ಹಿಜ್ಬುಲ್ ಕಮಾಂಡರ್ ಹತ್ಯೆಯ ಬಳಿಕ ಕಾಶ್ಮೀರ ಕಣಿವೆ ಉದ್ರಿಕ್ತ
Team Udayavani, May 29, 2017, 12:14 PM IST
ಶ್ರೀನಗರ : ಕಾಶ್ಮೀರ ಕಣಿವೆಯ ಹಲವು ಭಾಗಗಳಲ್ಲಿ ನಿರಂತರ ಎರಡನೇ ದಿನವಾದ ಇಂದು ಕೂಡ ಕರ್ಫ್ಯೂ ರೀತಿಯ ವಾತಾವರಣ ನೆಲೆಗೊಂಡಿದೆ. ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಸಬ್ಝರ್ ಭಟ್ ಎನ್ಕೌಂಟರ್ನಲ್ಲಿ ಹತನಾಗಿರುವುದನ್ನು ಅನುಸರಿಸಿ ಕಾಶ್ಮೀರ ಕಣಿವೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೇನೆ ಕಟ್ಟೆಚ್ಚರ ವಹಿಸಿದೆ.
ಖನ್ಯಾರ್, ನೌಹತ್ತಾ, ಸಫಾಕದಲ್, ಎಂ ಆರ್ ಗಂಜ್, ರೈನಾವಾರಿ, ಕ್ರಾಲ್ಖುಡ್ ಮತ್ತು ಮೈಸೂಮಾ ಎಂಬ ಏಳು ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.
ಇದೇ ರೀತಿ ದಕ್ಷಿಣ ಕಾಶ್ಮೀರದ ಅನಂತನಾಗ್, ಶೋಪಿಯಾನ್ ಜಿಲ್ಲೆಗಳಲ್ಲಿ, ಬಾರಾಮೂಲಾ ಜಿಲ್ಲೆಯ ಸೋಪೋರ್ನಲ್ಲಿ ಕೂಡ ನಿರ್ಬಂಧಗಳನ್ನು ವಿಧಿಸಲಾಗಿದೆ.
ಮಧ್ಯ ಕಾಶ್ಮೀರದ ಬಡಗಾಂವ್ ಮತ್ತು ಗಂದೇರ್ಬಾಲ್ನಲ್ಲಿ ಸೆ.144 ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ