ನಕಲಿ ಪಾಸ್‌ಪೋರ್ಟ್‌: ರಾಜನ್‌ ದೋಷಿ 


Team Udayavani, Apr 25, 2017, 3:45 AM IST

Chhota.jpg

ನವದೆಹಲಿ: ಮಂಡ್ಯದ ವಿಳಾಸ ನೀಡಿ ನಕಲಿ ಪಾಸ್‌ಪೋರ್ಟ್‌ ಪಡೆದಿದ್ದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌(55) ಮತ್ತು ಬೆಂಗಳೂರಿನ ಮೂವರು ನಿವೃತ್ತ ಸರ್ಕಾರಿ ಅಧಿಕಾರಿಗಳು ದೋಷಿಗಳು ಎಂದು ನವದೆಹಲಿಯ ವಿಶೇಷ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.

ಮೌಲ್ಯಯುತವಾದ ಭದ್ರತೆ ಎನ್ನಲಾಗುವ ಪಾಸ್‌ಪೋರ್ಟ್‌ ಅನ್ನೇ ನಕಲಿ ಮಾಡಿರುವ ಅಪರಾಧಕ್ಕೆ ಜೀವಾವಧಿಯೇ ಗರಿಷ್ಠ ಶಿಕ್ಷೆ. ಮಂಗಳವಾರ ಇವರ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದ ವಾದ-ಪ್ರತಿವಾದ ನಡೆಯಲಿದೆ. ಛೋಟಾ ರಾಜನ್‌ ಸದ್ಯ ತಿಹಾರ್‌ ಜೈಲಿನಲ್ಲಿದ್ದು, ಉಳಿದ ಆರೋಪಿಧಿಗಳಾದ ಜಯಶ್ರೀ ದತ್ತಾತ್ರೇಯ ರಾಹಟೆ, ದೀಪಕ್‌ ನಟವರ್‌ಲಾಲ್‌ ಶಾ ಮತ್ತು ಲಲಿತಾ ಲಕ್ಷ್ಮಣನ್‌ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಸೋಮವಾರ ತೀರ್ಪು ಪ್ರಕಟವಾಗುಧಿತ್ತಿದ್ದಂತೆ, ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯದ ವಿಳಾಸ ನೀಡಿದ್ದ: ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯ ಮೂವರು ಅಧಿಕಾರಿಗಳ ನೆರವು ಪಡೆದು, ಪಾತಕಿ ರಾಜನ್‌ 1998-99ರಲ್ಲಿ ನಕಲಿ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದ. “107/ಬಿ, ಹಳೇ ಎಂ.ಸಿ.ರಸ್ತೆ, ಆಜಾದ್‌ ನಗರ, ಮಂಡ್ಯ, ಕರ್ನಾಟಕ’ ಎಂಬ ವಿಳಾಸವನ್ನು ನೀಡಿ ಮೋಹನ್‌ ಕುಮಾರ್‌ ಎಂಬ ಹೆಸರಿನಲ್ಲಿ ಪಾಸ್‌ಪೋರ್ಟ್‌ ಮಾಡಿಕೊಂಡಿದ್ದ. ಆದರೆ, ಈ ಕುರಿತು ನಂತರ ಸಿಬಿಐ ತನಿಖೆ ನಡೆಸಿದಾಗ, ಆ ವಿಳಾಸದಲ್ಲಿ ಮೋಹನ್‌ ಕುಮಾರ್‌ ಎಂಬ ವ್ಯಕ್ತಿಯಾಗಲೀ, ಆ ವಿಳಾಸವಾಗಲೀ ಇಲ್ಲ ಎಂಬುದು ದೃಢವಾಗಿತ್ತು. ಜತೆಗೆ, ಅಂಚೆ ನೌಕರರೂ ಎಂಸಿ ರೋಡ್‌ ಮತ್ತು ಆಜಾದ್‌ ನಗರದಲ್ಲಿ 107/ಬಿ ಸಂಖ್ಯೆಯ ಮನೆ ಅಸ್ತಿತ್ವದಲ್ಲೇ ಇಲ್ಲ ಎಂದಿದ್ದರು. ಇದಲ್ಲದೆ, ಪ್ರಯಾಣ ದಾಖಲೆ ಪಡೆಯಲು ರಾಜನ್‌ ನಕಲಿ ಮತದಾರರ ಗುರುತಿನ ಚೀಟಿ ಮತ್ತು ನಕಲಿ ಪಡಿತರ ಕಾರ್ಡ್‌ ಅನ್ನೂ ಮಾಡಿಸಿಕೊಂಡಿದ್ದ.

ಸತ್ಯ ಮುಚ್ಚಿಟ್ಟ ಅಧಿಕಾರಿಗಳು: ರಾಜನ್‌ ಕೊಟ್ಟಿರುವ ದಾಖಲೆಗಳು ನಕಲಿ ಎಂದು ಗೊತ್ತಿದ್ದರೂ ಸತ್ಯ ಮುಚ್ಚಿಟ್ಟ ಆರೋಪವನ್ನು ಬೆಂಗಳೂರಿನ ಪಾಸ್‌ಪೋರ್ಟ್‌ ಕಚೇರಿ ಅಧಿಕಾರಿಗಳ ಮೇಲೆ ಹೊರಿಸಲಾಗಿದೆ. ಎಫ್004555 ಸಂಖ್ಯೆಯ ಪಾಸ್‌ಪೋರ್ಟ್‌ನಲ್ಲಿರುವ ಫೋಟೋ ಮತ್ತು ನವೀಕರಣಕ್ಕೆ ಸಲ್ಲಿಸಿದ್ದ ಹೊಸ ಅರ್ಜಿಯಲ್ಲಿದ್ದ ಫೋಟೋ ಮತ್ತು ಜನನ ದಿನಾಂಕ ಭಿನ್ನವಾಗಿದೆ ಎಂಬುದು ಗೊತ್ತಿದ್ದರೂ, ಅದನ್ನು ಲಲಿತಾ ಅವರು ಮುಚ್ಚಿಟ್ಟಿದ್ದರು ಎಂದು ಸಿಬಿಐ ಆರೋಪಪಟ್ಟಿಯಲ್ಲಿ ತಿಳಿಸಿತ್ತು.

ಇನ್ನು ಸೂಪರಿಂಟೆಂಡೆಂಟ್‌ ಆಗಿದ್ದ ಜಯಶ್ರೀ ಹಳೇ ಪಾನ್ಪೋರ್ಟ್‌ ನೋಡಿ, ಅದರಂತೆ ಜನನ ದಿನಾಂಕ ಬದಲಿಸಿದ್ದರು ಹಾಗೂ ಹೊಸ ಪಾಸ್‌ಪೋರ್ಟ್‌ ವಿತರಿಸಲು ಅನುಮತಿ ನೀಡಿದ್ದರು. ಪಾಸ್‌ಪೋರ್ಟ್‌ ಅಧಿಕಾರಿ ಷಾ ಅವರು, ಮೋಹನ್‌ ಕುಮಾರ್‌ ಹೆಸರಿನಲ್ಲಿ ಎ6705840 ಸಂಖ್ಯೆಯ ಪಾಸ್‌ಪೋರ್ಟ್‌ ಅನ್ನು ರಾಜನ್‌ಗೆ ನೀಡಿದ್ದರು. ಅಧಿಕಾರಿಗಳು ಮಂಡ್ಯ ಜಿಲ್ಲಾ ಪೊಲೀಸರಿಂದ ದೃಢೀಕರಣ ಪತ್ರಕ್ಕೆ ಕಾಯದೇ, ಪಾಸ್‌ಪೋರ್ಟ್‌ ನೀಡಿದ್ದರು ಎಂದು ಸಿಬಿಐ ಆರೋಪಿಸಿತ್ತು. ಹೀಗಾಗಿ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಸಂಚು, ವಂಚನೆ, ನಕಲು ಮಾಡಿ ವಂಚಿಸಿದ ಆರೋಪ ಹೊರಿಸಲಾಗಿತ್ತು.

85 ಕೇಸುಗಳು
ಒಂದು ಕಾಲದಲ್ಲಿ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರನಾಗಿದ್ದ ರಾಜನ್‌ 27 ವರ್ಷಗಳ ಕಾಲ ತಲೆಮರೆಸಿ ಕೊಂಡಿದ್ದ. 2015ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ರಾಜನ್‌ನನ್ನು ಬಂಧಿಸಿದ್ದ ಪೊಲೀಸರು ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದ್ದರು. ಈತನ ವಿರುದ್ಧ ಕೊಲೆ, ಡ್ರಗ್‌ ಕಳ್ಳಸಾಗಣೆ, ವಸೂಲಿ ದಂಧೆ ಸೇರಿದಂತೆ 85 ಕೇಸುಗಳಿವೆ. 
 

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.