ಆಧಾರ್ ಐಚ್ಛಿಕವಲ್ಲವೇ,ಪ್ಯಾನ್ಗೆ ಏಕೆ ಕಡ್ಡಾಯ? ಸುಪ್ರೀಂ
Team Udayavani, Apr 22, 2017, 3:45 AM IST
ನವದೆಹಲಿ: ಆಧಾರ್ ಐಚ್ಛಿಕವಾಗಿರಬೇಕೇ ಹೊರತು ಅದನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಆದೇಶಿಸಿದ್ದರೂ, ಪ್ಯಾನ್ ಕಾರ್ಡ್(ಪರ್ಮನೆಂಟ್ ಅಕೌಂಟ್ ನಂಬರ್) ಹೊಂದಲು ಆಧಾರ್ ಕಡ್ಡಾಯ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಪ್ಯಾನ್ಗೂ ಆಧಾರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾ. ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಈ ಕುರಿತು ಸರ್ಕಾರದ ವಿರುದ್ಧ ಕಿಡಿಕಾರಿದೆ. ಸಮಾಜ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಆಧಾರ್ ಅನ್ನು ಸರ್ಕಾರ ಕಡ್ಡಾಯಗೊಳಿಸುವಂತಿಲ್ಲ ಎಂದು ಮಾ.27ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಆದರೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು ಆಧಾರ್ ಅನ್ನು ಕಡ್ಡಾಯಗೊಳಿಸಬಹುದು ಎಂದೂ ಹೇಳಿತ್ತು. ಇದನ್ನು ಪ್ರಸ್ತಾಪಿಸಿದ ನ್ಯಾಯಪೀಠ, “ನಮ್ಮ ಆದೇಶದ ಹೊರತಾಗಿಯೂ ಏಕೆ ಆಧಾರ್ ಅನ್ನು ಕಡ್ಡಾಯಗೊಳಿಸುತ್ತಿದ್ದೀರಿ,’ ಎಂದು ಸರ್ಕಾರವನ್ನು ಪ್ರಶ್ನಿಸಿದೆ.
ದುರ್ಬಳಕೆ ತಡೆಯಲು ಕ್ರಮ: ಪೀಠದ ಪ್ರಶ್ನೆಗೆ ಉತ್ತರಿಸಿದ ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, “ನಕಲಿ ದಾಖಲೆಗಳನ್ನು ನೀಡಿ ಪಡೆದಿರುವ ಪ್ಯಾನ್ ಸಂಖ್ಯೆಯ ವಿವರಗಳನ್ನು ನೀಡುವ, ಒಬ್ಬರೇ ಹಲವು ಪ್ಯಾನ್ ಸಂಖ್ಯೆಗಳನ್ನು ಹೊಂದಿರುವ, ನಕಲಿ ಕಾರ್ಡ್ಗಳ ಮೂಲಕ ಶೆಲ್ ಕಂಪನಿಗಳಿಗೆ ಹಣ ವರ್ಗಾಯಿಸುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಾಗಿ ಆಧಾರ್ ಕಡ್ಡಾಯ ಮಾಡಲಾಯಿತು,’ ಎನ್ನುವ ಮೂಲಕ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಇದಕ್ಕೆ ನ್ಯಾಯಪೀಠ, “ಈ ಸಮಸ್ಯೆಗೆ ಪ್ಯಾನ್ಗೆ ಆಧಾರ್ ಕಡ್ಡಾಯ ಮಾಡುವುದೇ ಪರಿಹಾರವೇ? ನ್ಯಾಯಾಲಯದ ಆದೇಶವಿದ್ದರೂ ನೀವು ಹೇಗೆ ಅದನ್ನು ಕಡ್ಡಾಯಗೊಳಿಸಿದಿರಿ’ ಎಂದು ಖಾರವಾಗಿ ಪ್ರಶ್ನಿಸಿತು. ಜತೆಗೆ, ಮುಂದಿನ ವಿಚಾರಣೆಯನ್ನು ಏ.25ಕ್ಕೆ ಮುಂದೂಡಿತು.
ಆದಾಯ ತೆರಿಗೆ ಕಾಯ್ದೆಯ 139 ಎಎ ಸೆಕ್ಷನ್ನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಿಪಿಐ ನಾಯಕ ಬಿನಾಯ್ ವಿಶ್ವಂ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಸೆಕ್ಷನ್ ಅನ್ವಯ, ಯಾರಲ್ಲಿ ಆಧಾರ್ ಕಾರ್ಡ್ ಇಲ್ಲವೋ, ಅವರಿಗೆ ಪ್ಯಾನ್ ಸಿಗುವುದಿಲ್ಲ. ಹೀಗಾದರೆ, ಆಧಾರ್ ಇಲ್ಲದಂತಹ ಜನರಿಗೆ ಬಹಳಷ್ಟು ತೊಂದರೆ ಆಗುತ್ತದೆ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು