ಶೀನಾ ಬೋರಾ ಕೊಲೆ ತನಿಖಾಧಿಕಾರಿ ಪತ್ನಿನಿಗೂಢ ಕೊಲೆ; ಪುತ್ರ ನಾಪತ್ತೆ
Team Udayavani, May 24, 2017, 11:39 AM IST
ಮುಂಬಯಿ : ಅತ್ಯಂತ ಸಿನಿಮೀಯ ಶೈಲಿಯಲ್ಲಿ ನಡೆದಿದ್ದ ನಿಗೂಢ ಶೀನಾ ಬೋರಾ ಕೊಲೆ ಕೇಸಿನ ತನಿಖಾ ತಂಡದ ಭಾಗವಾಗಿದ್ದ ಮುಂಬಯಿ ಪೊಲೀಸ್ ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಗಣೋರೆ ಅವರ ಪತ್ರಿ ದೀಪಾಲಿ ಗಣೋರೆ ಅವರು ಮುಂಬಯಿಯ ಸಾಂತಾಕ್ರೂಜ್ನಲ್ಲಿನ ತಮ್ಮ ನಿವಾಸದಲ್ಲಿ ನಿನ್ನೆ ಮಂಗಳವಾರ ತಡ ರಾತ್ರಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ.
ಪತಿ ಧ್ಯಾನೇಶ್ವರ್ ಗಣೋರೆ ಅವರು ತಮ್ಮ ಕರ್ತವ್ಯ ಮುಗಿಸಿ ಇಂದು ಬುಧವಾರ ನಸುಕಿನ 3.30ರ ವೇಳೆಗೆ ಮನೆಗೆ ಮರಳಿದಾಗ ಪತ್ನಿ ಶವವಾಗಿ ಬಿದ್ದಿರುವುದನ್ನು ಕಂಡು ದಿಗಿಲಾದರು.
ಮುಂಬಯಿ ಪೊಲೀಸರ ಪ್ರಕಾರ, ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಅವರು ತಮ್ಮ ಮನೆ ಬಾಗಿಲನ್ನು ತೆರೆಯಲು ಪ್ರಯತ್ನಿಸಿ ವಿಫಲರಾದಾಗ ಪತ್ನಿಯ ಮೊಬೈಲ್ಗೆ ಫೋನ್ ಮಾಡಿದರು; ಆದರೆ ಆ ಹೊತ್ತಿಗೆ ಅದು ನಾಟ್ ರೀಚೇಬಲ್ ಆಗಿತ್ತು. ಕೊನೆಗೂ ಅವರು ಬಲವಂತದಿಂದ ಮನೆ ಬಾಗಿಲನ್ನು ತೆರೆದು ಒಳಪ್ರವೇಶಿಸಿದಾಗ ಪತ್ನಿ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.
ಧ್ಯಾನೇಶ್ವರ್ ಅವರ ಪುತ್ರ ಕೂಡ ನಾಪತ್ತೆಯಾಗಿದ್ದು ಆತನ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಗೊತ್ತಾಯಿತು. ಕೊಲೆಗೆ ಬಳಸಲಾದ ಚೂರಿ ಕೂಡ ಸ್ಥಳದಲ್ಲಿ ಪತ್ತೆಯಾಗಿದೆ.
ಇನ್ಸ್ಪೆಕ್ಟರ್ ಧ್ಯಾನೇಶ್ವರ್ ಪ್ರಕೃತ ಖಾರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!