ಉತ್ತರಾಖಂಡ:ಬಸ್ಸು ಕಂದಕಕ್ಕೆ ಉರುಳಿ 24 ಸಾವು; ಪ್ರಧಾನಿ ಪರಿಹಾರ ಘೋಷಣೆ


Team Udayavani, May 24, 2017, 10:49 AM IST

Gangotri Bus Accident-700.jpg

ಡೆಹರಾಡೂನ್‌ : ನಿನ್ನೆ ಮಂಗಳವಾರ ಗಂಗೋತ್ರಿಯಿಂದ ಮರಳುತ್ತಿದ್ದ ಯಾತ್ರಿಕರನ್ನು ಒಳಗೊಂಡ ಬಸ್ಸು ನಾಲೂಪಾನಿ ಎಂಬಲ್ಲಿ ಭಾಗೀರಥಿ ನದಿಗೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ  ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಈ ಭೀಕರ ದುರಂತಕ್ಕೆ ತೀವ್ರ ಶೋಕ ಮತ್ತು ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಅಪಘಾತವು ನಿನ್ನೆ ಮಂಗಳವಾರ ಸಂಜೆ ಆರು ಗಂಟೆಯ ಹೊತ್ತಿಗೆ ಘಟಿಸಿದೆ. ನತದೃಷ್ಟ ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು. ಇವರು ಗಂಗೋತ್ರಿಯಿಂದ ಹೃಷೀಕೇಶಕ್ಕೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿತು. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿತ್ತು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ರಾಜ್ಯದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದರು. 

ಐಟಿಬಿಪಿ, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್‌ ಸಿಬಂದಿಗಳ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಭರದಿಂದ ಇಂದು ಬೆಳಗ್ಗಿನ ವರೆಗೂ ನಡೆಯಿತು. ಬಸ್ಸು ಉರುಳಿ ಬಿದ್ದ ತಾಣವು ಅತ್ಯಂತ ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯ ಕಷ್ಟಕರವಾಯಿತು. 

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿ ಮೃತರ ಕುಟುಂಬಗಳಿಗೆ ರಾಜ್ಯದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಪ್ರಕಟಿಸಿದರು. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.