ಭಾರತ-ಚೀನ ಅಧಿಕಾರಿಗಳ ಸಭೆ: ಶಾಂತಿ ಪಾಲನೆಗೆ ಒತ್ತು
Team Udayavani, Aug 17, 2017, 8:05 AM IST
ಹೊಸದಿಲ್ಲಿ: ಭಾರತ ಹಾಗೂ ಚೀನ ಸೇನೆಗಳ ಹಿರಿಯ ಅಧಿಕಾರಿಗಳು ಬುಧವಾರ ಲೇಹ್ ಪ್ರಾಂತ್ಯದ ತಟಸ್ಥ ಸ್ಥಳವೊಂದರಲ್ಲಿ ಸಭೆ ನಡೆಸಿದ್ದಾರೆ. ಲಡಾಕ್ನ ಪ್ಯಾಂಗೋಂಗ್ ಸರೋವರದ ದಡದ ಮೂಲಕ ಅಕ್ರಮವಾಗಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುವ ಚೀನ ಯೋಧರ ಪ್ರಯತ್ನವನ್ನು ಭಾರತದ ಯೋಧರು ವಿಫಲಗೊಳಿಸಿದ ಮರು ದಿನವೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ.
ಪ್ಯಾಂಗೋಂಗ್ ಸರೋವರದ ಮೂರನೇ ಒಂದು ಭಾಗ ಚೀನ ನೆಲದಲ್ಲಿದ್ದು, ಸರೋವರದ ದಡದ ಮೂಲಕ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಚೀನದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಸೈನಿಕರು ಮಂಗಳವಾರ ಎರಡು ಬಾರಿ ಯತ್ನಿಸಿದಾಗ ಭಾರತದ ಸೈನಿಕರು ಅವರನ್ನು ಹಿಮ್ಮೆಟ್ಟಿಸಿದ್ದರು. ಇದೇ ವೇಳೆ ಎರಡೂ ಕಡೆಯ ಸೈನಿಕರು ಪರಸ್ಪರ ಕಲ್ಲು ತೂರಾಟ ಕೂಡ ನಡೆಸಿದ್ದರಿಂದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಸಿನೋ-ಭಾರತ ಗಡಿಯಲ್ಲಿ ಶಾಂತಿ ಕಾಪಾಡುವುದು ಹಾಗೂ ಗಡಿ ನಿಯಂತ್ರಣ ರೇಖೆ ನಿಗದಿಗೆ ಸಂಬಂಧಿಸಿದಂತೆ ಚರ್ಚಿಸುವ ಉದ್ದೇಶದಿಂದ ಭಾರತ-ಚೀನ ಸೇನೆಯ ಅಧಿಕಾರಿಗಳು ಮಹತ್ವದ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಬ್ರಿಗೇಡಿಯರ್ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.
ನೇರ ಚರ್ಚೆಗೆ ಅಮೆರಿಕ ಸಲಹೆ: ಭಾರತ ಹಾಗೂ ಚೀನ ಒಟ್ಟಿಗೆ ಕುಳಿತು ನೇರವಾಗಿ ಮಾತುಕತೆ ನಡೆಸುವ ಮೂಲಕ ಗಡಿ ವಿವಾದವನ್ನು ಪರಿಹರಿಸಿಕೊಳ್ಳಬೇಕು ಎಂದು ಅಮೆರಿಕ ಸಲಹೆ ನೀಡಿದೆ. “ಎರಡೂ ದೇಶಗಳ ಮುಖಂಡರು ಒಂದೆಡೆ ಕುಳಿತು, ನೇರವಾಗಿ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಅಮೆರಿಕ ಬಯಸುತ್ತದೆ,’ ಎಂದು ವಿದೇಶಾಂಗ ಇಲಾಖೆಯ ವಕ್ತಾರರಾಗಿರುವ ಹೀದರ್ ನೌರ್ತ್ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?