ಹೊರ ಹೋಗುತ್ತಿದ್ದದ್ದು ನೀರಿನ ಟ್ಯಾಂಕರ್‌, ಸಾಗಿಸುತ್ತಿದ್ದದ್ದು ತೈಲ!


Team Udayavani, Jul 24, 2017, 8:30 AM IST

TANKAR.jpg

ಜೈಪುರ: ಅದು ಭಾರತದ ಕಡಲತಡಿಯ ಅತಿದೊಡ್ಡ ತೈಲಕ್ಷೇತ್ರ. ಅಲ್ಲಿಂದ ಹೊರ ಹೋಗುತ್ತಿದ್ದ ನೀರಿನ ಟ್ಯಾಂಕರ್‌ಗಳನ್ನು ಯಾರೂ ಇಣುಕಿ ನೋಡಿರಲಿಲ್ಲ. ನೋಡಿದ್ದಿದ್ದರೆ, ಬರೋಬ್ಬರಿ 49 ಕೋಟಿ ರೂ. ಮೌಲ್ಯದ ಕಚ್ಚಾ ತೈಲ ಉಳಿಯುತ್ತಿತ್ತು!

ಹೌದು. ರಾಜಸ್ಥಾನದಲ್ಲಿರುವ ಕೈರ್ನ್ ಇಂಡಿಯಾ ಆಯಿಲ್‌ಫೀಲ್ಡ್‌ನಿಂದ ಹೊರ ಹೋಗುತ್ತಿದ್ದ ನೀರಿನ ಟ್ಯಾಂಕರ್‌ಗಳಲ್ಲಿ ಕಚ್ಚಾ ತೈಲವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ರೀತಿ ಮಾಡಿ ಒಂದಲ್ಲ, ಎರಡಲ್ಲ, ಬರೋಬ್ಬರಿ 5 ಕೋಟಿ ಲೀಟರ್‌ನಷ್ಟು ಕಚ್ಚಾ ತೈಲವನ್ನು ಕಳವು ಮಾಡಲಾಗಿದೆ. ಸತತ 6 ವರ್ಷಗಳಿಂದ ಇಂಥದ್ದೊಂದು ದಂಧೆ ನಡೆಯುತ್ತಿದ್ದರೂ ಈ ವಿಚಾರ ಯಾರಿಗೂ ಗೊತ್ತಿರಲಿಲ್ಲ. ಇತ್ತೀಚೆಗೆ ಪೆಟ್ರೋಲ್‌ ಕಳ್ಳಸಾಗಣೆ ಪ್ರಕರಣದಲ್ಲಿ 25 ಮಂದಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ ನಂತರ ಈ ಬೃಹತ್‌ ಪ್ರಮಾಣದ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ತೈಲಕ್ಷೇತ್ರದೊಳಗೆ ಅಕ್ರಮ ನಡೆಯುತ್ತಿದೆ ಎಂಬ ವಾಸನೆ ಬಡಿದ ಹಿನ್ನೆಲೆಯಲ್ಲಿ ಕಂಪನಿ ಪೊಲೀಸರಿಗೆ ದೂರು ನೀಡಿತ್ತು.

25 ಮಂದಿಯ ಬಂಧನದೊಂದಿಗೆ ಆ ಅಕ್ರಮ ಬಯಲಿಗೆ ಬಂದಿದೆ. ಅಕ್ರಮದಲ್ಲಿ ತೈಲಕ್ಷೇತ್ರದೊಳಗೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಹಾಗೂ ಟ್ರಕ್‌ ಚಾಲಕರೂ ಭಾಗಿಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಈವರೆಗೆ 30ಕ್ಕೂ ಹೆಚ್ಚು ಟ್ರಕ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಹೇಗೆ ನಡೆಯುತ್ತಿತ್ತು ಕಳ್ಳಸಾಗಣೆ?: ತೈಲಾನ್ವೇಷಣೆ ಪ್ರಕ್ರಿಯೆ ಬಳಿಕ ಅದರ ಉಪಉತ್ಪನ್ನವಾದ ನೀರನ್ನು ಟ್ಯಾಂಕ್‌ಗಳಲ್ಲಿ ತುಂಬಿ ಬಿಸಾಕಲೆಂದು ಕಳುಹಿಸಲಾಗುತ್ತದೆ. ಆದರೆ, ಟ್ಯಾಂಕ್‌ ಚಾಲಕರು, ತಮ್ಮ ಟ್ರಕ್‌ಗಳಲ್ಲಿ ನೀರಿನ ಬದಲು, ತೈಲ ತುಂಬಿ ಒಯ್ಯುತ್ತಿದ್ದರು. ಗೊತ್ತಾಗಬಾರದೆಂದು ಜಿಪಿಎಸ್‌ ಸಾಧನ ಆಫ್ ಮಾಡುತ್ತಿದ್ದರು. ನಂತರ ಈ ತೈಲವನ್ನು ಎರಡು ಸ್ಥಳೀಯ ಫ್ಯಾಕ್ಟರಿಗಳಿಗೆ ಒಯ್ಯಲಾಗುತ್ತಿತ್ತು. ಅವರು ಅಂಡರ್‌ಗ್ರೌಂಡ್‌ ಟ್ಯಾಂಕ್‌ಗಳಲ್ಲಿ ಈ ತೈಲ ತುಂಬಿ, ಮಾರಾಟ ಮಾಡುತ್ತಿದ್ದರು.

25 ಮಂದಿಯ ಬಂಧನ: ಉತ್ತರಪ್ರದೇಶ ದಲ್ಲಿ ರಿಫೈನರಿ ಪೈಪ್‌ಲೈನ್‌ನಿಂದ 100 ಕೋಟಿ ರೂ. ಮೌಲ್ಯದ ಪೆಟ್ರೋಲಿಯಂ ಕಳ್ಳತನ ಆರೋಪದಲ್ಲಿ 25 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಗ್ಯಾಂಗ್‌ ಭೂಮಿಯೊಳಗೆ ಸುರಂಗ ನಿರ್ಮಿಸಿ, ಹಿಂದುಸ್ಥಾನ್‌ ಪೆಟ್ರೋಲಿಯಂನ ಪೈಪ್‌ಲೈನ್‌ನಿಂದ ಪೆಟ್ರೋಲಿಯಂ ಕದಿಯುತ್ತಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ತೈಲ ಕಳವು ಪ್ರಕರಣವೂ ಬೆಳಕಿಗೆ ಬಂತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.