ದೆಹಲಿಯಲ್ಲಿ ಮಾಂಸದ ದರ ಹೆಚ್ಚಳ?
Team Udayavani, Mar 29, 2017, 3:45 AM IST
ಲಕ್ನೋ/ನವದೆಹಲಿ: ಉತ್ತರಪ್ರದೇಶ ಸರ್ಕಾರವು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸುತ್ತಿರುವುದರ ಪ್ರಭಾವವು ದೆಹಲಿಯ ಮೇಲೆ ಬೀರಿದೆ. ರಾಷ್ಟ್ರ ರಾಜಧಾನಿಯಲ್ಲಿ ಮಾಂಸದ ತೀವ್ರ ಕೊರತೆ ಉಂಟಾಗಿದ್ದು, ನವರಾತ್ರಿಯ ನಂತರ ಮಾಂಸದ ದರವು ಗಗನಮುಖೀಯಾಗುವ ಎಲ್ಲ ಸಾಧ್ಯತೆಗಳು ಗೋಚರಿಸಿವೆ.
ದೆಹಲಿಯ ನೆರೆ ರಾಜ್ಯ ಉತ್ತರಪ್ರದೇಶದಲ್ಲಿ ಕಸಾಯಿಖಾನೆಗಳು ಮುಚ್ಚುತ್ತಿರುವುದು ಮತ್ತು ಮಾಂಸ ವ್ಯಾಪಾರಿಗಳ ಮುಷ್ಕರದಿಂದಾಗಿ ಮಾಂಸದ ಪೂರೈಕೆ ಶೇ.50ರಷ್ಟು ಕಡಿಮೆಯಾಗಿದೆ. ನವರಾತ್ರಿಯ ಸಂದರ್ಭದಲ್ಲಿ ಹಿಂದೂಗಳು ಮಾಂಸಾಹಾರದಿಂದ ದೂರವುಳಿಯುವ ಕಾರಣ ಸದ್ಯಕ್ಕೆ ಗಂಭೀರ ಸಮಸ್ಯೆಯೇನೂ ತಲೆದೋರಿಲ್ಲ. ಆದರೆ, 9 ದಿನ ಕಳೆದರೆ ಮಾಂಸದ ಕೊರತೆ ತೀವ್ರವಾಗಲಿದೆ ಎಂದು ಕೈಗಾರಿಕಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಉತ್ತರಪ್ರದೇಶದಿಂದ ಕುರಿಗಳ ಮಾಂಸ ಪೂರೈಕೆಯೂ ಸಂಪೂರ್ಣ ಸ್ಥಗಿತಗೊಂಡಿದೆ. ಕುರಿ ಮಾಂಸ ವ್ಯಾಪಾರಿಗಳು ಪರವಾನಗಿ ಹೊಂದಿದ್ದರೂ, ದಾಳಿ ಭೀತಿಯಿಂದಾಗಿ ಮಾಂಸ ಪೂರೈಸುತ್ತಿಲ್ಲ, ಇದು ಹೀಗೇ ಮುಂದುವರಿದರೆ, ಮಾಂಸದ ಕೊರತೆ ಮಾತ್ರವಲ್ಲ, ದರವೂ ಹೆಚ್ಚಾಗಲಿದೆ ಎನ್ನುತ್ತಾರೆ ಗಾಜಿಪುರದ ಸಗಟು ಮಾರುಕಟ್ಟೆಯ ಅಧಿಕಾರಿಗಳು.
ಪರವಾನಗಿ ಇದ್ದರೂ ಮುಚ್ಚಿದ ವಧಾಗೃಹಗಳು
ಉತ್ತರಪ್ರದೇಶದಲ್ಲಿ 44 ಕಸಾಯಿಖಾನೆಗಳು ಪರವಾನಗಿ ಹೊಂದಿವೆ. ಆದರೆ, ಈ ಪೈಕಿ 26 ವಧಾಗೃಹಗಳನ್ನು ಮೂಲ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 26 ಕಸಾಯಿಖಾನೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆಯಷ್ಟೆ. ನಿಯಮದಂತೆ ನಡೆದುಕೊಂಡರೆ, ಅವುಗಳ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಹೇಳಿದ್ದಾರೆ. ಜತೆಗೆ, ಮುಷ್ಕರನಿರತ ಮಾಂಸ ವ್ಯಾಪಾರಿಗಳು ಯಾವುದೇ ದೂರು ಅಥವಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಮ್ಮ ಮುಂದೆ ಬಂದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ