ಬೆಳಗಾವಿಗೆ ಅಂಟಿದ ‘ಕಳಪೆ ಸ್ಮಾರ್ಟ್‌ ಸಿಟಿ’ ಅಪಖ್ಯಾತಿ


Team Udayavani, May 25, 2017, 2:39 AM IST

Belguam-25-5.jpg

ಹೊಸದಿಲ್ಲಿ: ದೇಶದ ಪ್ರಮುಖ ನಗರಗಳಲ್ಲಿ ಜೀವನ ಮಟ್ಟ ಸುಧಾರಿಸುವ ಗುರಿಯೊಂದಿಗೆ ಕೇಂದ್ರ ಸರಕಾರ ಆರಂಭಿಸಿರುವ ‘ಸ್ಮಾರ್ಟ್‌ ಸಿಟಿ’ ಯೋಜನೆಯಡಿ ಆಯ್ಕೆಯಾಗಿರುವ ನಗರಗಳು ನಿಜಕ್ಕೂ ಸ್ಮಾರ್ಟಾಗಿವೆಯಾ? ಇಲ್ಲ ಎನ್ನುತ್ತಿದೆ ಸರಕಾರದ ವರದಿ! ಇದೇ ವರ್ಷ ಜನವರಿ ತಿಂಗಳು ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾದ ದೇಶದ 20 ನಗರಗಳು ಮೂಲ ಸೌಲಭ್ಯ ಅಭಿಧಿವೃದ್ಧಿಯ ಕನಿಷ್ಠ ಗುರಿಯನ್ನೂ ತಲುಪಿಲ್ಲ. ಈ 20 ಹಿಂದುಳಿದ ಸ್ಮಾರ್ಟ್‌ ಸಿಟಿಗಳ ಪಟ್ಟಿಯಲ್ಲಿ ರಾಜ್ಯದ ದಾವಣಗೆರೆ ಹಾಗೂ ಬೆಳಗಾವಿ ನಗರಗಳೂ ಇವೆ. ಅದರಲ್ಲೂ ಬೆಳಗಾವಿ ನಗರ ಪಟ್ಟಿಯಲ್ಲಿ 20ನೇ ರ್‍ಯಾಂಕ್‌ ಪಡೆಯುವ ಮೂಲಕ ಅತ್ಯಂತ ‘ಕಳಪೆ ಸ್ಮಾರ್ಟ್‌ ಸಿಟಿ’ ಎಂಬ ಅಪಖ್ಯಾತಿಗೆ ಗುರಿಯಾಗಿದೆ.

ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಬರುವ ನಗರ ವ್ಯವಹಾರಗಳ ರಾಷ್ಟ್ರೀಯ ಸಂಸ್ಥೆ (ಎನ್‌ಐಯುಎ) ನೀಡಿರುವ ಅಧ್ಯಯನ ವರದಿಯಿಂದ ಈ ಅಂಶ ತಿಳಿದಿದೆ. ಯೋಜನೆಯಡಿ ಆಯ್ಕೆಯಾದ ನಗರಗಳಲ್ಲಿನ ನೈರ್ಮಲ್ಯ, ಮೂಲ ಸೌಲಭ್ಯಗಳು, ಆಡಳಿತ ಸುಧಾರಣೆ ಮತ್ತು ಸಮಾಜ – ಆರ್ಥಿಕ ಸೂಚಕಗಳ ಆಧಾರದಲ್ಲಿ ಅಧ್ಯಯನ ನಡೆಸಲಾಗಿದೆ. ಈ ಪೈಕಿ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ಎಲ್ಲ ವಿಭಾಗಗಳಲ್ಲೂ ಕಳಪೆ ಸಾಧನೆ ತೋರುವ ಮೂಲಕ ಕಡೇ ಸ್ಥಾನದಲ್ಲಿದೆ.

ಸ್ಲಂಗಳೇ ಹೆಚ್ಚು: ದೇಶದ ಎಲ್ಲ ನಗರಗಳಲ್ಲಿ ಸರಾಸರಿ ಶೇ.17.14ರಷ್ಟು ಸ್ಲಂ ನಿವಾಸಿಗಳಿದ್ದರೆ, ಈ 20 ನಗರಗಳ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.18.75 ಜನ ಕೊಳೆಗೇರಿಗಳಲ್ಲಿ ವಾಸವಿದ್ದಾರೆ. ಈ 20 ನಗರಗಳು ಕಳಪೆ ಸ್ಮಾರ್ಟ್‌ ಸಿಟಿಗಳೆನಿಸಿಕೊಳ್ಳಲು ಇದು ಪ್ರಮುಖ ಕಾರಣವಾಗಿದೆ. ಚೆನ್ನೈ, ಇಂದೋರ್‌, ಕಾಕಿನಾಡ ಮತ್ತು ಜಬಲ್ಪುರ ನಗರಗಳಲ್ಲಿ ಅತಿ ಹೆಚ್ಚು ಸ್ಲಂ ನಿವಾಸಿಗಳಿದ್ದಾರೆ. 

ಬಹುತೇಕ ನಗರಗಳಲ್ಲಿ ಮೂಲ ನಾಗರಿಕ ಸೌಲಭ್ಯ ಹೊಂದಿರುವ ಮನೆಗಳ ಸಂಖ್ಯೆ ತೀರಾ ಕಡಿಮೆ ಇರುವುದು ಮತ್ತೂಂದು ಗಮನಾರ್ಹ ಅಂಶ. ಗುವಾಹಟಿಯಲ್ಲಿ ಶೇ.34.6 ರಷ್ಟು ನಗರಗಳು ಮಾತ್ರ ಕೊಳಾಯಿ ಸೌಲಭ್ಯ ಹೊಂದಿದ್ದು, ಸೊಲ್ಹಾಪುರ, ಭುವನೇಶ್ವರ, ಪುಣೆ, ಜಬಲ್ಪುರ ಮತ್ತು ಭೋಪಾಲ್‌ ನಗರಗಳಲ್ಲಿ ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲ. ಇನ್ನು ಬೆಳಗಾವಿ, ಭುವನೇಶ್ವರ, ಗುವಾಹಟಿ, ಕಾಕಿನಾಡ, ಕೊಚ್ಚಿ ನಗರಗಳಲ್ಲಿ ಕನಿಷ್ಠ ಒಳಚರಂಡಿ ಸೌಲಭ್ಯವೂ ಇಲ್ಲ. 

‘ಪ್ರಸ್ತುತ ಗುರುತಿಸಿರುವ 20 ನಗರಗಳು ಮೂಲ ಸೌಲಭ್ಯಗಳ ದೃಷ್ಟಿಯಿಂದ ತೀರಾ ಹಿಂದುಳಿದಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಿಂದುಳಿದ ನಗರಗಳ ಬಗ್ಗೆ ಹೆಚ್ಚು ಗಮನಹರಿಸಿ, ಆದ್ಯತೆಯ ಮೇರೆಗೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿ ಎಂಬ ಉದ್ದೇಶದಿಂದ ಈ ಅಧ್ಯಯನ ನಡೆಸಲಾಗಿದೆ,’ ಎಂದು ಎನ್‌ಐಯುಎ ವರದಿ ಹೇಳಿದೆ. 

ಸ್ಮಾರ್ಟ್‌ ಅಲ್ಲದ 20 ಸಿಟಿಗಳು!
ದಾವಣಗೆರೆ, ಬೆಳಗಾವಿ, ವಿಶಾಖಪಟ್ಟಣ, ಕಾಕಿನಾಡ, ಗುವಾಹಟಿ, ಎನ್‌ಡಿಎಂಸಿ, ಅಹಮದಾಬಾದ್‌, ಸೂರತ್‌, ಕೊಚ್ಚಿ, ಭೂಪಾಲ್‌, ಇಂದೋರ್‌, ಜಬಲ್ಪುರ್‌, ಪುಣೆ, ಸೊಲಾಪುರ್‌, ಭುವನೇಶ್ವರ್‌, ಲೂಧಿಯಾನ, ಜೈಪುರ, ಉದಯ್‌ಪುರ, ಚೆನ್ನೈ ಮತ್ತು ಕೊಯಮತ್ತೂರು (ಯೋಜನೆಯಡಿ ಆಯ್ಕೆಯಾಗಿರುವ ಇತರ 98 ಸಂಭಾವ್ಯ ಸ್ಮಾರ್ಟ್‌ ಸಿಟಿಗಳಿಗೆ ಹೋಲಿಸಿದರೆ ಈ 20 ನಗರಗಳು, ಆಡಳಿತ, ಅಭಿವೃದ್ಧಿ ವಿಷಯದಲ್ಲಿ ತೀರಾ ಹಿಂದುಳಿದಿವೆ).

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.