ಅಮೆರಿಕ, ಚೀನ ಕೈಹಾಕಿದರೆ ಕಾಶ್ಮೀರ ಸಿರಿಯಾ ಆದೀತು: ಮುಫ್ತಿ ಎಚ್ಚರಿಕೆ
Team Udayavani, Jul 22, 2017, 5:50 PM IST
ಶ್ರೀನಗರ : ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥಪಡಿಸಲು ಅಮೆರಿಕದ ಮಧ್ಯಸ್ಥಿಕೆಯ ಪರವಾಗಿ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ತೀವ್ರವಾಗಿ ಟೀಕಿಸಿರುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು, “ಒಂದೊಮ್ಮೆ ಅಮೆರಿಕ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ನಡೆಸಿದರೆ ಕಾಶ್ಮೀರದ ಪರಿಸ್ಥಿತಿಯು ಸಿರಿಯ ಮತ್ತು ಅಫ್ಘಾನಿಸ್ಥಾನದ ರೀತಿ ಆಗುವುದು ನಿಶ್ಚಿತ’ ಎಂದು ಹೇಳಿದ್ದಾರೆ.
“ಚೀನ, ಅಮೆರಿಕ ದೇಶಗಳು ತಮ್ಮದನ್ನು ತಾವು ನೋಡಿಕೊಂಡಿದ್ದರೆ ಸಾಕು; ಅಫ್ಘಾನಿಸ್ಥಾನವೇ ಇರಲಿ, ಸಿರಿಯಾ ಅಥವಾ ಇರಾಕ್ ಇರಲಿ – ಅವು ಹಸ್ತಕ್ಷೇಪ ನಡೆಸಿದ ದೇಶಗಳಲ್ಲಿ ಈಗ ಯಾವ ಪರಿಸ್ಥಿತಿ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಮೆಹಬೂಬ ಹೇಳಿದರು.
“ಕಾಶ್ಮೀರ ಪ್ರಶ್ನೆಯನ್ನು ಭಾರತ ಮತ್ತು ಪಾಕಿಸ್ಥಾನದ ನಡುವಿನ ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರವೇ ಬಗೆಹರಿಸಲು ಸಾಧ್ಯ’ ಎಂದು ಮೆಹಬೂಬ ಹೇಳಿದರು.
“ಲಾಹೋರ್ ಘೋಷಣೆಯಲ್ಲಿ ವಾಜಪೇಯಿ ಹೇಳಿರುವಂತೆ ಕಾಶ್ಮೀರ ಪ್ರಶ್ನೆಯನ್ನು ಭಾರತ ಮತ್ತು ಪಾಕಿಸ್ಥಾನ ಪರಸ್ಪರ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕಾಗಿದೆ. ಸಿರಿಯ ಮತ್ತು ಅಫ್ಘಾನಿಸ್ಥಾನದಲ್ಲಿ ಈಗ ಏನಾಗಿದೆ ಎಂಬುದು ಫಾರೂಕ್ ಅವರಿಗೆ ಗೊತ್ತಿಲ್ಲವೇ ?’ ಎಂದು ಮೆಹಬೂಬ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ