“ಹಿಟ್ಲರ್ ಯಾರಿಗೆ ಸ್ಫೂರ್ತಿ ಎಂದು ಎಲ್ಲರಿಗೂ ಗೊತ್ತು’
Team Udayavani, Jul 23, 2017, 7:15 AM IST
ಹೊಸದಿಲ್ಲಿ: ಶುಕ್ರವಾರ ಬೆಂಗಳೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸುತ್ತಾ “ಹಿಟ್ಲರ್’ ಹೆಸರು ಪ್ರಸ್ತಾವಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸಚಿವೆ ಸ್ಮತಿ ಇರಾನಿ ಶನಿವಾರ ತಿರುಗೇಟು ನೀಡಿದ್ದಾರೆ.
ರಾಹುಲ್ ಮಾತಿಗೆ ಪ್ರತಿಯಾಗಿ ಸರಣಿ ಟ್ವೀಟ್ಗಳನ್ನು ಮಾಡಿರುವ ಇರಾನಿ, “ಹಿಟ್ಲರ್ನಿಂದ ಸ್ಫೂರ್ತಿ ಪಡೆದವರು ಯಾರು, ತುರ್ತು ಪರಿಸ್ಥಿತಿ ಹೇರಿದವರು ಯಾರು ಮತ್ತು ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಿದವರು ಯಾರು ಎಂದು ಗೆಸ್ ಮಾಡಿದವರಿಗೆ ಬಹುಮಾನ ಕೊಡುವುದಿಲ್ಲ’ ಎಂದಿ ದ್ದಾರೆ. ಇನ್ನೊಂದು ಟ್ವೀಟ್ನಲ್ಲಿ, “ನಿಸ್ತೇಜ ಭವಿಷ್ಯವಿರುವುದು ಕಾಂಗ್ರೆಸ್ ಪಕ್ಷಕ್ಕೇ ಹೊರತು, ದೇಶಕ್ಕಲ್ಲ. ನೀವು ಮಾಡುತ್ತಿರುವ ಎಲ್ಲದಕ್ಕೂ ಬಿಜೆಪಿಯದ್ದೊಂದು ಪ್ರಾಮಾಣಿಕ ಥ್ಯಾಂಕ್ಸ್’ ಎಂದು ತಿವಿದಿದ್ದಾರೆ. ಶುಕ್ರವಾರ ಮಾತನಾಡಿದ್ದ ರಾಹುಲ್, “ವಾಸ್ತವದ ಬಗ್ಗೆ ಸರಿಯಾದ ಅರಿವು ಹೊಂದಿರಿ. ಆಗ ಮಾತ್ರ ನಿಮಗೆ ಬೇಕಾದಾಗ ಅದನ್ನು ಉಸಿರುಗಟ್ಟಿಸಬಹುದು ಎಂದು ಹಿಟ್ಲರ್ ಬರೆದಿದ್ದರು. ಈಗ ನಮ್ಮ ದೇಶದಲ್ಲಿ ನಡೆಯುತ್ತಿರುವುದು ಇದೇ. ವಾಸ್ತವದ ಕೊಲೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ