ಮೂಲಭೂತ ಹಕ್ಕಿನಲ್ಲಿ ಖಾಸಗಿ ಹಕ್ಕು:ಕರ್ನಾಟಕ


Team Udayavani, Jul 27, 2017, 6:30 AM IST

kapil.jpg

ಹೊಸದಿಲ್ಲಿ: ಖಾಸಗಿ ಹಕ್ಕನ್ನೂ ಮೂಲಭೂತ ಹಕ್ಕಿನೊಳಗೆ ಸೇರಿಸಬೇಕು ಎಂಬ ವಾದಕ್ಕೆ ಈಗ ಕರ್ನಾಟಕ ಸಹಿತ ನಾಲ್ಕು ಬಿಜೆಪಿಯೇತರ ರಾಜ್ಯಗಳು ಕೈಜೋಡಿಸಿವೆ.

ಸಂವಿಧಾನದ ಪರಿಚ್ಛೇದ 21ರಲ್ಲಿ ಖಾಸಗಿ ಹಕ್ಕನ್ನೂ ಸೇರಿಸಬೇಕು. ಈ ಮೂಲಕ ಜನರ ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ತಪ್ಪಿಸಬೇಕು ಎಂದು ಕೆಲವು ಎನ್‌ಜಿಒಗಳು ಅರ್ಜಿ ಸಲ್ಲಿ ಸಿದ್ದು, ಇದು ಸುಪ್ರೀಂಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠದಲ್ಲಿ ವಿಚಾರಣೆ ನಡೆಯು ತ್ತಿದೆ. ಈಗ ಕರ್ನಾಟಕ, ಪಶ್ಚಿಮ ಬಂಗಾಲ, ಪಂಜಾಬ್‌ ಮತ್ತು ಪುದು ಚೇರಿ ರಾಜ್ಯಗಳೂ ಖಾಸಗಿ ಹಕ್ಕಿಗೆ ಸಹಮತ ವ್ಯಕ್ತಪಡಿಸಿ ಪೂರಕ ಅರ್ಜಿ ಸಲ್ಲಿಸಿವೆ. ಈ ಬಗ್ಗೆ ಹಿರಿಯ ವಕೀಲ ಕಪಿಲ್‌ ಸಿಬಲ್‌ ಮೂಲಕ ಸುಪ್ರೀಂಗೆ ಅರ್ಜಿ ಸಲ್ಲಿಸಿವೆ. ಇದರ ನಡುವೆಯೇ, ಜನರಿಗೆ ಖಾಸಗಿ ಹಕ್ಕನ್ನು ಮೂಲಭೂತ ಹಕ್ಕಿನಲ್ಲಿ ಒಂದಾದ ಸ್ವಾತಂತ್ರ್ಯ ಹಕ್ಕಿನಲ್ಲಿ ಸೇರಿಸಿ ಕೊಡಬಹುದು. ಆದರೆ ಸಂಪೂರ್ಣವಾಗಿಯೂ ಅಲ್ಲ ಎಂದು ಕೇಂದ್ರ ಸರಕಾರ ಹೇಳಿತು.

ಮುಖ್ಯ ನ್ಯಾಯಮೂರ್ತಿ ಜೆ.ಎಸ್‌.ಖೇಹರ್‌ ನೇತೃತ್ವದ ಸಂವಿಧಾನ ಪೀಠದ ಮುಂದೆ ವಾದ ಮಂಡಿಸಿದ ಕಪಿಲ್‌ ಸಿಬಲ್‌, ಈಗಿನ ತಂತ್ರಜ್ಞಾನದ ಆಧುನಿಕತೆಯ ಕಾಲದಲ್ಲಿ ಖಾಸಗಿ ಹಕ್ಕಿನ ಕುರಿತು ಪರಾಮರ್ಶೆ ನಡೆಸುವ ಅಗತ್ಯವಿದೆ. ಅಲ್ಲದೆ ಖಾಸಗಿತನವನ್ನು ರಕ್ಷಿಸುವ ಸಲುವಾಗಿ ಮೂಲಭೂತ ಹಕ್ಕಿನಲ್ಲಿ ಸೇರಿಸಬೇಕು ಎಂದು ವಾದ ಮಂಡಿಸಿದರು.

ಸಂವಿಧಾನದಲ್ಲಿ ಬೇಕಿಲ್ಲ: ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ವಾದ ಮಂಡಿಸಿ,  ಖಾಸಗಿ ಹಕ್ಕು ಒಂದು ಸಂಪೂರ್ಣ ಹಕ್ಕಲ್ಲ. ಇದು “ಹಕ್ಕು’ ಎಂದು ಪರಿಗಣನೆಗೆ ಸಾಧ್ಯವಿದ್ದರೂ ಬದುಕುವ ಹಕ್ಕಿಗಿಂತ ಎರಡನೆಯದ್ದಾಗಿದೆ. ಆದ್ದರಿಂದ ಈ ಬಗ್ಗೆ ಗೊಂದಲಗಳು ಸಲ್ಲ. ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಸರಕಾರ  ಈ ವಿಚಾರದಲ್ಲಿ ಮಧ್ಯ ಪ್ರವೇಶಿಸ ಬೇಕಾಗುತ್ತದೆ ಎಂದರು.

ಆದರೆ ಪರಿಪೂರ್ಣ ಹಕ್ಕುಗಳ ವಿಚಾರದಲ್ಲಿ ಮಧ್ಯಪ್ರವೇಶಿಸಿದಾಗ ಪ್ರಜಾಪ್ರಭುತ್ವ ಸಮಾಜವೊಂದು ಅದನ್ನು ವಿರೋಧಿಸಬಹುದು ಮತ್ತು ಪರಿಪೂರ್ಣ ಹಕ್ಕನ್ನು ಎಂದಿಗೂ ತಿದ್ದಲು, ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಅಲ್ಲದೆ ಖಾಸಗಿ ಹಕ್ಕಿನ ಮೇಲಿನ ಅತಿಕ್ರಮಣವನ್ನು ನಾವು ಮೂಲಭೂತ ಹಕ್ಕಿಗೆ ಹೋಲಿಸಲು ಸಾಧ್ಯವಿಲ್ಲ. ಜೀವಿಸುವ ಮತ್ತು ಸ್ವತಂತ್ರವಾಗಿ ಜೀವಿಸುವ ಹಕ್ಕು ಇದರಿಂದ ಭಿನ್ನವಾಗಿದೆ’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಖಾಸಗಿತನ ವಿಚಾರ ದಲ್ಲಿ ಅಮೆರಿಕದ ಕೋರ್ಟ್‌ ತೀರ್ಪನ್ನು ಇಲ್ಲಿಗೆ ಅನ್ವಯಿಸುವಂತಿಲ್ಲ. ಭಾರತದಲ್ಲಿ ಬಡತನದ ರೇಖೆಗಿಂತ ಕೆಳಗಿನವರು ಮತ್ತು ಮಧ್ಯಮ ವರ್ಗದವರು ಹೆಚ್ಚಿದ್ದಾರೆ. ಅವರ ಬೇಡಿಕೆಗಳನ್ನು ಪರಿಗಣಿಸಬೇಕಿದೆ’ ಎಂದು ಅವರು ತಿಳಿಸಿದ್ದಾರೆ.

ಸೋಮವಾರದ ವಿಚಾರಣೆ ವೇಳೆ ವಾದ ನಡೆಸಿದ್ದ ವೇಣುಗೋಪಾಲ್‌ ಅವರು, “ಒಂದು ವೇಳೆ ಖಾಸಗಿತನ ಎನ್ನುವುದು ಮೂಲಭೂತ ಹಕ್ಕೇ ಎಂದಿದ್ದಲ್ಲಿ ಅದನ್ನು ಸಂವಿಧಾನದ 21ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಬೇಕಿತ್ತು. ಆದರೆ ಅದನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿಲ್ಲ’ ಎಂದು ವಾದಿಸಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.