ಸೂಕ್ತ ಕಾಲದಲ್ಲಿ ಟೀಕಾಕಾರರಿಗೆ ಉತ್ತರ:ನಿತೀಶ್; ಪಿಎಂ ಮೋದಿ ಅಭಿನಂದನೆ
Team Udayavani, Jul 27, 2017, 11:37 AM IST
ಪಟ್ನಾ : “ನನ್ನ ಟೀಕಾಕಾರರಿಗೆ ನಾನು ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತೇನೆ’ ಎಂದು ಬಿಹಾರದಲ್ಲಿನ ಜೆಡಿಯು-ಬಿಜೆಪಿ ಮೈತ್ರಿ ಕೂಟದ ನೂತನ ಮುಖ್ಯಮಂತ್ರಿಯಾಗಿ ಇಂದು ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಹೇಳಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿ ಬಿಹಾರದಲ್ಲಿ ಮಹತ್ತರ ಅಭಿವೃದ್ಧಿಯನ್ನು ಜೆಡಿಯ-ಬಿಜೆಪಿ ಮೈತ್ರಿಕೂಟ ಸಾಧಿಸಲಿದೆ ಎಂದು ಹೇಳಿದ್ದಾರೆ.
“ಬಿಹಾರ ಮಹಾಜನತೆಯ ಹಿತಾಸಕ್ತಿಯಲ್ಲಿ ನಾನು ಬಿಜೆಪಿ ಜತೆಗೂಡಿ ಸರಕಾರ ರೂಪಿಸುವ ನಿರ್ಧಾರವನ್ನು ಕೈಗೊಂಡೆ’ ಎಂದಿರುವ ನಿತೀಶ್ ಕುಮಾರ್, “ಸೂಕ್ತ ಕಾಲ ಒದಗಿದಾಗ ನಾನು ನನ್ನ ಎಲ್ಲ ಟೀಕಾಕಾರರಿಗೆ ಸರಿಯಾದ ಉತ್ತರ ನೀಡುತ್ತೇನೆ’ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು “ವಿರೋಧ ಪಕ್ಷಗಳ ಸರಕಾರ ಇರುವ ರಾಜ್ಯಗಳನ್ನೆಲ್ಲ ಬುಡಮೇಲು ಮಾಡುವ ಎಲ್ಲ ತಂತ್ರಗಳನ್ನು ಬಿಜೆಪಿ ಯತ್ನಿಸುತ್ತಿದೆ’ ಎಂದು ಆರೋಪಿಸಿದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು “ನಿತೀಶ್ ಅವರ ಈ ನಡೆಯ ಬಗ್ಗೆ ನಮಗೆ ಕಳೆದ ಮೂರು – ನಾಲ್ಕು ತಿಂಗಳಿಂದಲೇ ಸಂಶಯ ಇತ್ತು; ಅದೀಗ ನಿಜವಾಗಿದೆ’ ಎಂದು ಹೇಳಿದ್ದಾರೆ.
ರಾಂಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲು ಪ್ರಸಾದ್ ಯಾವ್ ಅವರು “ಮೇವು ಹಗರಣದ ವಿಚಾರಣೆಯ ಬಳಿಕ ನಾನು ಮಾತನಾಡುತ್ತೇನೆ’ ಎಂದು ಹೇಳಿದರು.
ಬಿಹಾರದಲ್ಲಿ ಮಹಾ ಘಟಬಂಧನಕ್ಕೆ ಜನಾದೇಶ ಸಂದಿರುವುದು ಕೋಮು ಶಕ್ತಿಗಳ ವಿರುದ್ಧ ಹೋರಾಡುವುದಕ್ಕೆ; ಬಿಜೆಪಿ ಜತೆ ಸೇರಿ ಸರಕಾರ ರಚಿಸುವ ಮೂಲಕ ನಿತೀಶ್ ಕುಮಾರ್ ಈಗ ಅದನ್ನು ನಿರಸನಗೊಳಿಸಿದ್ದಾರೆ ಎಂದು ಆರ್ಜೆಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ