ಜಾಧವ್ ವಿಚಾರದಲ್ಲಿ ಒಪ್ಪಂದ ಉಲ್ಲಂಘನೆ ಆಗಿಲ್ಲ: ಪಾಕ್
Team Udayavani, Apr 25, 2017, 3:45 AM IST
ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಚಾರದಲ್ಲಿ ಒಪ್ಪಂದದ ಉಲ್ಲಂಘನೆಯಾಗಿಲ್ಲ ಎಂದು ಪಾಕ್ ಹೇಳಿದೆ.
ಜಾಧವ್ ಅವರಿಗೆ ಕನ್ಸುಲರ್ರನ್ನು ಭೇಟಿಯಾಗಲು ಅವಕಾಶ ನಿರಾಕರಿಸುವ ಮೂಲಕ ಪಾಕಿಸ್ತಾನವು ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂ ಸಿದೆ ಎಂದು ಭಾರತ ಆರೋಪಿಸಿದ ಹಿನ್ನೆಲೆಯಲ್ಲಿ ಪಾಕ್ ಈ ಸ್ಪಷ್ಟನೆ ನೀಡಿದೆ. ಕನ್ಸುಲರ್ ಭೇಟಿಗೆ ಅವಕಾಶ ಕೋರಿ ಭಾರತವು ಈವರೆಗೆ 15 ಬಾರಿ ಪಾಕ್ಗೆ ಕೋರಿಕೆ ಸಲ್ಲಿಸಿದೆ. ಆದರೆ, ಪ್ರತಿ ಬಾರಿಯೂ ಪಾಕ್ ಅದನ್ನು ತಿರಸ್ಕರಿಸಿದೆ.
ಸೋಮವಾರ ಈ ಕುರಿತು ಮಾತನಾಡಿದ ಪಾಕ್ ಹೈಕಮಿಷನರ್ ಅಬ್ದುಲ್ ಬಾಸಿತ್, “ಒಪ್ಪಂದದ ಪ್ರಕಾರ, ಕನ್ಸುಲರ್ ಭೇಟಿಗೆ ಅವಕಾಶ ಕಲ್ಪಿಸುವಾಗ ರಾಜಕೀಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರಕರಣಗಳಿಗೆ ಆದ್ಯತೆ ನೀಡಲಾಗುತ್ತದೆ,’ ಎಂದಿದ್ದಾರೆ. ಜತೆಗೆ, ಜಾಧವ್ರನ್ನು ಬಂಧಿಸಿದ್ದು ಇರಾನ್ನಲ್ಲಿ ಅಲ್ಲ. ಬಲೂಚಿಸ್ತಾನದಲ್ಲಿ. ಅವರಿಂದ ವಶಕ್ಕೆ ಪಡೆಯಲಾದ 2 ಪಾನ್ಪೋರ್ಟ್ಗಳಲ್ಲಿ ಒಂದು ಭಾರತದ್ದು, ಮತ್ತೂಂದು ನಕಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ