ಮುಂಬಯಿಯಲ್ಲಿ ಗೋಶಾಲೆ: ಬಿಜೆಪಿ ಯೋಜನೆಗೆ ಶಿವಸೇನೆ ವಿರೋಧ!


Team Udayavani, Jul 22, 2017, 3:29 PM IST

98744.jpg

ಮುಂಬಯಿ: ನಗರದೊಳಗೆ  ಗೋಶಾಲೆಗಳನ್ನು ತೆರೆಯಲು ಹೆಚ್ಚುವರಿ ಭೂಮಿಯನ್ನು  ಕೋರಿ ಬಿಜೆಪಿಯು  ಮಂಡಿಸಿರುವ ಪ್ರಸ್ತಾವನೆಯನ್ನು ಶಿವ ಸೇನೆಯು ಆಕ್ಷೇಪಿಸಿ ಬದಿಗಿಟ್ಟಿದೆ.

ಮುಂಬಯಿಯಲ್ಲಿ ಹೆಚ್ಚುವರಿ ಗೋಶಾಲೆಗಳನ್ನು ತೆರೆಯಲು ಅವಕಾಶ ನೀಡುವ ಯಾವುದೇ ರೀತಿಯ ನಡೆಗೆ ನಾವು ಅನುಮತಿಸುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದೆ.  ನಗರದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆ ಯಲ್ಲಿ ಗೋಶಾಲೆಗಳನ್ನು ತೆರೆಯಲಾಗಿದೆ.  ಹೊಸ ಗೋಶಾಲೆಗಳನ್ನು ಇನ್ನು ಬೇಕಾದರೆ ನಗರದ ಹೊರವಲಯದಲ್ಲಿ ಸ್ಥಾಪಿಸಬೇಕು ಎಂದು ಪಕ್ಷ ಹೇಳಿದೆ.

ಮುಂಬಯಿಯ ಮಾಜಿ ಮೇಯರ್‌ ಮತ್ತು ಬಿಜೆಪಿ ನಗರಸೇವಕ ಡಾ| ರಾಮ್‌ ಬಾರೋಟ್‌ ಅವರು, ಮುಂಬಯಿ, ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ 3 ಹೊಸ ಗೋಶಾಲೆಗಳನ್ನು ತೆರೆಯಲು ಅಭಿವೃದ್ಧಿ ಯೋಜನೆಯಲ್ಲಿ 10,000 ಚದರ ಅಡಿ ಭೂಮಿಯನ್ನು ಮೀಡಲಿಡುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯಲ್ಲಿ ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಅದಕ್ಕೆ ಸಭಾಗೃಹದಿಂದ ಅನುಮೋದನೆಯೂ ಸಿಕ್ಕಿತ್ತು. ಆದರೆ, ಈಗ ಮಹಾನಗರ ಪಾಲಿಕೆ ಆಡಳಿತವು ಅದನ್ನು ಏಕಾಏಕಿಯಾಗಿ ರದ್ದುಗೊಳಿಸಿದೆ. ಈ ಸಂಬಂಧ ಆಡಳಿತದ ಕಡೆಯಿಂದ ಸುಧಾರಣಾ ಸಮಿತಿಗೆ ಅಭಿಪ್ರಾಯವನ್ನು ಮಂಡಿಸಲಾಗಿದ್ದು, ಗುರುವಾರ  ಸುಧಾರಣೆ ಸಮಿತಿ ಸಭೆಯಲ್ಲಿ ಆ ಬಗ್ಗೆ  ಚರ್ಚೆ ನಡೆಯಿತು.

ಆಡಳಿತದ ಅಭಿಪ್ರಾಯದ ಕುರಿತ ಚರ್ಚೆಯ ವೇಳೆ ಬಿಜೆಪಿ ನಗರಸೇವಕರು ಗೋವಿನ ಉಪಯುಕ್ತತೆಗಳ ಬಗ್ಗೆ ವಿವರಿಸುತ್ತ, ತಮ್ಮ ಪ್ರಸ್ತಾವನೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದರು.  ಆದರೆ, ಶಿವಸೇನೆಯು ನಗರದಲ್ಲಿ ಗೋಶಾಲೆಗಳ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುತ್ತ, ಬಿಜೆಪಿಯ ಬೇಡಿಕೆಗೆ ತಿರಸ್ಕರಿಸಿತು.

ನಗರವು ಮಳೆಗಾಲದ ಸಮಯದಲ್ಲಿ ಪ್ರವಾಹ ಮತ್ತು ನೀರು ಜಮಾವಣೆಯಂತಹ ಘಟನೆಗಳಿಗೆ ಈಡಾಗುತ್ತದೆ. ಸಾಮಾನ್ಯವಾಗಿ, ಗೋಶಾಲೆಗಳ ಸಗಣಿ ಮತ್ತು ತ್ಯಾಜ್ಯಗಳನ್ನು ನಗರದ ನದಿ ಮತ್ತು ನಾಲೆಗಳಲ್ಲೇ ವಿಲೇವಾರಿ ಮಾಡಲಾಗುತ್ತದೆ.  2005ರಲ್ಲಿ ಉಂಟಾದ ಪ್ರವಾಹಕ್ಕೆ ಗೋಶಾಲೆಯೂ ಒಂದು ಕಾರಣವಾಗಿದೆ. ಎಲ್ಲೆಲ್ಲಿ  ಗೋಶಾಲೆಗಳು ಇದ್ದವೋ, ಅಲ್ಲಲ್ಲಿ ನದಿ-ನಾಲೆಗಳ ಪರಿಸ್ಥಿತಿ ಕೆಟ್ಟದಾಗಿತ್ತು ಎಂದು ಮಾಜಿ ಮೇಯರ್‌ ಮತ್ತು ಶಿವಸೇನೆ ನಗರಸೇವಕಿ ಶ್ರದ್ಧಾ ಜಾಧವ್‌ ಹೇಳಿದ್ದಾರೆ.

ಗೋಶಾಲೆಗೆ ನಮ್ಮ ವಿರೋಧವಿಲ್ಲ. ಅದನ್ನು ನಗರದ ಹೊರವಲಯಗಳಲ್ಲಿ ಸ್ಥಾಪಿಸಬೇಕೆಂಬುದು ನಮ್ಮ ವಾದವಾಗಿದೆ  ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.