ರಜನಿಕಾಂತ್ ಬಿಜೆಪಿ ಸೇರಲು ನಿರ್ಧರಿಸಿದರೆ ಸ್ವಾಗತವಿದೆ: ಅಮಿತ್ ಶಾ
Team Udayavani, May 24, 2017, 11:15 AM IST
ಹೊಸದಿಲ್ಲಿ : ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡುವರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಯಾರಿಗೂ ಏನೂ ಖಚಿತವಾಗಿ ಗೊತ್ತಿಲ್ಲ; ಕೇವಲ ಊಹಾಪೋಹಗಳು ಮಾತ್ರ ಗುಲ್ಲೆಬ್ಬಿಸುತ್ತಿವೆ; ಹಾಗಿದ್ದರೂ ಈ ನಡುವೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ‘ರಜನಿಕಾಂತ್ ಅವರಂತಹ ಎಲ್ಲ ಸಜ್ಜನರಿಗೆ ಬಿಜೆಪಿಯ ಬಾಗಿಲು ಸದಾ ತೆರೆದಿರುತ್ತದೆ’ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರನ್ನು ಉಲ್ಲೇಖೀಸಿ ವರದಿ ಮಾಡಿರುವ ಟಿವಿ ಸುದ್ದಿ ವಾಹಿನಿಯೊಂದು, “ಎಲ್ಲ ಸಜ್ಜನರಿಗೆ ರಾಜಕೀಯ ಸೇರುವುದಕ್ಕೆ ಸ್ವಾಗತವಿದೆ; ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಒಂದೊಮ್ಮೆ ಬಿಜೆಪಿ ಸೇರಲು ಬಯಸಿದರೆ ನಾವು ಅವರನ್ನು ಸ್ವಾಗತಿಸುತ್ತೇವೆ; ತಾವು ಯಾವಾಗ ರಾಜಕೀಯ ರಂಗ ಪ್ರವೇಶಿಸಬೇಕು ಎಂಬುದನ್ನು ರಜನಿಕಾಂತ್ ಅವರೇ ನಿರ್ಧರಿಸಬೇಕು’ ಎಂದು ಅಮಿತ್ ಶಾ ಹೇಳಿರುವುದಾಗಿ ತಿಳಿಸಿದೆ.
ಬಿಜೆಪಿ ಸೇರುವುದಕ್ಕಾಗಿ ರಜನಿಕಾಂತ್ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂಬ ವದಂತಿಯನ್ನು ವೆಂಕಯ್ಯ ನಾಯ್ಡು ಅವರಂತೆ ಅಮಿತ್ ಶಾ ಕೂಡ ತಳ್ಳಿ ಹಾಕಿದ್ದಾರೆ.
ರಜನಿಕಾಂತ್ ಬಿಜೆಪಿ ಸೇರುವ ಬಗ್ಗೆ ತಾನು ಅವರೊಂದಿಗೆ ಮಾತನಾಡಿದ್ದೇನೆ ಎಂಬ ವದಂತಿಗಳನ್ನು ಕೂಡ ಅಮಿತ್ ಶಾ ತಳ್ಳಿ ಹಾಕಿದರು.
ಕಳೆದ ವಾರವಷ್ಟೇ ರಜನಿಕಾಂತ್ ಅವರು “ದೇವರು ಬಯಸಿದರೆ ನಾನು ರಾಜಕೀಯ ಸೇರುವೆನು’ ಎಂದು ಹೇಳಿದ್ದರು. ರಜನಿಕಾಂತ್ ಬಿಜೆಪಿ ಸೇರುವರೆಂಬ ಬಗೆಗಿನ ವದಂತಿಗಳಿಂದ ಅಸಂಖ್ಯ ಬಿಜೆಪಿ ನಾಯಕರು ಪುಳಕಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್