಪ್ಯಾಕ್ ಸಂಘಟನೆ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಪಂಚರಾಜ್ಯಗಳಲ್ಲಿ ಪ್ರಮುಖವಾಗಿದ್ದ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಉಸ್ತುವಾಗಿ ವಹಿಸಿತ್ತು. ಆದರೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ಧೂಳೀಪಟವಾಗಿತ್ತು. ಫಲಿತಾಂಶ ಪ್ರಕಟವಾದ ಮೇಲೆ ಪ್ರಶಾಂತ್ ಕಿಶೋರ್ ಕೂಡಾ ನಾಟ್ ರಿಚೇಬಲ್ ಆಗಿದ್ದರು!
ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರ ಆಶಯದಂತೆ ಕಿಶೋರ್ ಪತ್ತೆಗಾಗಿ ಈ ಪೋಸ್ಟರ್ ಹಾಕಿಸಲಾಗಿದೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ರಾಜೇಶ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…