ಕಬ್ಬಿನ ಬೆಂಬಲ ಬೆಲೆ 25 ರೂ. ಕನಿಷ್ಠ ಹೆಚ್ಚಳ
Team Udayavani, May 25, 2017, 2:25 AM IST
ಹೊಸದಿಲ್ಲಿ: ಕರ್ನಾಟಕ ಮತ್ತು ದೇಶದ ಇತರ ಭಾಗಗಳ ಕಬ್ಬು ಬೆಳೆಗಾರರಿಗೆ ಸಂತಸದ ಸುದ್ದಿ. ಕೇಂದ್ರ ಸರಕಾರ 2017-18ನೇ ಸಾಲಿನಲ್ಲಿ ಕಬ್ಬಿಗೆ ನೀಡುತ್ತಿದ್ದ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲಿಗೆ 25 ರೂ. ನಷ್ಟು ಏರಿಸಿದೆ. ಇದರಿಂದ ಪ್ರತಿ ಕ್ವಿಂಟಾಲ್ ಕಬ್ಬಿಗೆ 225 ರೂ. ಬೆಂಬಲ ಬೆಲೆ ಸಿಗಲಿದೆ. ಕೇಂದ್ರ ಸಚಿವ ಸಂಪುಟದ ಆರ್ಥಿಕ ವ್ಯವಹಾರಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶಾದ್ಯಂತ ಸಕ್ಕರೆ ಕಾರ್ಖಾನೆಗಳ ಪರಿಸ್ಥಿತಿ ಸುಧಾರಿಸಿದ್ದು, ಬೆಂಬಲ ಬೆಲೆಯನ್ನು ಶೇ.10.6ರಷ್ಟು ಹೆಚ್ಚಳಗೊಳಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಅಲ್ಲದೆ ಕಳೆದ ವರ್ಷ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬರಗಾಲ ಕಾಡಿದ್ದರಿಂದ ಕಬ್ಬಿನ ಇಳುವರಿ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮುಂಗಾರು ಆಗಲಿದೆ ಎಂದು ಹೇಳಿರುವುದರಿಂದಾಗಿ ಪರಿಸ್ಥಿತಿ ಸುಧಾರಿಸಬಹುದು ಎಂದು ತಿಳಿಸಿದ್ದಾರೆ.
ಎಫ್ಡಿಐ ಪರಿಶೀಲನಾ ಮಂಡಳಿ ರದ್ದು: ಈಗಿದ್ದ ವಿದೇಶಿ ನೇರ ಬಂಡವಾಳ ಹೂಡಿಕೆ ಕುರಿತ ಪರಿಶೀಲನಾ ಮಂಡಳಿಯನ್ನು ಕೇಂದ್ರ ಸಂಪುಟ ರದ್ದುಗೊಳಿಸಿದೆ. ಇದಕ್ಕೆ ಬದಲಾಗಿ ಬೇರೆಯೇ ಸಮಿತಿಯನ್ನು ಸ್ಥಾಪಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ