ಜೈಲಲ್ಲಿರುವ ಎಲ್ಲ ಕೈದಿಗಳಿಗೆ ಸಮಾನ ಆಹಾರ: ಸಿಎಂ ಯೋಗಿ ಆದೇಶ
Team Udayavani, Apr 20, 2017, 3:56 PM IST
ಲಕ್ನೋ : ಉತ್ತರ ಪ್ರದೇಶದ ಜೈಲಿನಲ್ಲಿರುವ ಎಲ್ಲ ಕೈದಿಗಳಿಗೆ, ಅವರು ಬೇಕಿದ್ದರೆ ಸಣ್ಣ ಪುಟ್ಟ ಅಪರಾಧಗಳ ಕೈದಿಗಳೇ ಇರಲಿ ಅಥವಾ ಕ್ರಿಮಿನಲ್ ಡಾನ್ಗಳೇ ಇರಲಿ – ಅವರೆಲ್ಲರಿಗೂ ಜೈಲಿನಲ್ಲಿ ಒಂದೇ ಬಗೆಯ ಆಹಾರವನ್ನು ಕೊಡತಕ್ಕದ್ದು; ಯಾವುದೇ ತಾರತಮ್ಯ ಎಸಗಕೂಡದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಉನ್ನತ ಅಧಿಕಾರಿಗಳಿಗೆ ಅಪ್ಪಣೆ ಕೊಡಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿನ್ನೆ ಬುಧವಾರ ರಾಜ್ಯದಲ್ಲಿನ ಜೈಲುಗಳು, ಸುಧಾರಣಾ ಕೇಂದ್ರಗಳು ಮತ್ತು ಜಾಗೃತ ಇಲಾಖೆಗಳ ಪರಾಮರ್ಶೆ ಸಭೆಯ ನಡೆಸಿದ್ದ ವೇಳೆ ಈ ಆದೇಶವನ್ನು ಕೊಟ್ಟರು.
ರಾಜ್ಯದ ಜೈಲುಗಳಲ್ಲಿರುವ ಸಣ್ಣ ಪುಟ್ಟ ಕೈದಿಗಳು, ಡಾನ್ಗಳ ನಡುವೆ ಆಹಾರ, ಸೌಕರ್ಯ ಇತ್ಯಾದಿಗಳ ವಿಷಯದಲ್ಲಿ ತಾರತಮ್ಯ ಎಸಗಲಾಗುತ್ತಿದೆ; ಕೆಲವು ದೊಡ್ಡ ಕೈದಿಗಳು, ಮಾಫಿಯಾ ಡಾನ್ಗಳು ಜೈಲಿನಲ್ಲಿ ಫೋನ್ ಸೌಕರ್ಯ ಹೊಂದಿದ್ದಾರೆ ಎಂಬ ವರದಿಗಳ ಆಧಾರದಲ್ಲಿ ಈ ಆದೇಶ ನೀಡಿದ ಮುಖ್ಯಮಂತ್ರಿ ಯೋಗಿ, ಜೈಲುಗಳಲ್ಲಿ ಮೊಬೈಲ್ ಫೋನ್ ಜಾಮರ್ಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ