2000 ನೋಟು ಅಮಾನ್ಯ? ಈಗಾಗಲೇ ಆರ್‌ಬಿಐನಿಂದ ನೋಟು ಮುದ್ರಣ ಸ್ಥಗಿತ


Team Udayavani, Jul 27, 2017, 8:55 AM IST

2000.jpg

ಹೊಸದಿಲ್ಲಿ: ಕೇಂದ್ರ ಸರಕಾರ 2000 ನೋಟುಗಳ ಅಮಾನ್ಯಕ್ಕೆ ಸಿದ್ಧತೆ ನಡೆಸಿದೆಯೇ? ಇದು ಸದ್ಯಕ್ಕೆ ಜನರ ಮಧ್ಯೆ ಹರಿದಾಡುತ್ತಿರುವ ಸುದ್ದಿ. ಆದರೆ ಈ ಸುದ್ದಿ ಇದೀಗ ಸಂಸತ್‌ ಭವನಕ್ಕೂ ಮುಟ್ಟಿದ್ದು, ರಾಜ್ಯಸಭೆಯಲ್ಲಿ ವಿಪಕ್ಷಗಳು ಈ ಬಗ್ಗೆ ಸರಕಾರವನ್ನು ಪ್ರಶ್ನಿಸಿವೆ. ವಿಶೇಷವೆಂದರೆ, ಸರಕಾರ ಈ ಪ್ರಶ್ನೆಗೆ ಇಲ್ಲವೆಂದೂ ಹೇಳಿಲ್ಲ, ಹೌದು ಎಂಬ ಉತ್ತರವನ್ನೂ ಕೊಟ್ಟಿಲ್ಲ. ಹೀಗಾಗಿ, ನೋಟು ಅಮಾನ್ಯದ ಸುದ್ದಿಗೆ ಮತ್ತಷ್ಟು  ಪುಷ್ಟಿ ಬಂದಂತಾಗಿದೆ. 

ಸದ್ಯ ಆರ್‌ಬಿಐ 2000 ಮುಖಬೆಲೆಯ ನೋಟುಗಳ ಮುದ್ರಣ ನಿಲ್ಲಿಸಿದೆ ಎಂದು ಹೇಳಲಾಗಿದೆ. ಇದಕ್ಕೆ ಬದಲಾಗಿ 200 ಮುಖಬೆಲೆಯ ನೋಟುಗಳ ಮುದ್ರಣ ವೇಗವಾಗಿ ಸಾಗುತ್ತಿದೆ ಎಂದು ಹೇಳಲಾ ಗುತ್ತಿದ್ದು, ಆಗಸ್ಟ್‌ನಲ್ಲಿ ಈ ನೋಟುಗಳು ಚಲಾವಣೆಗೆ ಬರಲಿವೆ ಎಂದು ಕೇಂದ್ರ ಸರಕಾರವೇ ಹೇಳಿದೆ. ಅಲ್ಲದೆ ಬ್ಯಾಂಕುಗಳು 2000 ಮುಖಬೆಲೆಯ ನೋಟುಗಳಿಗೆ ಬೇಡಿಕೆ ಸಲ್ಲಿಸಿದ್ದರೆ, ಆರ್‌ಬಿಐ ಪೂರೈಸಲು ಒಪ್ಪುತ್ತಿಲ್ಲವೆಂದು ಹೇಳಲಾಗಿದೆ. ಹೀಗಾಗಿ, 2000 ರೂ. ಮುಖಬೆಲೆಯ ನೋಟಿನ ಲೀಗಲ್‌ ಟೆಂಡರ್‌ ರದ್ದಾಗಲಿದೆ ಎಂಬ ಮಾತುಗಳು ಹೆಚ್ಚಾಗಿವೆ. 

ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾವಿಸಿದ ಎಸ್‌ಪಿ ನಾಯಕ ನರೇಶ್‌ ಅಗರ್ವಾಲ್‌,  ಕಳೆದ ನವೆಂಬರ್‌ನಲ್ಲಿ ನೋಟು ಅಮಾನ್ಯ ಮಾಡಿದ ಅನಂತರ 2000 ಮುಖಬೆಲೆ ನೋಟು ಗಳನ್ನು ಪರಿಚಯಿಸಲಾಗಿತ್ತು. ಆದರೆ, ಈಗ ಈ ನೋಟುಗಳ ಪೂರೈಕೆ ಕಡಿಮೆಯಾಗಿದೆ. ಅಲ್ಲದೆ ಒಂದು ಸಾವಿರ ಮುಖಬೆಲೆ ನಾಣ್ಯ ಜಾರಿಗೆ ತರುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ. ಇದು ನಿಜವೇ? ಎಂದು ಹಣ ಕಾಸು ಸಚಿವ ಅರುಣ್‌ ಜೇಟಿÉ ಅವರನ್ನು  ಪ್ರಶ್ನಿಸಿದರು. 
ಇದಷ್ಟೇ ಅಲ್ಲ, ಆರ್‌ಬಿಐ 2000 ರೂ. ನೋಟುಗಳ ಮುದ್ರಣ ನಿಲ್ಲಿಸಿದೆ. ಈಗ ಮತ್ತೂಮ್ಮೆ ನೋಟು ಅಮಾನ್ಯ ಕ್ರಮಕ್ಕೆ ಮುಂದಾಗುತ್ತೀರಾ ಎಂದು ಪ್ರಶ್ನಿಸಿ, ಸಚಿವರ ಸ್ಪಷ್ಟನೆಗೂ ಆಗ್ರಹಿಸಿದರು. ಇದಕ್ಕೂ ಉತ್ತರಿ ಸದೇ ಜೇಟಿÉ ಅವರು ಮೌನದಿಂದಲೇ ಕುಳಿತಿದ್ದರು. 

ಅದಕ್ಕೆ ಪೂರಕವಾಗಿ ಲೇವಡಿ ಮಾಡಿದ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ “1  ಸಾವಿರ ಮುಖಬೆಲೆ ನಾಣ್ಯ ಬಿಡುಗ ಡೆಗೆ ಸಿದ್ಧತೆ ನಡೆಸುತ್ತಿರುವುದು ಸತ್ಯವೇ? ಅದಕ್ಕಾಗಿ ನಾವು ಬ್ಯಾಗ್‌ ಖರೀದಿ ಮಾಡಬೇಕೇ. ನಮ್ಮ ಸಹೋದರಿಯರ ಬಳಿ ಪರ್ಸ್‌ ಮಾತ್ರ ಇದೆ. ಈ ನಿಟ್ಟಿನಲ್ಲಿ ರಾಜಕೀಯ ಮಾಡುವುದಿಲ್ಲ’  ಎಂದು ಹೇಳಿದರು.

ರಾಷ್ಟ್ರಪತಿ ಭಾಷಣದಲ್ಲಿ ನೆಹರೂ ಹೆಸರಿಲ್ಲವೇಕೆ?
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಾಡಿದ ಮೊದಲ ಭಾಷಣವೇ ವಿವಾದ ಸೃಷ್ಟಿಸಿದೆ. ಭಾಷಣದ ವಿಷಯ ಬುಧವಾರ ರಾಜ್ಯಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.
ಕಾಂಗ್ರೆಸ್‌ ಮುಖಂಡ ಆನಂದ್‌ ಶರ್ಮಾ ಮಾತನಾಡಿ, “ದೇಶ ಕಟ್ಟುವಲ್ಲಿ ಮಹಾತ್ಮ ಗಾಂಧಿ, ದೇಶದ ಪ್ರಥಮ ಪ್ರಧಾನಿ ಜವಹರ್‌ಲಾಲ್‌ ನೆಹರೂ ಅವರ ಕೊಡುಗೆ ಮಹತ್ವದ್ದಾಗಿದೆ. ಮಹಾತ್ಮ ಗಾಂಧಿ ಅವರನ್ನು ಇಡೀ ದೇಶವೇ ಗೌರವಿಸುತ್ತದೆ. ಅದೇ ರೀತಿ ಪ್ರಥಮ ಪ್ರಧಾನಿ ನೆಹರು ಅವರೂ ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ. ಆದರೆ ರಾಷ್ಟ್ರಪತಿ ಯವರು ಇಂಥ ಮಹನೀಯರನ್ನು ಮರೆತದ್ದು ಸರಿಯಲ್ಲ,’ ಎಂದು ಆಕ್ಷೇಪಿಸಿದರು.

ಈ ಆರೋಪದಿಂದ ಕೆರಳಿದ ಹಣಕಾಸು ಸಚಿವ ಅರುಣ್‌ ಜೇಟಿÉ, ಆನಂದ್‌ ಶರ್ಮಾ ಅವರ ಸಂಪೂರ್ಣ ಭಾಷಣವನ್ನು ಕಲಾಪದ ಕಡತದಿಂದ ತೆಗೆಯುವಂತೆ ಸೂಚಿಸಿದ್ದು,  ಜತೆಗೆ “ಶೂನ್ಯ ಅವಧಿ ಇರುವುದು ಟಿವಿ ಕ್ಯಾಮೆರಾಗಳ ಲಾಭಕ್ಕಾಗಿ ಅಲ್ಲ. ಆದರೆ ಇಲ್ಲಿ ಅದೇ ನಡೆಯುತ್ತಿದೆ,’ ಎಂದಾಗ ಕಾಂಗ್ರೆಸಿಗರು ಪ್ರತಿಭಟಿಸಿದರು.

ಪಾಪ ಮಾಡಲಾರೆ!: “ಇರಾಕ್‌ನ ಮೊಸುಲ್‌ನಲ್ಲಿ ಐಸಿಸ್‌ ಉಗ್ರರಿಂದ ಅಪಹರಣಕ್ಕೊಳಗಾದ 39 ಭಾರತೀಯರು ಅಸುನೀಗಿದ್ದಾರೆ ಎನ್ನಲು ಯಾವುದೇ ಆಧಾರವಿಲ್ಲ. ಹೀಗಾಗಿ ಅವರೆಲ್ಲ ಬದುಕಿಲ್ಲ ಎಂದು ಘೋಷಿಸುವ ಮೂಲಕ ಪಾಪ ಮಾಡಲು ನಾನು ಸಿದ್ಧಳಿಲ್ಲ,’ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ. ಅಪಹೃತರೆಲ್ಲ ಬದುಕಿದ್ದಾರೆ ಎನ್ನುವ ಮೂಲಕ ಸಚಿವರು ದೇಶದ ನಾಗರಿಕರನ್ನು ವಂಚಿಸುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಷ್ಮಾ, “ಅವರ ಸಾವಿನ ಬಗ್ಗೆ ಸಾಕ್ಷ್ಯಗಳು ದೊರೆಯುವವರೆಗೂ ಅವರನ್ನು ಹುಡುಕುವ ಪ್ರಯತ್ನ ನಿಲ್ಲುವುದಿಲ್ಲ,’ ಎಂದರು.

ನಡೆಯದ ಕಲಾಪ: ಕಾಂಗ್ರೆಸ್‌ನ ಆರು ಸಂದರನ್ನು ಅಮಾನತು ಮಾಡಿದ್ದು, ಗೋಹತ್ಯೆ ನೆಪದಲ್ಲಿ ದೇಶದ ವಿವಿಧೆಡೆ ಥಳಿತ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಲೋಕಸಭೆಯಲ್ಲಿ ಆಗಾಗ ಗದ್ದಲ ಎಬ್ಬಿಸಿದವು. ಹೀಗಾಗಿ ಬುಧವಾರ ಮಧ್ಯಾಹ್ನದ ಬಳಿಕವೇ ಎರಡು ಬಾರಿ ಕಲಾಪವನ್ನು ಮುಂದೂಡಿದ ಘಟನೆ ನಡೆಯಿತು. ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಕಾಂಗ್ರೆಸ್‌ ಸಂಸದರು ಸರಕಾರದ ವಿರುದ್ಧ ಘೋಷಣೆ ಕೂಗಿದ್ದರಿಂದ ಭಾರೀ ಗದ್ದಲ ಉಂಟಾಗಿ, ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.