ಮತಾಂತರ ಆಗದಿದ್ದರೆ ಕೈಕಾಲು ಕತ್ತರಿಸುವ ಬೆದರಿಕೆ
Team Udayavani, Jul 23, 2017, 8:10 AM IST
ಕಲ್ಲಿಕೋಟೆ: 6 ತಿಂಗಳ ಒಳಗೆ ಇಸ್ಲಾಂಗೆ ಮತಾಂತರ ಹೊಂದದಿದ್ದರೆ, ನಿಮ್ಮ ಬಲಗೈ ಮತ್ತು ಎಡಗಾಲನ್ನು ಕತ್ತರಿ ಸುತ್ತೇವೆ’ ಎಂದು ಬೆದರಿಕೆ ಹಾಕಿರುವ ಪತ್ರವೊಂದು ಕೇರಳದ ಖ್ಯಾತ ಸಾಹಿತಿ ಕೆ.ಪಿ. ರಾಮನುಣ್ಣಿ ಅವರಿಗೆ ಬಂದಿದೆ.
ಇತ್ತೀಚೆಗಷ್ಟೇ ಪ್ರಾದೇಶಿಕ ಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದ ರಾಮನುಣ್ಣಿ, “ಧರ್ಮದ ಹೆಸರಿನಲ್ಲಿ ಕಿತ್ತಾಡುವುದನ್ನು ಹಿಂದೂ ಮತ್ತು ಮುಸ್ಲಿಮರು ನಿಲ್ಲಿಸಬೇಕು’ ಎಂದು ಬರೆದಿದ್ದರು. ಈ ಲೇಖನವನ್ನು ವಿರೋಧಿಸಿರುವ ಮೂಲಭೂತವಾದಿಗಳು, “ಹಿಂದೂ ಮತ್ತು ಮುಸ್ಲಿಮರನ್ನು ಒಂದೇ ತಕ್ಕಡಿಯಲ್ಲಿ ತೂಗಿದ್ದೀರ. ಇಂಥ ಲೇಖನಗಳು ಮುಗ್ಧ ಮುಸ್ಲಿಮರನ್ನು ದಾರಿ ತಪ್ಪಿಸುತ್ತವೆ’ ಎಂದೂ ಪತ್ರದಲ್ಲಿ ಬರೆದಿದ್ದಾರೆ. ಇತ್ತೀಚೆಗೆ, ತಮ್ಮ ಕೃತಿಯೊಂದರಲ್ಲಿ ರಾಮನುಣ್ಣಿ ಅವರು ಶ್ರೀಕೃಷ್ಣ ಮತ್ತು ಪ್ರವಾದಿಯವರನ್ನು ಉಲ್ಲೇಖೀಸಿದ್ದಕ್ಕೆ ಎರಡೂ ಧರ್ಮ ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಲೇಖಕನಿಗೆ ಬಂದಿರವ ಬೆದರಿಕೆ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೊಲೆ ಬೆದರಿಕೆ ಹಾಕುವವರ ವಿರುದ್ಧ ಸರಕಾರ ಕಠಿನ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!