ಯುಪಿಯಲ್ಲಿ ಗೋ ಕಳ್ಳ ಸಾಗಣೆ, ಗುಟ್ಕಾ ಬ್ಯಾನ್; ಸಿಎಂ ಯೋಗಿ ಆದೇಶ
Team Udayavani, Mar 22, 2017, 3:07 PM IST
ಲಕ್ನೋ: ಉತ್ತರಪ್ರದೇಶದಲ್ಲಿ ಬಹಳಷ್ಟು ಬದಲಾವಣೆ ಆಗಬೇಕಾಗಿದೆ ಎಂದು ಲೋಕಸಭೆಯಲ್ಲಿ ವಿದಾಯ ಭಾಷಣ ಮಾಡುತ್ತ ಹೇಳಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಠಿಣ ಕ್ರಮ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಗೋ ಕಳ್ಳಸಾಗಾಣೆ ಬಂದ್ ಮಾಡುವಂತೆ ಆದೇಶ ನೀಡಿರುವ ಸಿಎಂ ಯೋಗಿ ಅವರು ಹಲವು ದಿಟ್ಟ ಹೆಜ್ಜೆ ಮುಂದಿಟ್ಟಿದ್ದಾರೆ. ಬಿಜೆಪಿ ನೇತೃತ್ವದ ಉತ್ತರಪ್ರದೇಶ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 3 ದಿನಗಳ ಬಳಿಕ ಈ ಬೆಳವಣಿಗೆಗೆ ಸಾಕ್ಷಿಯಾಗಿದೆ.
ಕಸಾಯಿಖಾನೆಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ರೂಪರೇಷೆ ಸಿದ್ಧಪಡಿಸುವಂತೆ ಸಿಎಂ ಯೋಗಿ ಅವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಕಾನೂನುಬದ್ಧವಾಗಿ ನಡೆಸುತ್ತಿರುವ ಕಸಾಯಿಖಾನೆಗಳನ್ನು ಕೂಡಾ ಬಂದ್ ಮಾಡುತ್ತಾರೆಯೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.
ಮಂಗಳವಾರ ವಾರಣಾಸಿಯ ಜೈಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲ್ ಗಡಾ ಪ್ರದೇಶದಲ್ಲಿನ ಅಕ್ರಮ ಕಸಾಯಿಖಾನೆಯನ್ನು ಜಿಲ್ಲಾಧಿಕಾರಿಗಳು ಬಂದ್ ಮಾಡಿದ್ದರು.
ಅಷ್ಟೇ ಅಲ್ಲ ಉತ್ತರಪ್ರದೇಶದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಪಾನ್ ಮಸಾಲ, ಗುಟ್ಕಾ ಬಳಸಲು ನಿಷೇಧ ಹೇರಲಾಗಿದೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿಯೇ, ಅಕ್ರಮ ಕಸಾಯಿಖಾನೆ ಹಾಗೂ ಗೋ ಕಳ್ಳ ಸಾಗಾಣೆ ಬಂದ್ ಮಾಡುವ ಭರವಸೆ ನೀಡಿತ್ತು.
ರೋಡ್ ರೋಮಿಯೋ ನಿಗ್ರಹ ದಳ:
ಉತ್ತರಪ್ರದೇಶದಲ್ಲೀಗ ಎಲ್ಲೆಂದರಲ್ಲಿ ಕಾಟ ಕೊಡುತ್ತಿದ್ದ ರೋಡ್ ರೋಮಿಯೋ ನಿಗ್ರಹ ದಳ ಕಾರ್ಯಾರಂಭಿಸಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ಪ್ರೇಮಿಗಳು ಪೊಲೀಸರ ಬಲೆಗೆ ಬೀಳುವಂತಾಗಿದೆ.
ಕಾಲೇಜು, ಪಾರ್ಕ್ ಸುತ್ತಮುತ್ತ ರೋಡ್ ರೋಮಿಯೋ ನಿಗ್ರಹ ದಳ ಕಾರ್ಯಾಚರಣೆ ನಡೆಸುತ್ತಿದೆ. ಆದರೆ ರೋಡ್ ರೋಮಿಯೋ ನಿಗ್ರಹ ದಳದ ವಿರುದ್ಧ ವಿದ್ಯಾರ್ಥಿಗಳು, ಜೋಡಿಗಳು ಅಸಮಾಧಾನವ್ಯಕ್ತಪಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ