ಸರ್ಜಿಕಲ್ ದಾಳಿಗೆ ನಿಜವಾದ ಕಾರಣ ಗೊತ್ತಾ? ಸತ್ಯ ಬಿಚ್ಚಿಟ್ಟ ಪರ್ರೀಕರ್
Team Udayavani, Jul 1, 2017, 2:08 PM IST
ಪಣಜಿ:ದೇಶ, ವಿದೇಶದಲ್ಲಿ ಸುದ್ದಿಯಾಗಿದ್ದ ಸರ್ಜಿಕಲ್ ದಾಳಿಗೆ ನಿಜವಾದ ಕಾರಣ ಏನು ಎಂಬುದನ್ನು ಕೇಂದ್ರದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಶುಕ್ರವಾರ ಬಯಲುಗೊಳಿಸಿದ್ದಾರೆ. ಪಾಕಿಸ್ತಾನ ಆಕ್ರಮಿತ (ಪಿಒಕೆ) ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿಗೆ ಟಿವಿ ಆಂಕರ್ ಪ್ರಶ್ನೆ ಕೇಳಿ ಅವಮಾನಿಸಿದ್ದೇ ಕಾರಣ ಎಂದು ತಿಳಿಸಿದ್ದಾರೆ.
2015ರಲ್ಲಿ ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನೆ ನಡೆಸಿದ ನಿರ್ದಿಷ್ಟ ದಾಳಿ ಬಗ್ಗೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಟಿವಿ ಆಂಕರ್ ಗೆ ಮಾಹಿತಿ ನೀಡುತ್ತಿದ್ದ ವೇಳೆ, ಮ್ಯಾನ್ಮಾರ್ ಗಡಿಯೊಳಗೆ ತೋರಿದ ಧೈರ್ಯ ನೆರೆಯ ದೇಶದ ಮೇಲೆ ತೋರಲು ಸಾಧ್ಯವೆ ಎಂಬ ಪ್ರಶ್ನೆ ಕೇಳಿ ಅವಮಾನಿಸಿದ್ದರು.
ಹಾಗಾಗಿ ಟಿವಿ ಆಂಕರ್ ಆ ಪ್ರಶ್ನೆ ಕೇಳಿದ್ದ ದಿನವೇ ಪಿಒಕೆ ಮೇಲೆ ಸರ್ಜಿಕಲ್ ದಾಳಿ ನಡೆಸಲು ನಿರ್ಧರಿಸಿದ್ದೆ ಎಂದು ಪರ್ರೀಕರ್ ಪಣಜಿಯಲ್ಲಿ ಕೈಗಾರಿಕೋದ್ಯಮಿಗಳ ಸಭೆಗೂ ಮುನ್ನ ಮಾತನಾಡುತ್ತ ಈ ವಿಷಯವನ್ನು ಬಿಚ್ಚಿಟ್ಟಿದ್ದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ ಸರ್ಜಿಕಲ್ ದಾಳಿ ನಡೆಸಲು 15 ತಿಂಗಳ ಮುಂಚಿತವಾಗಿಯೇ ಸಿದ್ಧತೆ ನಡೆಸಲಾಗಿತ್ತು ಎಂದು ಪರ್ರೀಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್