ಆಕರ್ಷಣೆಗೆ ಸಿಆರ್‌ಝೆಡ್‌ ನಿರ್ಬಂಧ ಸಡಿಲ ಸಾಧ್ಯತೆ


Team Udayavani, Mar 23, 2017, 3:45 AM IST

coastal-regulation-zone.jpg

ನವದೆಹಲಿ: ಸಮುದ್ರದಿಂದ 500 ಮೀಟರ್‌ವರೆಗೆ ಗುರುತಿಸಲಾಗಿದ್ದ ಕರಾವಳಿ ನಿಯಂತ್ರಣ ವಲಯದಲ್ಲಿ (ಸಿಆರ್‌ಝೆಡ್‌) ಇದುವರೆಗೆ ಇದ್ದ ನಿರ್ಬಂಧಗಳನ್ನು ತೆಗೆದು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಇಲ್ಲಿ ಕಟ್ಟಡ ಸೇರಿದಂತೆ ಮಾನವ ಕೇಂದ್ರಿತ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ 1986ರ ಪರಿಸರ ರಕ್ಷಣಾ ಕಾಯ್ದೆಗೆ ತಿದ್ದುಪಡಿಗೆ ಚಿಂತಿಸಲಾಗುತ್ತಿದೆ.

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಾಗರ ತೀರ ಪ್ರದೇಶಗಳ ಆಕರ್ಷಣೆ ಹೆಚ್ಚಿಸಲು “ಕಡಲು ಮತ್ತು ಕರಾವಳಿ ನಿಯಂತ್ರಣ ವಲಯ’ (ಎಂಸಿಆರ್‌ಝೆಡ್‌) ಗುರುತಿಸಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಒಂದು ವೇಳೆ ಇದು ಜಾರಿಯಾದರೆ, ಕರಾವಳಿ ನಿಯಂತ್ರಣ ವಲಯದ 500 ಮೀ. ವರೆಗಿನ ಪ್ರದೇಶಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಅಲ್ಲದೆ ಮತ್ಸé ಸಂಸ್ಕರಣಾ ಘಟಕ, ಕರಾವಳಿ ಪೊಲೀಸ್‌ ಪಡೆಯ ಚಟುವಟಿಕೆಗಳು, ಸ್ಥಳೀಯ ಮೀನುಗಾರರ ಕುಟುಂಬಗಳ ಕಟ್ಟಡಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಬಹುದು.

ಸಿಆರ್‌ಝೆಡ್‌ನ‌ ನಿರ್ಬಂಧ ಸಡಿಲಗೊಳಿಸುವಂತೆ ಮುಖ್ಯವಾಗಿ ಮಹಾರಾಷ್ಟ್ರ ಸರ್ಕಾರದ ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು. ಅಲ್ಲದೆ, ಸುದೀರ್ಘ‌ ಕರಾವಳಿ ಹೊಂದಿರುವ ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೂ ಇದರ ಪರ ಧ್ವನಿಗೂಡಿಸಿದ್ದವು. ಅಲ್ಲದೆ, 2015ರಲ್ಲಿ ಶೈಲೇಶ್‌ ನಾಯಕ್‌ ಸಮಿತಿ ರಾಜ್ಯ ಸರ್ಕಾರಗಳು ಮತ್ತು ಮಧ್ಯವರ್ತಿಗಳ ಬೇಡಿಕೆ, ದೂರು- ದುಮ್ಮಾನಗಳನ್ನು ಆಲಿಸಿ, ನಿರ್ಬಂಧ ಸಡಿಲಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಜನಾನುಕೂಲ ಮತ್ತು ಭದ್ರತೆ ಸಂಬಂಧ ಚಟುವಟಿಕೆ ಕೈಗೊಳ್ಳಬಹುದೆಂದು ವರದಿಯಲ್ಲಿ ಹೇಳಿತ್ತು.

ಎಂಸಿಆರ್‌ಝೆಡ್‌ ಜಾರಿ ಆಗುವುದರಿಂದ ಈ ಪರಿಸರ ಸೂಕ್ಷ್ಮವಲಯದಲ್ಲಿನ ಜೀವಿಗಳಿಗೆ ಯಾವುದೇ ಜೀವಹಾನಿ ಆಗುವುದಿಲ್ಲ. ಈ ಸಂಬಂಧ ಭದ್ರತಾ ಕ್ರಮ ಕೈಗೊಳ್ಳಲೂ ಸರ್ಕಾರ ಚಿಂತಿಸಿದೆ ಎನ್ನಲಾಗಿದೆ. ಬೀಚ್‌ ಪ್ರದೇಶಗಳಲ್ಲಿ ಸ್ವತ್ಛತೆ ಕಾಪಾಡಲು, ಯಾವುದೇ ತ್ಯಾಜ್ಯಗಳನ್ನು ಅಲ್ಲಿ ಸುರಿಯದಂತೆ ಪ್ರವಾಸೋದ್ಯಮ ಇಲಾಖೆಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿಂದೆ ಸಿಟಿ ಪ್ರದೇಶ, ಗ್ರಾಮ ಪ್ರದೇಶ ಸೇರಿದಂತೆ ಆಯಾ ವಲಯಕ್ಕೆ ಸಂಬಂಧಿಸಿದಂತೆ ಸಿಆರ್‌ಝೆಡ್‌ನ‌ 4 ವಲಯಗಳನ್ನು ಸರ್ಕಾರ ಗುರುತಿಸಿತ್ತು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.