ಕಿಶೋರ್ ಬಗ್ಗೆ ಮಾಹಿತಿ ಕೊಟ್ರೆ 5 ಲಕ್ಷ ಇನಾಮು;ಯುಪಿಯಲ್ಲಿ ಪೋಸ್ಟರ್!
Team Udayavani, Mar 20, 2017, 3:34 PM IST
ಲಕ್ನೋ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹಾಗೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಉತ್ತರಪ್ರದೇಶ ಬಲ್ಲಿಯಾ ಜಿಲ್ಲೆಯ ಕಾಂಗ್ರೆಸ್ ಮುಖಂಡ ಲಕ್ನೋ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹಾಕಿಸಿರುವ ಪೋಸ್ಟರ್ ನಲ್ಲಿ ಘೋಷಿಸಿದ್ದಾರೆ!
ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪರ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿರುವ ಐ ಪ್ಯಾಕ್ ಸಂಘಟನೆ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಪಂಚರಾಜ್ಯಗಳಲ್ಲಿ ಪ್ರಮುಖವಾಗಿದ್ದ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಉಸ್ತುವಾಗಿ ವಹಿಸಿತ್ತು. ಆದರೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ಧೂಳೀಪಟವಾಗಿತ್ತು. ಫಲಿತಾಂಶ ಪ್ರಕಟವಾದ ಮೇಲೆ ಪ್ರಶಾಂತ್ ಕಿಶೋರ್ ಕೂಡಾ ನಾಟ್ ರಿಚೇಬಲ್ ಆಗಿದ್ದರು!
ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರ ಆಶಯದಂತೆ ಕಿಶೋರ್ ಪತ್ತೆಗಾಗಿ ಈ ಪೋಸ್ಟರ್ ಹಾಕಿಸಲಾಗಿದೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ರಾಜೇಶ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?